ಬ್ರೇಕಿಂಗ್ ನ್ಯೂಸ್
07-01-24 08:48 pm HK News Desk ದೇಶ - ವಿದೇಶ
ನವದೆಹಲಿ, ಜ 07: ಪ್ರಧಾನಿ ಮೋದಿ ಇತ್ತೀಚಿಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದನ್ನು ಅಣಕಿಸಿ ಮಾಲ್ಡೀವ್ಸ್ ಸಚಿವರು ಮತ್ತು ರಾಜಕಾರಣಿಗಳು ನೀಡಿರುವ ವಿವಾದಾತ್ಮಕ ಹೇಳಿಕೆಗಳು ಆಕ್ರೋಶಕ್ಕೆ ಕಾರಣವಾಗಿವೆ. ಈ ವಿಷಯವನ್ನು ಭಾರತೀಯ ರಾಯಭಾರಿ ಖಂಡಿಸಿದ ಬೆನ್ನಲ್ಲೇ ಮೂವರು ಸಚಿವರನ್ನು ಮಾಲ್ಡೀವ್ಸ್ ಸರ್ಕಾರ ಅಮಾನತುಗೊಳಿಸಿದೆ. ಸಚಿವರಾದ ಮರಿಯಮ್ ಶಿಯುನಾ, ಮಲ್ಶಾ ಶರೀಫ್ ಮತ್ತು ಮಹಜೂಮ್ ಮಜೀದ್ ಅವರ ತಲೆದಂಡವಾಗಿದೆ.
ನೆರೆಯ ಭಾರತವನ್ನು ಅವಮಾನಿಸುವ ಸಾಮಾಜಿಕ ಮಾಧ್ಯಮಗಳ ಕೆಲವು ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರದ ನಿಲುವಿನ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ಹೇಳಿಕೆಯನ್ನು ನೀಡಿದೆ ಎಂದು ಮಾಲ್ಡೀವ್ಸ್ ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಸರ್ಕಾರಿ ಹುದ್ದೆಗಳಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಪೋಸ್ಟ್ ಮಾಡಿದವರನ್ನು ಈಗ ಅಮಾನತುಗೊಳಿಸಲಾಗಿದೆ ಎಂದು ಮಾಲ್ಡೀವ್ಸ್ ಸರ್ಕಾರ ಹೇಳಿದೆ.
ಸಚಿವೆ ಮರಿಯಮ್ ಶಿಯುನಾ ತಮ್ಮ ಟ್ವೀಟ್ನಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪದ ಬಳಸಿದ್ದರು. ಇದು ಟೀಕೆ, ಆಕ್ರೋಶ ಹಾಗೂ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಶಿಯುನಾ ತಮ್ಮ ಪೋಸ್ಟ್ಅನ್ನು ಒಂದೆರಡು ಗಂಟೆಗಳಲ್ಲೇ ಡೀಲಿಟ್ ಮಾಡಿದ್ದರು. ಆದರೆ, ಇದು ಅಷ್ಟೊತ್ತಿಗೆ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಸಂಬಂಧಗಳನ್ನು ಹದಗೆಡಿಸಿತ್ತು.
ಮಾಲ್ಡೀವ್ಸ್ನ ಭದ್ರತೆ ಮತ್ತು ಸಮೃದ್ಧಿಗೆ ಸಹಕಾರಿಯಾದ ಪ್ರಮುಖ ಮಿತ್ರ ನಾಯಕನ ಬಗ್ಗೆ ಮಾಲ್ಡೀವ್ಸ್ ಸರ್ಕಾರದ ಶಿಯುನಾ ಎಂತಹ ಭಯಾನಕ ಭಾಷೆ ಇದು. ಮುಯಿಝು ಈ ಹೇಳಿಕೆಗಳಿಂದ ದೂರವಿರಬೇಕು. ಇದು ಸರ್ಕಾರದ ನೀತಿಯನ್ನು ಪ್ರತಿಬಿಂಬಿಸುವುದಿಲ್ಲ ಎಂದು ಮತ್ತು ಭಾರತಕ್ಕೆ ಸ್ಪಷ್ಟ ಭರವಸೆ ನೀಡಬೇಕು'' ಎಂದು ನಶೀದ್ 'ಏಕ್ಸ್' ಪೋಸ್ಟ್ನಲ್ಲಿ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರಿಗೆ ಸಲಹೆ ನೀಡಿದ್ದಾರೆ.
ಇದೇ ವೇಳೆ, ''ಸಚಿವರ ಅವಹೇಳನಕಾರಿ ಹೇಳಿಕೆಗಳು ಖಂಡನೀಯ ಮತ್ತು ಅಸಹ್ಯಕರ'' ಎಂದು ಮಾಲ್ಡೀವ್ಸ್ ಮಾಜಿ ವಿದೇಶಾಂಗ ಸಚಿವ ಅಬ್ದುಲ್ಲಾ ಶಾಹಿದ್ ಸಹ ಅಸಮಾಧಾನ ಹೊರಹಾಕಿದ್ದಾರೆ. ತಮ್ಮ ಸಚಿವರ ಬಗ್ಗೆ ಸ್ವದೇಶಿ ನಾಯಕರಿಂದಲೇ ಖಂಡನೆ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ.
India has raised with the Maldives government the derogatory remarks against Prime Minister Narendra Modi by a minister of the island nation following a row that erupted after Maldivian politicians mocked the Prime Minister's Lakshadweep visit.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm