ಬ್ರೇಕಿಂಗ್ ನ್ಯೂಸ್
11-01-24 10:43 pm HK News Desk ದೇಶ - ವಿದೇಶ
ನವದೆಹಲಿ, ಜ.11: ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಅಪೂರ್ಣವಾಗಿರುವ ಮಂದಿರದಲ್ಲಿ ರಾಮನ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆ ಮಾಡುವುದು ಶಾಸ್ತ್ರಕ್ಕೆ ವಿರುದ್ಧ ಎಂದು ಉತ್ತರಾಖಂಡದ ಜ್ಯೋತಿರ್ಮಠದ ಪೀಠಾಧೀಶ ಶಂಕರಾಚಾರ್ಯ ಶ್ರೀ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ. ಆಮೂಲಕ ರಾಮ ಮಂದಿರ ಉದ್ಘಾಟನೆ ಬಗ್ಗೆ ಸನಾತನ ಧರ್ಮದ ಪ್ರಮುಖ ಹಿಂದು ಪೀಠಗಳೇ ವಿರೋಧ ವ್ಯಕ್ತಪಡಿಸಿದಂತಾಗಿದೆ.
ಮಂದಿರ ಉದ್ಘಾಟನೆಯ ಸಮಾರಂಭವನ್ನು ಪವಿತ್ರ ಹಿಂದೂ ಧರ್ಮಗ್ರಂಥಗಳಿಗೆ ವಿರುದ್ಧವಾಗಿ ನಡೆಸಲಾಗುತ್ತಿದೆ. ದೇವಾಲಯದ ನಿರ್ಮಾಣ ಕೆಲಸ ಅಪೂರ್ಣ ಆಗಿರುವುದರಿಂದ ಇದರ ನಡುವೆ ಪ್ರಾಣ ಪ್ರತಿಷ್ಠೆ ಮಾಡುವುದು ಶಾಸ್ತ್ರಗಳಿಗೆ ವಿರುದ್ಧವಾಗುತ್ತದೆ ಎಂದು ಮಠದ ಅಧಿಕೃತ ಸೋಶಿಯಲ್ ಮೀಡಿಯಾ ಟ್ವಿಟರ್ ಖಾತೆಯಲ್ಲಿ ವೀಡಿಯೊ ಮೂಲಕ ಅವರು ಹೇಳಿದ್ದಾರೆ.
ನಾಲ್ಕು ಜ್ಯೋತಿರ್ಮಠಗಳು 8ನೇ ಶತಮಾನದ ಆಚಾರ್ಯ ಆದಿಶಂಕರರಿಂದ ಸ್ಥಾಪಿಸಲ್ಪಟ್ಟವುಗಳು. ಹಿಂದೂ ಧರ್ಮದ ಅದ್ವೈತ ವೇದಾಂತ ಸಂಪ್ರದಾಯವನ್ನು ಈ ನಾಲ್ಕು ಮಠಗಳು ಪ್ರತಿಪಾದಿಸುತ್ತವೆ. ಈಗ ಉತ್ತರಾಖಂಡದ ಜೋಶಿಮಠದ ಜ್ಯೋತಿರ್ಮಠ, ಪುರಿಯ ಗೋವರ್ಧನ ಮಠದ ಶ್ರೀಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನೆರಡು ಮಠಗಳೆಂದರೆ ಕರ್ನಾಟಕದ ಶೃಂಗೇರಿಯ ಶ್ರೀ ಶಾರದಾ ಪೀಠ ಮತ್ತು ಗುಜರಾತಿನ ದ್ವಾರಕಾ ಶಾರದಾ ಪೀಠ. ಈ ಪೈಕಿ ಶೃಂಗೇರಿ ಪೀಠದ ಸ್ವಾಮಿಗಳು ತಾವು ರಾಮ ಮಂದಿರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದಿದ್ದಾರೆ.
ಹಾಗೆಂದು, ನಾವು ಪ್ರಧಾನಿ ಮೋದಿ ವಿರೋಧಿಗಳಲ್ಲ. ಆದರೆ ಧರ್ಮಕ್ಕೆ ವಿರುದ್ಧವಾಗಿ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯಬಾರದು. ರಮಾನಂದ ಸಂಪ್ರದಾಯದ ಪ್ರಕಾರ ಮಾಡುವುದಾದರೆ ಚಂಪತ್ ರಾಯ್, ನೃಪೇಂದ್ರ ಮಿಶ್ರಾ ಟ್ರಸ್ಟ್ ಸ್ಥಾನಗಳಿಗೆ ರಾಜೀನಾಮೆ ನೀಡಲಿ. ಅಯೋಧ್ಯೆಯ ರಾಮಮಂದಿರವನ್ನು ರಮಾನಂದ ಸಂಪ್ರದಾಯದವರಿಗೆ ವಹಿಸಲಿ ಎಂದು ಅವಿಮುಕ್ತೇಶ್ವರಾನಂದ ಸರಸ್ವತಿ ಆಗ್ರಹಿಸಿದ್ದಾರೆ.
ಪುರಿಯ ಶಂಕರಾಚಾರ್ಯ ಪೀಠದ ನಿಶ್ವಲಾನಂದ ಸ್ವಾಮೀಜಿ ಕೂಡ ಪ್ರಾಣ ಪ್ರತಿಷ್ಠಾಪನೆಗೆ ಗೈರಾಗಲಿದ್ದಾರೆ. ನಮಗೆ ಮಂದಿರ ಲೋಕಾರ್ಪಣೆಗೆ ಆಹ್ವಾನ ಬಂದಿದೆ. ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ನಾವು ಭಾಗಿಯಾಗಲ್ಲ. ಧಾರ್ಮಿಕ ವಿಧಿ-ವಿಧಾನಗಳ ಪ್ರಕಾರ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿಲ್ಲ. ಇದಕ್ಕೆ ನಮ್ಮ ಸಹಮತಿ ಇಲ್ಲ. ಶಾಸ್ತ್ರ, ಧಾರ್ಮಿಕ ವಿಧಿ ವಿಧಾನಗಳು ಸರಿಯಾಗಿ ನಡೆಯಬೇಕು. ಹೀಗಾಗಿ ಜನವರಿ 22ರ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ ಎಂದು ನಿಶ್ಚಲಾನಂದ ಸ್ವಾಮೀಜಿ ಹೇಳಿದ್ದಾರೆ.
Swami Avimukteshwaranand Saraswati, the shankaracharya of Jyotishpeeth in Uttarakhand, has said the four shankaracharyas will not attend the January 22 inauguration of the Ram temple in Ayodhya because it is being held in violation of the rules of Sanatan Dharma.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm