Manoranjan Mysuru, Parliament breach; ಸಂಸತ್ ಭದ್ರತಾ ಉಲ್ಲಂಘನೆ ; ಪ್ರಕರಣದ ಮಾಸ್ಟರ್ ಮೈಂಡ್ ಮೈಸೂರಿನ ಮನೋರಂಜನ್, ಪಾಲಿಗ್ರಾಫ್ ಪರೀಕ್ಷೆಯಲ್ಲಿ ಪತ್ತೆ 

14-01-24 02:54 pm       HK News Desk   ದೇಶ - ವಿದೇಶ

ಸಂಸತ್ತಿನಲ್ಲಿ ಸ್ಮೋಕ್ ಬಾಂಬ್ ಸಿಡಿಸಿ ಭಯೋತ್ಪಾದನೆ ನಡೆಸಿದ ಪ್ರಕರಣದಲ್ಲಿ ಬಂಧನಕ್ಕೀಡಾದ ಮೈಸೂರು ಮೂಲದ ಮನೋರಂಜನ್ ಒಟ್ಟು ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿದ್ದ ಎಂಬುದು ಪಾಲಿಗ್ರಾಫ್, ನಾರ್ಕೊ ಅನಾಲಿಸಿಸ್ ಮತ್ತು ಬ್ರೇನ್ ಮ್ಯಾಪಿಂಗ್ ಪರೀಕ್ಷೆಗಳಲ್ಲಿ ಪತ್ತೆಯಾಗಿದೆ. 

ನವದೆಹಲಿ, ಜ.14: ಸಂಸತ್ತಿನಲ್ಲಿ ಸ್ಮೋಕ್ ಬಾಂಬ್ ಸಿಡಿಸಿ ಭಯೋತ್ಪಾದನೆ ನಡೆಸಿದ ಪ್ರಕರಣದಲ್ಲಿ ಬಂಧನಕ್ಕೀಡಾದ ಮೈಸೂರು ಮೂಲದ ಮನೋರಂಜನ್ ಒಟ್ಟು ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿದ್ದ ಎಂಬುದು ಪಾಲಿಗ್ರಾಫ್, ನಾರ್ಕೊ ಅನಾಲಿಸಿಸ್ ಮತ್ತು ಬ್ರೇನ್ ಮ್ಯಾಪಿಂಗ್ ಪರೀಕ್ಷೆಗಳಲ್ಲಿ ಪತ್ತೆಯಾಗಿದೆ. 

ಡಿಸೆಂಬರ್ 13ರಂದು ಘಟನೆ ನಡೆದಿದ್ದು ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿದ್ದಾತ ಲಲಿತ್ ಝಾ ಎಂದು ಈ ಹಿಂದೆ ಪೊಲೀಸರು ಹೇಳಿದ್ದರು. ಎಲ್ಲ ಆರು ಆರೋಪಿಗಳಾದ ಸಾಗರ್ ಶರ್ಮಾ, ಮನೋರಂಜನ್ ಡಿ, ಅಮೋಲ್ ಶಿಂಧೆ, ನೀಲಂ ಆಜಾದ್, ಲಲಿತ್ ಝಾ ಮತ್ತು ಮಹೇಶ್ ಕುಮಾವತ್ ಅವರನ್ನು ಶನಿವಾರ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ಪೊಲೀಸ್ ಮೂಲಗಳ ಪ್ರಕಾರ, ನೀಲಂ ಹೊರತುಪಡಿಸಿ ಉಳಿದ 5  ಆರೋಪಿಗಳನ್ನು ಡಿಸೆಂಬರ್ 8 ರಂದು ಪಾಲಿಗ್ರಾಫ್ ಪರೀಕ್ಷೆಗಾಗಿ ಗುಜರಾತ್‌ಗೆ ಕರೆದೊಯ್ಯಲಾಗಿತ್ತು. ಆದರೆ ನ್ಯಾಯಾಲಯದ ಮುಂದೆ ಪಾಲಿಗ್ರಾಫ್ ಪರೀಕ್ಷೆಗೆ ಒಳಗಾಗಲು ನೀಲಂ ಒಪ್ಪಿಗೆ ನೀಡಿರಲಿಲ್ಲ. ಇದುವರೆಗಿನ ತನಿಖೆಯಲ್ಲಿ ಕೃತ್ಯದ ಉದ್ದೇಶ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ಕಳುಹಿಸುವುದೇ ಆಗಿತ್ತು ಎಂಬುದು ತಿಳಿದುಬಂದಿದೆ.

After the five accused in the Parliament security breach incident were brought back to Delhi following their polygraph, narco-analysis and brain mapping tests, a police source said that Manoranjan D, one of the two persons who barged into the Lok Sabha chamber on December 13 from the well of the House, was the mastermind behind the incident. The police had earlier said that Lalit Jha, another arrested person, was the mastermind behind the security breach incident.