ಬ್ರೇಕಿಂಗ್ ನ್ಯೂಸ್
18-11-20 12:48 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ನವೆಂಬರ್ 18: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಎದುರು ಸೋಲು ಅನುಭವಿಸಿರುವ ಡೊನಾಲ್ಡ್ ಟ್ರಂಪ್ , ಚುನಾವಣೆಯಲ್ಲಿ ಭಾರಿ ವಂಚನೆ ನಡೆದಿದೆ ಎಂಬ ಆರೋಪವನ್ನು ನಿರಾಕರಿಸಿದ್ದ ಹಿರಿಯ ಚುನಾವಣಾ ಭದ್ರತಾ ಅಧಿಕಾರಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ.
ನವೆಂಬರ್ 3ರಂದು ನಡೆದ ಚುನಾವಣೆಯು ಅಮೆರಿಕದ ಇತಿಹಾಸದಲ್ಲಿಯೇ ಅತ್ಯಂತ ಸುರಕ್ಷಿತ ಚುನಾವಣೆ ಎಂದು ಸರ್ಕಾರದ ಹಿರಿಯ ಚುನಾವಣಾ ಭದ್ರತಾ ಅಧಿಕಾರಿ ಕ್ರಿಸ್ ಕ್ರೆಬ್ಸ್ ಮತ್ತು ಅವರ ಸಂಸ್ಥೆ ಜಂಟಿಯಾಗಿ ಘೋಷಣೆ ಮಾಡಿತ್ತು. ಕ್ರಿಸ್ ಕ್ರೆಬ್ಸ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕೆಲಸದಿಂದ ಕಿತ್ತುಹಾಕಲಾಗಿದೆ ಎಂದು ಡೊನಾಲ್ಡ್ ಟ್ರಂಪ್ ಟ್ವಿಟ್ಟರ್ನಲ್ಲಿ ಪ್ರಕಟಿಸಿದ್ದಾರೆ.

ಜೋ ಬೈಡನ್ ಎದುರು ತಮ್ಮ ಸೋಲನ್ನು ಒಪ್ಪಿಕೊಳ್ಳಲು ನಿರಾಕರಿಸಿರುವ ಡೊನಾಲ್ಡ್ ಟ್ರಂಪ್, ಮತ ಎಣಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಪುರಾವೆರಹಿತ ಆರೋಪಗಳನ್ನು ಸತತವಾಗಿ ಮಾಡುತ್ತಿದ್ದಾರೆ.
'2020ರ ಚುನಾವಣೆಯ ಭದ್ರತೆ ಕುರಿತು ಕ್ರಿಸ್ ಕ್ರೆಬ್ಸ್ ಅವರ ಇತ್ತೀಚಿನ ಹೇಳಿಕೆ ತೀವ್ರ ಅಸಮರ್ಪಕವಾಗಿದೆ. ಚುನಾವಣೆಯಲ್ಲಿ ಭಾರಿ ಅಕ್ರಮಗಳು ಮತ್ತು ವಂಚನೆ ನಡೆದಿದೆ' ಎಂದು ಟ್ರಂಪ್ ಹೇಳಿದ್ದಾರೆ.
'ಹೀಗಾಗಿ ತಕ್ಷಣದಿಂದಲೇ ಜಾರಿಯಾಗುವಂತೆ ಕ್ರಿಸ್ ಕ್ರೆಬ್ಸ್ ಅವರನ್ನು ಸೈಬರ್ ಸೆಕ್ಯುರಿಟಿ ಮತ್ತು ಮೂಲಸೌಕರ್ಯ ಸೆಕ್ಯುರಿಟಿ ಸಂಸ್ಥೆಯ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಲಾಗಿದೆ' ಎಂದು ತಿಳಿಸಿದ್ದಾರೆ.
ಚುನಾವಣೆಯಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಹೇಳಿಕೊಂಡಿದ್ದ ಕ್ರಿಸ್ ಅವರು ತಮ್ಮನ್ನು ಕೆಲಸದಿಂದ ಕಿತ್ತುಹಾಕುವ ಸಾಧ್ಯತೆ ಇದೆ ಎಂದು ಕಳೆದ ವಾರವೇ ಸ್ನೇಹಿತರೊಂದಿಗೆ ಹೇಳಿಕೊಂಡಿದ್ದರು. 'ಸೇವೆ ಸಲ್ಲಿಸುವ ಗೌರವ ನನ್ನದಾಗಿದೆ. ನಾವು ಸರಿಯಾಗಿ ಕೆಲಸ ಮಾಡಿದ್ದೇವೆ. ಇಂದು ರಕ್ಷಿಸಿ ನಾಳೆಯನ್ನು ಭದ್ರಗೊಳಿಸಿದ್ದೇವೆ' ಎಂದು ಕ್ರಿಸ್ ಟ್ವೀಟ್ ಮಾಡಿದ್ದರು.
President Trump took to Twitter, as he does, to announce the termination of Christopher Krebs - who was responsible for online election security, especially blocking outside interference - after he refuted POTUS' claims of election fraud
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 09:03 pm
HK News Staffer
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm