ಬ್ರೇಕಿಂಗ್ ನ್ಯೂಸ್
15-12-23 07:31 pm HK News Desk ದೇಶ - ವಿದೇಶ
ಪಾಟ್ನಾ, ಡಿ 15: ವಿಚಾರಣಾಧೀನ ಕೈದಿಯೊಬ್ಬನನ್ನ ಕೋರ್ಟ್ ಆವರಣದಲ್ಲೇ ಗುಂಡಿಕ್ಕಿ ಕೊಂದಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.
ಪಾಟ್ನಾದ ದಾನಪುರ ಕೋರ್ಟ್ ಕ್ಯಾಂಪಸ್ನಲ್ಲಿ ಬೇರ್ ಜೈಲಿನಿಂದ ವಿಚಾರಣೆಗೆ ಕರೆತಂದಿದ್ದ ಕೈದಿಯನ್ನ ಪೊಲೀಸರ ಎದುರಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪ್ರಾಥಮಿಕ ಮಾಹಿತಿಯಲ್ಲಿ ಕೊಲೆಯಾದ ವ್ಯಕ್ತಿಯನ್ನ ಅಭಿಷೇಕ್ ಕುಮಾರ್ ಅಲಿಯಾಸ್ ಛೋಟೆ ಸರ್ಕಾರ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಛೋಟೆ ಸರ್ಕಾರ್ ಸಿಕಂದರ್ಪುರದ ನಿವಾಸಿಯಾಗಿದ್ದು ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದ. ಆತನನ್ನು ನಗರದ ಬೇರ್ ಜೈಲಿನಲ್ಲಿ ಇರಿಸಲಾಗಿದ್ದು, ಇಂದು ಕೋರ್ಟ್ಗೆ ಹಾಜರುಪರಿಸಲು ಕರೆತರಲಾಗುತ್ತಿತ್ತು. ವಿಚಾರಣಾಧೀನ ಕೈದಿಯಾಗಿದ್ದ ಛೋಟೆ ಸರ್ಕಾರ್ನನ್ನು ದಾನಪುರ ನ್ಯಾಯಾಲಯಕ್ಕೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಇಬ್ಬರು ದುಷ್ಕರ್ಮಿಗಳು ಆತನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ವಿಚಾರಣಾಧೀನ ಕೈದಿಯನ್ನ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನ ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಅವರನ್ನು ಯಾರು ಕಳುಹಿಸಿದ್ದಾರೆ, ಈ ಕೊಲೆಯ ಹಿಂದಿನ ಉದ್ದೇಶವೇನು ಅನ್ನೋ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಪಾಟ್ನಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ತಿಳಿಸಿದ್ದಾರೆ.
ದಾಳಿಕೋರರು ಮುಜಾಫರ್ಪುರದವರು ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಆರೋಪಿಗಳ ಬಳಿಯಿದ್ದ 4 ಬುಲೆಟ್ ಶೆಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದ್ರೆ ಎಷ್ಟು ಬುಲೆಟ್ಗಳನ್ನ ಹಾರಿಸಲಾಗಿದೆ ಎಂಬುದರ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.
An undertrial prisoner, Abhishek alias Chhote Sarkar, was shot and killed inside the premises of the Danapur civil court in Bihar’s Patna district on Friday, police said.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm