ಬ್ರೇಕಿಂಗ್ ನ್ಯೂಸ್
15-12-23 07:31 pm HK News Desk ದೇಶ - ವಿದೇಶ
ಪಾಟ್ನಾ, ಡಿ 15: ವಿಚಾರಣಾಧೀನ ಕೈದಿಯೊಬ್ಬನನ್ನ ಕೋರ್ಟ್ ಆವರಣದಲ್ಲೇ ಗುಂಡಿಕ್ಕಿ ಕೊಂದಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.
ಪಾಟ್ನಾದ ದಾನಪುರ ಕೋರ್ಟ್ ಕ್ಯಾಂಪಸ್ನಲ್ಲಿ ಬೇರ್ ಜೈಲಿನಿಂದ ವಿಚಾರಣೆಗೆ ಕರೆತಂದಿದ್ದ ಕೈದಿಯನ್ನ ಪೊಲೀಸರ ಎದುರಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪ್ರಾಥಮಿಕ ಮಾಹಿತಿಯಲ್ಲಿ ಕೊಲೆಯಾದ ವ್ಯಕ್ತಿಯನ್ನ ಅಭಿಷೇಕ್ ಕುಮಾರ್ ಅಲಿಯಾಸ್ ಛೋಟೆ ಸರ್ಕಾರ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಛೋಟೆ ಸರ್ಕಾರ್ ಸಿಕಂದರ್ಪುರದ ನಿವಾಸಿಯಾಗಿದ್ದು ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದ. ಆತನನ್ನು ನಗರದ ಬೇರ್ ಜೈಲಿನಲ್ಲಿ ಇರಿಸಲಾಗಿದ್ದು, ಇಂದು ಕೋರ್ಟ್ಗೆ ಹಾಜರುಪರಿಸಲು ಕರೆತರಲಾಗುತ್ತಿತ್ತು. ವಿಚಾರಣಾಧೀನ ಕೈದಿಯಾಗಿದ್ದ ಛೋಟೆ ಸರ್ಕಾರ್ನನ್ನು ದಾನಪುರ ನ್ಯಾಯಾಲಯಕ್ಕೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಇಬ್ಬರು ದುಷ್ಕರ್ಮಿಗಳು ಆತನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ವಿಚಾರಣಾಧೀನ ಕೈದಿಯನ್ನ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನ ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಅವರನ್ನು ಯಾರು ಕಳುಹಿಸಿದ್ದಾರೆ, ಈ ಕೊಲೆಯ ಹಿಂದಿನ ಉದ್ದೇಶವೇನು ಅನ್ನೋ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಪಾಟ್ನಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ತಿಳಿಸಿದ್ದಾರೆ.
ದಾಳಿಕೋರರು ಮುಜಾಫರ್ಪುರದವರು ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಆರೋಪಿಗಳ ಬಳಿಯಿದ್ದ 4 ಬುಲೆಟ್ ಶೆಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದ್ರೆ ಎಷ್ಟು ಬುಲೆಟ್ಗಳನ್ನ ಹಾರಿಸಲಾಗಿದೆ ಎಂಬುದರ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.
An undertrial prisoner, Abhishek alias Chhote Sarkar, was shot and killed inside the premises of the Danapur civil court in Bihar’s Patna district on Friday, police said.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm