ಬ್ರೇಕಿಂಗ್ ನ್ಯೂಸ್
22-01-24 01:15 pm Hk News Desk ದೇಶ - ವಿದೇಶ
ಅಯೋಧ್ಯೆ, ಜ.22: ಕೋಟಿ ಕಂಗಳ ಕನಸು, ಜಗತ್ತಿನಾದ್ಯಂತ ಭಕ್ತರ ನಿರೀಕ್ಷೆಯಂತೆ ಅಯೋಧ್ಯಾ ಪುರಿಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಆಗಿದೆ. ಪ್ರಧಾನಿ ನರೇಂದ್ರ ಮೋದಿ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯ ವಿಧಿಬದ್ಧವಾಗಿ ನೆರವೇರಿದೆ.
12 ಗಂಟೆಗೆ ಸರಿಯಾಗಿ ಹೂವಿನ ಗುಚ್ಛವನ್ನು ಹಿಡಿದು ಮಂದಿರ ಪ್ರವೇಶ ಮಾಡಿದ ಮೋದಿ, ಎರಡು ಮಂಟಪದಲ್ಲಿ ಪೂಜೆ ನೆರವೇರಿಸಿದರು. ಪ್ರತಿಷ್ಠಾ ಕಾರ್ಯ ನೆರವೇರುತ್ತಿದ್ದಂತೆ ಮೊದಲ ಬಾರಿಗೆ ಸರ್ವಾಲಂಕೃತ ಬಾಲರಾಮನ ಮೂರ್ತಿಯನ್ನು ನೇರ ಪ್ರಸಾರದಲ್ಲಿ ತೋರಿಸಲಾಯಿತು.








ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಪೂಜಾ ವಿಧಿವಿಧಾನಗಳು 11 ಗಂಟೆ ವೇಳೆಗೆ ಆರಂಭಗೊಂಡಿತ್ತು. 12:05 ರಿಂದ 12:55 ರವರೆಗೆ ಸುಮಾರು 50 ನಿಮಿಷಗಳ ಕಾಲ ಪ್ರಾಣ ಪ್ರತಿಷ್ಠಾಪನೆಯ ಪೂಜಾ ಕಾರ್ಯ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ರಾಜ್ಯಪಾಲರು ಸೇರಿದಂತೆ ಐವರು ಗಣ್ಯರಿಗೆ ಮಾತ್ರ ಗರ್ಭಗುಡಿಯಲ್ಲಿ ಅವಕಾಶ ನೀಡಲಾಗಿದೆ. ಮೋದಿ ಮತ್ತು ಮೋಹನ್ ಭಾಗವತ್ ಸ್ವತಃ ಹೂವಿನ ಅಭಿಷೇಕ ಮತ್ತು ಆರತಿ ಎತ್ತಿ ಪೂಜೆ ನೆರವೇರಿಸಿದ್ದಾರೆ. ಆಚಾರ್ಯ ಗಣೇಶ್ವರ್ ದ್ರಾವಿಡ್, ಲಕ್ಷ್ಮೀಕಾಂತ ದೀಕ್ಷಿತ್ ನೇತೃತ್ವದಲ್ಲಿ ನೂರಾರು ರಿತ್ವಿಜರು ಪ್ರತಿಷ್ಠಾ ಪೂಜಾ ಕೈಂಕರ್ಯ ನಡೆಸಿದ್ದಾರೆ.
ಸಾಧು ಸಂತರು, ಪ್ರಮುಖ ಕೈಗಾರಿಕೋದ್ಯಮಿಗಳು, ಬಾಲಿವುಡ್ ತಾರೆಯರು ಸೇರಿದಂತೆ ಸುಮಾರು ಎಂಟು ಸಾವಿರ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ 14 ದಂಪತಿ ‘ಯಜಮಾನ’ರಾಗಿ ಪಾಲ್ಗೊಂಡಿದ್ದಾರೆ. ರಾಮ ಮಂದಿರ ಸುತ್ತಮುತ್ತ ಸೇರಿದಂತೆ ಅಯೋಧ್ಯೆ ನಗರದಲ್ಲಿ ಭಾರಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗಿರುವ ಅಯೋಧ್ಯೆ ನಗರಿ ಸಂಪೂರ್ಣವಾಗಿ ಸಾವಿರಾರು ಕ್ವಿಂಟಾಲ್ ಹೂಗಳಿಂದ ಅಲಂಕೃತಗೊಂಡಿದೆ. ಅಯೋಧ್ಯೆ ಸೇರಿದಂತೆ ದೇಶಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಮ ಮಂತ್ರ ಮೊಳಗುತ್ತಿದೆ. ನೂರಾರು ಕಡೆ ಹಿಂದು ಸಂಘಟನೆಗಳ ವತಿಯಿಂದ ರಾಮ ತಾರಕಯಜ್ಞ ನೆರವೇರಿದೆ
‘Mukhya Yajman’ Prime Minister Narendra Modi leads ‘Pran Pratishtha’ rituals at Ram temple inauguration. See pictures from the ceremony here.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm