ಬ್ರೇಕಿಂಗ್ ನ್ಯೂಸ್
11-01-24 09:03 pm HK News Desk ದೇಶ - ವಿದೇಶ
ಮುಂಬೈ, ಜ.11: ಇತ್ತ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದರೆ, ಇತ್ತೀಚೆಗೆ ಬಿಡುಗಡೆಯಾದ 'ಅನ್ನಪೂರ್ಣಿ' ಸಿನಿಮಾದಲ್ಲಿ ರಾಮನನ್ನೇ ಅಣಕಿಸಿ ಚಿತ್ರೀಕರಿಸಿದ ಆರೋಪ ಕೇಳಿಬಂದಿದ್ದು ಭಾರೀ ವಿವಾದಕ್ಕೆ ತುತ್ತಾಗಿದೆ. ಚಿತ್ರದಲ್ಲಿ ಹಿಂದು ಭಾವನೆಗೆ ಧಕ್ಕೆ ತರಲಾಗಿದೆ ಎಂದು ಹಿಂದು ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ದೂರುಗಳನ್ನು ನೀಡಿದ್ದಾರೆ.
ಚಿತ್ರದಲ್ಲಿ ರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಲಾಗಿದ್ದು, ಲವ್ ಜಿಹಾದ್ ಅನ್ನು ಉತ್ತೇಜಿಸುತ್ತದೆ ಎಂದು ಆರೋಪಿಸಲಾಗಿದೆ. 'ಅನ್ನಪೂರ್ಣಿ' ಸಿನಿಮಾ ಇತ್ತೀಚೆಗಷ್ಟೇ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿತ್ತು. ವಿವಾದ ಕೇಳಿಬಂದ ಬೆನ್ನಲ್ಲೇ ನೆಟ್ ಫ್ಲಿಕ್ಸ್ ನಿಂದ ಚಿತ್ರವನ್ನು ತೆಗೆದು ಹಾಕಲಾಗಿದೆ. ವಿವಾದ ಕುರಿತಾಗಿ ಝೀ ಸ್ಟುಡಿಯೋ ಕ್ಷಮೆ ಕೇಳಿ ಹೇಳಿಕೆ ಬಿಡುಗಡೆ ಮಾಡಿದ್ದು ವಿವಾದಿತ ದೃಶ್ಯಗಳನ್ನು ತೆಗೆದುಹಾಕದೆ ಚಿತ್ರವನ್ನು ನೆಟ್ ಫ್ಲಿಕ್ಸ್ ನಲ್ಲಿ ಪ್ರಸಾರ ಮಾಡುವುದಿಲ್ಲ ಎಂದು ಹೇಳಿದೆ.
ಹಿಂದೂ ಐಟಿ ಸೆಲ್ ಸಂಸ್ಥಾಪಕ ರಮೇಶ್ ಸೋಲಂಕಿ ಅವರು ದಕ್ಷಿಣ ಮುಂಬೈನ ಲೋಕಮಾನ್ಯ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದ್ದಾರೆ. ಅವರ ದೂರಿನ ಪ್ರಕಾರ, 'ಅನ್ನಪೂರ್ಣಿ' ಚಿತ್ರವು ಭಗವಾನ್ ರಾಮನನ್ನು ಅವಮಾನಿಸುತ್ತದೆ ಮತ್ತು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಉದ್ದೇಶಪೂರ್ವಕವಾಗಿ ಬಿಡುಗಡೆ ಮಾಡಲಾಗಿದೆ ಎಂದು ದೂರಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಸಿನಿಮಾದ ಕೆಲವು ದೃಶ್ಯಗಳನ್ನೂ ಸೋಲಂಕಿ ಉಲ್ಲೇಖಿಸಿದ್ದಾರೆ.
ಚಿತ್ರದಲ್ಲಿ ದೇವಸ್ಥಾನದ ಅರ್ಚಕರ ಮಗಳಾಗಿರುವ ನಯನತಾರಾ ಅವರು ಬಿರಿಯಾನಿ ಮಾಡುವ ಮುನ್ನ 'ಹಿಜಾಬ್' ಧರಿಸಿ ನಮಾಜ್ ಮಾಡುವುದನ್ನು ತೋರಿಸುತ್ತದೆ. ಮತ್ತೊಂದು ದೃಶ್ಯದಲ್ಲಿ, ನಯನತಾರಾ ಪಾತ್ರದ ಸ್ನೇಹಿತ ಫರ್ಹಾನ್, ಮಾಂಸವನ್ನು ಕತ್ತರಿಸಲು ಆಕೆಯ ಬ್ರೈನ್ ವಾಶ್ ಮಾಡುತ್ತಾನೆ ಮತ್ತು ಭಗವಾನ್ ಶ್ರೀರಾಮ ಮತ್ತು ಸೀತೆ ಕೂಡ ಮಾಂಸ ಸೇವಿಸಿದ್ದಾರೆ ಎಂದು ಹೇಳುತ್ತಾರೆ. ಅಲ್ಲದೆ, ನಯನತಾರಾ ಪಾತ್ರ ದೇವಸ್ಥಾನಕ್ಕೆ ಹೋಗದೆ, ಫರ್ಹಾನ್ನ ಜಾಗಕ್ಕೆ 'ಇಫ್ತಾರಿ'ಗೆ ಹೋಗುವ ದೃಶ್ಯವನ್ನು ಉಲ್ಲೇಖಿಸಿ ದೂರಿನಲ್ಲಿ ಆಕ್ಷೇಪಿಸಿದ್ದಾರೆ.
A police case has been filed against actor Nayanthara for allegedly hurting religious sentiments of Hindus, disrespecting Lord Ram and promoting 'love jihad' through the film 'Annapoorani'. The case was filed by a right-wing outfit in Madhya Pradesh.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm