ಬ್ರೇಕಿಂಗ್ ನ್ಯೂಸ್
03-01-24 01:40 pm HK News Desk ದೇಶ - ವಿದೇಶ
ಕಾಬೂಲ್, ಜ 03: ಜಪಾನ್ನಲ್ಲಿ ಪ್ರಬಲ ಭೂಕಂಪನಕ್ಕೆ ಸುನಾಮಿ ಉಂಟಾಗಿ 50 ಕ್ಕೂ ಅಧಿಕ ಜನರು ಸಾವಿಗೀಡಾದ ಘಟನೆ ಬೆನ್ನಲ್ಲೇ, ಭಾರತದ ಕೆಲ ಭಾಗ ಮತ್ತು ಅಫ್ಘಾನಿಸ್ತಾನದಲ್ಲಿ ಕೂಡ ಭೂಮಿ ನಡುಗಿದೆ. ಕಡಿಮೆ ತೀವ್ರತೆಯ ಕಂಪನಗಳು ಕಂಡುಬಂದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಮಂಗಳವಾರ ರಾತ್ರಿ 10.35 ನಿಮಿಷಕ್ಕೆ ಪಶ್ಚಿಮ ಬಂಗಾಳದ ಅಲಿಪುರ್ದೂರ್ ಜಿಲ್ಲೆಯಲ್ಲಿ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್ಎಸ್ಸಿ) ತಿಳಿಸಿದೆ. ಭೂಕಂಪವು ರಾತ್ರಿ ವೇಳೆ ಆಗಿದ್ದು, 5 ಕಿಮೀ ಆಳದಲ್ಲಿ ಕಂಪನದ ಅಲೆಗಳು ಎದ್ದಿವೆ. ಯಾವುದೇ ದೊಡ್ಡ ಪ್ರಮಾಣದಲ್ಲಿ ಸಂಭವಿಸಿಲ್ಲ. ಭೂಮಿ ನಡುಗಿದಾಗ ಜನರು ಮನೆಯಿಂದ ಹೊರಬಂದಿದ್ದಾರೆ ಎಂದು ತಿಳಿದುಬಂದಿದೆ.
ಇತ್ತ ಮಣಿಪುರದಲ್ಲೂ ಭೂಮಿ ನಡುಗಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಭೂಕಂಪವು ಉಖ್ರುಲ್ ಪ್ರದೇಶದಲ್ಲಿ ಮಧ್ಯರಾತ್ರಿ 12.01 ನಿಮಿಷಕ್ಕೆ ಸಂಭವಿಸಿದೆ. ಜನರು ನಿದ್ರೆಯಲ್ಲಿದ್ದಾಗ ದಿಢೀರ್ ಭೂಮಿ ಅಲುಗಾಡಿದೆ. ಇದರಿಂದ ಗಾಬರಿಯಾದ ಜನರು ಕೆಲಕಾಲ ಆತಂಕಕ್ಕೀಡಾಗಿದ್ದರು. ಮನೆಯಲ್ಲಿ ಪಾತ್ರೆಗಳು ನೆಲಕ್ಕುರುಳಿ ಬಿದ್ದಿವೆ. ಹಠಾತ್ ನಡುಕದಿಂದ ಜನರು ನಿದ್ದೆಗೆಡುವಂತಾಗಿದೆ. ಉಕ್ರುಲ್ ಪ್ರದೇಶದ ಸುತ್ತಲ್ಲೂ ಬುಧವಾರ ಮಧ್ಯರಾತ್ರಿ 26 ಕಿ.ಮೀ ಆಳದಲ್ಲಿ ಕಂಪನದ ಅಲೆಗಳು ಕಂಡುಬಂದಿವೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಅಫ್ಘಾನಿಸ್ತಾನದ ಫೈಜಾಬಾದ್ನಲ್ಲಿ ಬುಧವಾರ ಅರ್ಧಗಂಟೆ ಅಂತರದಲ್ಲಿ ಎರಡು ಭೂಕಂಪಗಳು ಸಂಭವಿಸಿವೆ. ಮೊದಲು ನಗರದಿಂದ 126 ದೂರದ ಪ್ರದೇಶದಲ್ಲಿ 4.4 ತೀವ್ರತೆಯಲ್ಲಿ ಭೂಮಿ ನಡುಗಿದೆ. ಭೂಮಿಯ 80 ಕಿಮೀ ಆಳದಲ್ಲಿ ಅದರ ಕಂಪನಗಳು ಸೃಷ್ಟಿಯಾಗಿವೆ. ಇದು ಮಧ್ಯರಾತ್ರಿ 12.28 ರ ಸುಮಾರಿನಲ್ಲಿ ಜರುಗಿದೆ. ಇದಾದ ಅರ್ಧಗಂಟೆಯ ಅಂತರದಲ್ಲಿ ಫೈಜಾಬಾದ್ನ 100 ದೂರ ಪ್ರದೇಶದಲ್ಲಿ 12.55 ನಿಮಿಷಕ್ಕೆ ಮತ್ತೊಂದು ಕಂಪನ ಉಂಟಾಗಿದೆ.
4.8 ತೀವ್ರತೆ ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ. ಈ ಬಾರಿ ಇದು 100 ಕಿಮೀ ಆಳದಲ್ಲಿ ಕಂಡುಬಂದಿದೆ. ಕಡಿಮೆ ಸಮಯದಲ್ಲಿ ಎರಡು ಲಘು ಕಂಪನಗಳು ಉಂಟಾಗಿದ್ದು, ಜನರನ್ನು ತೀವ್ರ ಆತಂಕಕ್ಕೆ ತಳ್ಳಿದ್ದವು. ಸದ್ಯಕ್ಕೆ ಯಾವುದೇ ಹಾನಿಯ ಬಗ್ಗೆ ವರದಿಗಳು ಬಂದಿಲ್ಲ ಅಫ್ಘಾನಿಸ್ತಾನದ ಭೂಕಂಪನಶಾಸ್ತ್ರ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
Two earthquakes of magnitude jolted Afghanistan's Fayzabad on Wednesday, the National Centre for Seismology (NCS) reported. The first quake took place at 00:28:52 IST at a depth of 80 km, 126km E of Fayzabad.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm