ಬ್ರೇಕಿಂಗ್ ನ್ಯೂಸ್
11-01-24 03:34 pm HK News Desk ದೇಶ - ವಿದೇಶ
ಅಯೋಧ್ಯೆ, ಜ.11: ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಅವರು ಜನವರಿ 22ರಂದು ನಡೆಯುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದು ಪರಿಷತ್ ಹೇಳಿಕೆ ನೀಡಿದೆ. ರಾಮಜನ್ಮಭೂಮಿ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಎಲ್.ಕೆ. ಆಡ್ವಾಣಿ ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಎಚ್ ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
96 ವರ್ಷದ ಆಡ್ವಾಣಿ ಮತ್ತು 89 ವರ್ಷದ ಮುರಳಿ ಮನೋಹರ ಜೋಷಿ ಅವರನ್ನು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಆಹ್ವಾನಿಸಲಾಗಿತ್ತು. ಆದರೆ ಅವರನ್ನು ವಯಸ್ಸಿನ ಕಾರಣದಿಂದ ಬಾರದೇ ಇರಲು ಮನವೊಲಿಸಲಾಗಿದೆ ಎಂದು ಈ ಹಿಂದೆ ಹೇಳಿದ್ದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಆನಂತರ, ವಿಶ್ವ ಹಿಂದು ಪರಿಷತ್ ಮುಖಂಡರು ಅವರನ್ನು ಕರೆತರಲು ಪ್ರಯತ್ನ ನಡೆಸಲಾಗುವುದು ಎಂದು ಸ್ಪಷ್ಟನೆ ನೀಡಿದ್ದರು.
ಇದೀಗ ಅವರನ್ನು ಕರೆತರಲು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ವೈದ್ಯಕೀಯ ಸೌಲಭ್ಯಗಳನ್ನೂ ಮಾಡಲಾಗಿದೆ ಎಂದು ಅಲೋಕ್ ಕುಮಾರ್ ಅಯೋಧ್ಯೆಯಲ್ಲಿ ತಿಳಿಸಿದ್ದಾರೆ. ದೇಶಾದ್ಯಂತ ಸಾವಿರಾರು ಸಾಧು ಸಂತರನ್ನು ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ಆಹ್ವಾನಿಸಲಾಗಿದೆ. ಜ.16ರಂದು ಏಳು ದಿನಗಳ ಪೂಜಾ ವಿಧಿಗಳು ಆರಂಭಗೊಳ್ಳಲಿದ್ದು ಜ.22ರಂದು ರಾಮನ ವಿಗ್ರಹದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ.
Veteran BJP leader LK Advani will be attending the consecration ceremony of the Ram Temple in Ayodhya on January 22, news agency ANI quoted a Vishva Hindu Parishad leader as saying.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm