ಬ್ರೇಕಿಂಗ್ ನ್ಯೂಸ್
20-12-23 01:11 pm HK News Desk ದೇಶ - ವಿದೇಶ
ಲಕ್ನೋ, ಡಿ.20: ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಹಿರಿಯರಾದ ಎಲ್.ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ ವಿಶ್ವ ಹಿಂದೂ ಪರಿಷತ್ ಅಧಿಕೃತ ಆಹ್ವಾನ ನೀಡಿದೆ.
ಸಾಕಷ್ಟು ಸ್ವಾಮೀಜಿಗಳಿಗೆ ಹಾಗೂ ಹಿರಿಯ ರಾಜಕಾರಣಿಗಳಿಗೆ ಆಹ್ವಾನ ನೀಡಿದ್ದರೂ ರಾಮಮಂದಿರಕ್ಕಾಗಿ ನಡೆಸಿದ್ದ ಆಂದೋಲನದಲ್ಲಿ ಮುಂಚೂಣಿಯಲ್ಲಿದ್ದ ಆಡ್ವಾಣಿ ಮತ್ತು ಜೋಶಿ ಇಬ್ಬರನ್ನು ವಯಸ್ಸಿನ ಕಾರಣ ಹೇಳಿ ದೂರ ಇರಿಸಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೆ ಇಬ್ಬರೂ ನಾಯಕರಿಗೆ ವಿಎಚ್ ಪಿ ಕಡೆಯಿಂದ ಆಹ್ವಾನ ನೀಡಲಾಗಿದೆ.

ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಭಾಗವಹಿಸಲು ಲಾಲ್ ಕೃಷ್ಣ ಆಡ್ವಾಣಿ ಮತ್ತು ರಾಮಮಂದಿರ ಚಳವಳಿಯ ಹರಿಕಾರ ಡಾ. ಮುರಳಿ ಮನೋಹರ ಜೋಶಿ ಅವರನ್ನು ಆಹ್ವಾನಿಸಲಾಗಿದೆ. ಇಬ್ಬರೂ ಹಿರಿಯರು ಭಾಗವಹಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ವಿಎಚ್ ಪಿ ಪ್ರಮುಖರಾದ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
ಅಡ್ವಾಣಿ (96) ಮತ್ತು ಮುರಳಿ ಮನೋಹರ್ ಜೋಷಿ (89) ಅವರ ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಮುಂದಿನ ತಿಂಗಳ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿಲ್ಲ. ಅವರ ವಯಸ್ಸನ್ನು ಪರಿಗಣಿಸಿ, ಅವರನ್ನು ಬರದಂತೆ ವಿನಂತಿಸಲಾಗಿದೆ, ಅದನ್ನು ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ದೇವಸ್ಥಾನದ ಟ್ರಸ್ಟಿ ಚಂಪತ್ ರಾಯ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ಭಾರೀ ಟೀಕೆ ಕೇಳಿಬರುತ್ತಿದ್ದಂತೆ ವಿಶ್ವ ಹಿಂದು ಪರಿಷತ್ ಆ ಇಬ್ಬರು ನಾಯಕರನ್ನು ರಾಮ ಮಂದಿರ ಉದ್ಘಾಟನೆಗೆ ಕರೆಸಲು ಮುಂದಾಗಿದೆ.
BJP veterans L K Advani and Murli Manohar Joshi were invited by the Vishva Hindu Parishad (VHP) to attend the consecration ceremony of the Ram Temple in Ayodhya next month. Both Advani and Joshi were at the forefront of the agitation for the Ram temple.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm