ಬ್ರೇಕಿಂಗ್ ನ್ಯೂಸ್
11-01-24 05:09 pm HK News Desk ದೇಶ - ವಿದೇಶ
ಅಯೋಧ್ಯೆ, ಜ.11: ರಾಮ ಮಂದಿರದಲ್ಲಿ ಜ.22ರಂದು ರಾಮಲಲ್ಲಾ ವಿರಾಜಮಾನರಾಗಲಿದ್ದಾರೆ. ಕಟ್ಟಡ ಅಪೂರ್ಣ ಆಗಿದ್ದರೂ, ರಾಮನ ವಿಗ್ರಹ ಪ್ರತಿಷ್ಠೆಗೈದು ದೇವಸ್ಥಾನ ಲೋಕಾರ್ಪಣೆ ಮಾಡಲು ಸಿದ್ಧತೆ ನಡೆದಿದೆ. ಮೊದಲ ಮಹಡಿ ಸಂಪೂರ್ಣ ಸಿದ್ಧವಾಗಿದ್ದು, ಅದರಲ್ಲಿ ರಾಮಲಲ್ಲಾ ವಿಗ್ರಹವನ್ನು ಸ್ಥಾಪಿಸಲಾಗುವುದು. ಈ ನಡುವೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಾಮಮಂದಿರಕ್ಕಾಗಿ ದೇಶ- ವಿದೇಶದ ರಾಮನ ಭಕ್ತರಿಂದ 5,500 ಕೋಟಿ ರೂ.ಗೂ ಹೆಚ್ಚು ದೇಣಿಗೆ ಪಡೆದಿರುವ ಬಗ್ಗೆ ಮಾಹಿತಿ ನೀಡಿದೆ.
ದೇಣಿಗೆ ನೀಡಿರುವವರಲ್ಲಿ ಗುಜರಾತಿಗಳೇ ಮುಂಚೂಣಿಯಲ್ಲಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ಗುಜರಾತ್ನ ಇಬ್ಬರು ಉದ್ಯಮಿಗಳು ಗರಿಷ್ಠ ದೇಣಿಗೆ ನೀಡಿದ್ದಾರೆ. ಅತಿ ಹೆಚ್ಚು ದೇಣಿಗೆ ನೀಡಿದವರ ಪಟ್ಟಿಯಲ್ಲಿ ಮೊರಾರಿ ಬಾಪು ಹೆಸರು ಅಗ್ರಸ್ಥಾನದಲ್ಲಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವೆಬ್ಸೈಟ್ ಮಾಹಿತಿ ಪ್ರಕಾರ, ಮೊರಾರಿ ಬಾಪು ಅವರು ರಾಮ ಮಂದಿರಕ್ಕಾಗಿ 11.3 ಕೋಟಿ ರೂ. ದೇಣಿಗೆ ಕೊಟ್ಟಿದ್ದಾರೆ.
ಮೊರಾರಿ ಬಾಪು ಗುಜರಾತ್ನ ಭಾವನಗರದಲ್ಲಿ ನೆಲೆಸಿದ್ದು ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದಾರೆ. ಅವರಿಂದ ಸ್ಫೂರ್ತಿ ಪಡೆದ ಅಮೆರಿಕ, ಕೆನಡಾ ಮತ್ತು ಬ್ರಿಟನ್ನಲ್ಲಿರುವ ಅವರ ಅಭಿಮಾನಿಗಳು ಪ್ರತ್ಯೇಕವಾಗಿ ಒಟ್ಟು 8 ಕೋಟಿ ರೂ. ದೇಣಿಗೆ ಕೊಟ್ಟಿದ್ದಾರೆ.
ಇದಲ್ಲದೆ, ಎರಡನೇ ಅತಿ ಹೆಚ್ಚು ದೇಣಿಗೆ ನೀಡಿದವರೂ ಗುಜರಾತಿನವರೇ ಆಗಿದ್ದಾರೆ. ಗುಜರಾತ್ನ ವಜ್ರದ ಉದ್ಯಮಿ ಗೋವಿಂದಭಾಯ್ ಧೋಲಾಕಿಯಾ ಅವರು ರಾಮಮಂದಿರ ನಿರ್ಮಾಣಕ್ಕೆ 11 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಧೋಲಾಕಿಯಾ ಅವರು ಸೂರತ್ ಸೇರಿದಂತೆ ಹಲವೆಡೆ ಶ್ರೀರಾಮಕೃಷ್ಣ ಎಕ್ಸ್ಪೋರ್ಟ್ಸ್ ಹೆಸರಲ್ಲಿ ವಜ್ರದ ಕಂಪನಿ ಹೊಂದಿದ್ದಾರೆ. ಇವರು ಪ್ರತಿ ವರ್ಷವೂ ದೀಪಾವಳಿ ಸಮಯದಲ್ಲಿ ತಮ್ಮ ನೂರಾರು ಉದ್ಯೋಗಿಗಳಿಗೆ ಮತ್ತು ಅವರ ಕುಟುಂಬಗಳಿಗೆ ದುಬಾರಿ ಉಡುಗೊರೆಗಳನ್ನು ನೀಡುತ್ತಿದ್ದು ಹೆಸರು ಗಳಿಸಿದವರು.
Ram Lalla will be immersed in the ram temple on January 22. Though the building is incomplete, preparations are on to dedicate the temple by installing an idol of Lord Ram. The first floor is fully ready and an idol of Ram Lalla will be installed in it. Meanwhile, the Shri Ram Janmabhoomi Teerth Kshetra Trust has received donations of over Rs 5,500 crore from devotees of Lord Ram in the country and abroad for the Ram temple.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm