ಬ್ರೇಕಿಂಗ್ ನ್ಯೂಸ್
29-12-23 07:44 pm HK News Desk ದೇಶ - ವಿದೇಶ
ಲಕ್ನೋ, ಡಿ.29: ಮುಸ್ಲಿಂ ಮಹಿಳೆಯನ್ನು ಮದುವೆಯಾಗುವುದಕ್ಕಾಗಿ ಮತಾಂತರಗೊಂಡ ಆರೋಪ ಎದುರಿಸುತ್ತಿರುವ ತಹಸೀಲ್ದಾರ್ ಹುದ್ದೆಯಲ್ಲಿದ್ದ ಆಶಿಷ್ ಗುಪ್ತಾ ಎಂಬಾತನನ್ನು ಉತ್ತರ ಪ್ರದೇಶ ಸರಕಾರ ಸರ್ಕಾರಿ ಹುದ್ದೆಯಿಂದ ವಜಾ ಮಾಡಿದೆ.
ಉತ್ತರ ಪ್ರದೇಶದ ಮೌಧಾ ಜಿಲ್ಲೆಯಲ್ಲಿ ತಹಸೀಲ್ದಾರ್ ಆಗಿದ್ದ ಆಶಿಷ್ ಗುಪ್ತಾ ಎಂಬಾತ ಮುಸ್ಲಿಂ ಮಹಿಳೆಯನ್ನು ಮದುವೆಯಾಗಲು ತನ್ನ ಧರ್ಮವನ್ನೇ ಬದಲಿಸಿದ್ದು, ಮುಸ್ಲಿಂ ಆಗಿ ಮತಾಂತರಗೊಂಡಿದ್ದ. ಅಲ್ಲದೆ, ತನ್ನ ಹೆಸರನ್ನು ಮೊಹಮ್ಮದ್ ಯೂಸುಫ್ ಎಂದು ಬದಲಿಸಿಕೊಂಡಿದ್ದ. ಆಮೂಲಕ ಸರ್ಕಾರಿ ಸೇವೆಯಲ್ಲಿದ್ದು ಸೇವಾ ನಿಮಯಗಳನ್ನು ಉಲ್ಲಂಘಿಸಿದ್ದಾಗಿ ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿತ್ತು. ಹೀಗಾಗಿ ಜಿಲ್ಲಾಧಿಕಾರಿ ಅರುಣ್ ಮಿಶ್ರಾ ಅವರು ಆಶಿಷ್ ಗುಪ್ತಾನನ್ನು ತಹಸೀಲ್ದಾರ್ ಹುದ್ದೆಯಿಂದ ತೆರವುಗೊಳಿಸಿದ್ದಾರೆ.
ಕಳೆದ ಸೆಪ್ಟಂಬರ್ ತಿಂಗಳಲ್ಲಿ ತಹಸೀಲ್ದಾರ್ ಆಶಿಷ್ ಗುಪ್ತಾ ಬಗ್ಗೆ ಆರೋಪ ಕೇಳಿಬಂದಿತ್ತು. ಮೊಹಮ್ಮದ್ ಯೂಸುಫ್ ಹೆಸರಲ್ಲಿ ಈ ವ್ಯಕ್ತಿ ಅಲ್ಲಿನ ಮಸೀದಿಗೆ ತೆರಳುತ್ತಿದ್ದುದನ್ನು ಅಲ್ಲಿನವರು ವಿರೋಧಿಸಿದ್ದರು. ಮುಸ್ಲಿಂ ಅಲ್ಲದ ವ್ಯಕ್ತಿ ಮಸೀದಿಗೆ ಬಂದು ಪ್ರಾರ್ಥನೆ ಮಾಡುತ್ತಿದ್ದಾನೆಂದು ಮಸೀದಿ ಸದಸ್ಯ ಮೊಹಮ್ಮದ್ ಆಶಿಕ್, ಪೊಲೀಸ್ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದ ವೇಳೆಯೇ ಆಶಿಷ್ ಗುಪ್ತಾನ ಅಸಲಿ ಪತ್ನಿ ಆರತಿ ಪೊಲೀಸ್ ದೂರು ನೀಡಿದ್ದು ತನ್ನ ಪತಿ ಮತಾಂತರಗೊಂಡ ಬಗ್ಗೆ ಆರೋಪಿಸಿದ್ದಾಳೆ. ಅಲ್ಲದೆ, ತನ್ನ ಪತಿಗೆ ಮುಸ್ಲಿಂ ಮಹಿಳೆಯರೊಂದಿಗೆ ಸಂಬಂಧ ಇದೆ. ತನ್ನ ಪತಿಯನ್ನು ಬಲವಂತದಿಂದ ಮತಾಂತರ ಮಾಡಿದ್ದಾರೆಂದು ದೂರು ನೀಡಿದ್ದಳು.
ಅಲ್ಲದೆ, ಇತರ ಮೂವರು ಆರೋಪಿಗಳ ಬಗ್ಗೆಯೂ ಆರತಿ ದೂರಿನಲ್ಲಿ ಹೇಳಿದ್ದು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆಶಿಷ್ ಗುಪ್ತಾನ ಜೊತೆಗೆ ಸಂಪರ್ಕ ಹೊಂದಿದ್ದ ಮುಸ್ಲಿಂ ಮಹಿಳೆಯರನ್ನು ವಶಕ್ಕೆ ಪಡೆಯುವುದಕ್ಕಾಗಿ ಪೊಲೀಸರು ಹಲವು ಕಡೆ ದಾಳಿ ನಡೆಸಿದ್ದಾರೆ.
The wife of a revenue official has filed a police complaint alleging that her husband, Ashish Gupta, converted to Islam, changed his name to Mohammad Yusuf, and married a Muslim woman in the southern Uttar Pradesh town of Maudaha.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm