ಬ್ರೇಕಿಂಗ್ ನ್ಯೂಸ್
11-01-24 05:09 pm HK News Desk ದೇಶ - ವಿದೇಶ
ಅಯೋಧ್ಯೆ, ಜ.11: ರಾಮ ಮಂದಿರದಲ್ಲಿ ಜ.22ರಂದು ರಾಮಲಲ್ಲಾ ವಿರಾಜಮಾನರಾಗಲಿದ್ದಾರೆ. ಕಟ್ಟಡ ಅಪೂರ್ಣ ಆಗಿದ್ದರೂ, ರಾಮನ ವಿಗ್ರಹ ಪ್ರತಿಷ್ಠೆಗೈದು ದೇವಸ್ಥಾನ ಲೋಕಾರ್ಪಣೆ ಮಾಡಲು ಸಿದ್ಧತೆ ನಡೆದಿದೆ. ಮೊದಲ ಮಹಡಿ ಸಂಪೂರ್ಣ ಸಿದ್ಧವಾಗಿದ್ದು, ಅದರಲ್ಲಿ ರಾಮಲಲ್ಲಾ ವಿಗ್ರಹವನ್ನು ಸ್ಥಾಪಿಸಲಾಗುವುದು. ಈ ನಡುವೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಾಮಮಂದಿರಕ್ಕಾಗಿ ದೇಶ- ವಿದೇಶದ ರಾಮನ ಭಕ್ತರಿಂದ 5,500 ಕೋಟಿ ರೂ.ಗೂ ಹೆಚ್ಚು ದೇಣಿಗೆ ಪಡೆದಿರುವ ಬಗ್ಗೆ ಮಾಹಿತಿ ನೀಡಿದೆ.
ದೇಣಿಗೆ ನೀಡಿರುವವರಲ್ಲಿ ಗುಜರಾತಿಗಳೇ ಮುಂಚೂಣಿಯಲ್ಲಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ಗುಜರಾತ್ನ ಇಬ್ಬರು ಉದ್ಯಮಿಗಳು ಗರಿಷ್ಠ ದೇಣಿಗೆ ನೀಡಿದ್ದಾರೆ. ಅತಿ ಹೆಚ್ಚು ದೇಣಿಗೆ ನೀಡಿದವರ ಪಟ್ಟಿಯಲ್ಲಿ ಮೊರಾರಿ ಬಾಪು ಹೆಸರು ಅಗ್ರಸ್ಥಾನದಲ್ಲಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವೆಬ್ಸೈಟ್ ಮಾಹಿತಿ ಪ್ರಕಾರ, ಮೊರಾರಿ ಬಾಪು ಅವರು ರಾಮ ಮಂದಿರಕ್ಕಾಗಿ 11.3 ಕೋಟಿ ರೂ. ದೇಣಿಗೆ ಕೊಟ್ಟಿದ್ದಾರೆ.
ಮೊರಾರಿ ಬಾಪು ಗುಜರಾತ್ನ ಭಾವನಗರದಲ್ಲಿ ನೆಲೆಸಿದ್ದು ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದಾರೆ. ಅವರಿಂದ ಸ್ಫೂರ್ತಿ ಪಡೆದ ಅಮೆರಿಕ, ಕೆನಡಾ ಮತ್ತು ಬ್ರಿಟನ್ನಲ್ಲಿರುವ ಅವರ ಅಭಿಮಾನಿಗಳು ಪ್ರತ್ಯೇಕವಾಗಿ ಒಟ್ಟು 8 ಕೋಟಿ ರೂ. ದೇಣಿಗೆ ಕೊಟ್ಟಿದ್ದಾರೆ.
ಇದಲ್ಲದೆ, ಎರಡನೇ ಅತಿ ಹೆಚ್ಚು ದೇಣಿಗೆ ನೀಡಿದವರೂ ಗುಜರಾತಿನವರೇ ಆಗಿದ್ದಾರೆ. ಗುಜರಾತ್ನ ವಜ್ರದ ಉದ್ಯಮಿ ಗೋವಿಂದಭಾಯ್ ಧೋಲಾಕಿಯಾ ಅವರು ರಾಮಮಂದಿರ ನಿರ್ಮಾಣಕ್ಕೆ 11 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಧೋಲಾಕಿಯಾ ಅವರು ಸೂರತ್ ಸೇರಿದಂತೆ ಹಲವೆಡೆ ಶ್ರೀರಾಮಕೃಷ್ಣ ಎಕ್ಸ್ಪೋರ್ಟ್ಸ್ ಹೆಸರಲ್ಲಿ ವಜ್ರದ ಕಂಪನಿ ಹೊಂದಿದ್ದಾರೆ. ಇವರು ಪ್ರತಿ ವರ್ಷವೂ ದೀಪಾವಳಿ ಸಮಯದಲ್ಲಿ ತಮ್ಮ ನೂರಾರು ಉದ್ಯೋಗಿಗಳಿಗೆ ಮತ್ತು ಅವರ ಕುಟುಂಬಗಳಿಗೆ ದುಬಾರಿ ಉಡುಗೊರೆಗಳನ್ನು ನೀಡುತ್ತಿದ್ದು ಹೆಸರು ಗಳಿಸಿದವರು.
Ram Lalla will be immersed in the ram temple on January 22. Though the building is incomplete, preparations are on to dedicate the temple by installing an idol of Lord Ram. The first floor is fully ready and an idol of Ram Lalla will be installed in it. Meanwhile, the Shri Ram Janmabhoomi Teerth Kshetra Trust has received donations of over Rs 5,500 crore from devotees of Lord Ram in the country and abroad for the Ram temple.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm