ಬ್ರೇಕಿಂಗ್ ನ್ಯೂಸ್
23-01-24 09:56 pm HK News Desk ದೇಶ - ವಿದೇಶ
ನವದೆಹಲಿ, ಜ.23: ಬಿಹಾರದ ಮಾಜಿ ಮುಖ್ಯಮಂತ್ರಿ, ದಿವಂಗತ ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.
ಸಮತಾವಾದ ಪ್ರತಿಪಾದನೆ ಮಾಡಿದ್ದ ಅಗ್ರ ನಾಯಕನಿಗೆ ಮರಣೋತ್ತರವಾಗಿ ಪ್ರಶಸ್ತಿ ಘೋಷಿಸಲಾಗಿದೆ. ಬುಧವಾರ ಕರ್ಪೂರಿ ಠಾಕೂರ್ ಅವರ 100ನೇ ಜನ್ಮದಿನಾಚರಣೆ. ಅದಕ್ಕೂ ಮುನ್ನ ರಾಷ್ಟ್ರಪತಿ ಭವನ ಠಾಕೂರ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಘೋಷಿಸಿದೆ. ಜನತಾ ದಳ ಯುನೈಟೆಡ್ (ಜೆಡಿಯು) ಪಕ್ಷ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿತ್ತು. ಕೇಂದ್ರ ಸರ್ಕಾರ ಈ ಘೋಷಣೆ ಮಾಡುತ್ತಿದ್ದಂತೆ ಜೆಡಿಯು ಮೋದಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದೆ.
ಕರ್ಪೂರಿ ಠಾಕೂರ್ ಬಿಹಾರದ ಹಿಂದುಳಿದ ವರ್ಗಗಳ ಹೋರಾಟಕ್ಕಾಗಿ ಹೆಸರು ಗಳಿಸಿದ್ದರು. ಕರ್ಪೂರಿ ಅವರು ಎರಡು ಬಾರಿ ಬಿಹಾರದ ಉಪ ಮುಖ್ಯಮಂತ್ರಿ, ಎರಡು ಬಾರಿ ಮುಖ್ಯಮಂತ್ರಿ ಮತ್ತು ದಶಕಗಳ ಕಾಲ ವಿರೋಧ ಪಕ್ಷದ ಶಾಸಕ ಮತ್ತು ನಾಯಕರಾಗಿದ್ದರು.
ಠಾಕೂರ್ ಅವರಿಗೆ 'ಭಾರತ ರತ್ನ' ಪುರಸ್ಕಾರ ಲಭಿಸಿರುವುದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದು ಸಾಮಾಜಿಕ ನ್ಯಾಯದ ಶ್ರೇಷ್ಠ ಐಕಾನ್ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಲು ನಿರ್ಧರಿಸಿದ್ದೇವೆ. ಅವರ ಜನ್ಮ ಶತಮಾನೋತ್ಸವ ಆಚರಿಸುತ್ತಿರುವ ಸಮಯದಲ್ಲಿ ಈ ನಿರ್ಧಾರ ದೇಶದ ಜನರಿಗೆ ಹೆಮ್ಮೆ ತರುತ್ತದೆ ಎಂದಿದ್ದಾರೆ.
ಅವಕಾಶ ವಂಚಿತರ ಉನ್ನತಿಗಾಗಿ ಕರ್ಪೂರಿ ಅವರ ಅಚಲ ಬದ್ಧತೆ ಮತ್ತು ದೂರದೃಷ್ಟಿಯ ನಾಯಕತ್ವವು ಭಾರತದ ಸಾಮಾಜಿಕ-ರಾಜಕೀಯ ಸನ್ನಿವೇಶದಲ್ಲಿ ಅಳಿಸಲಾಗದ ಛಾಪು ಮೂಡಿಸಿದೆ. ಸಮಾಜದಲ್ಲಿ ಸಾಮರಸ್ಯವನ್ನು ಇನ್ನಷ್ಟು ಉತ್ತೇಜಿಸಲು ಅವರ ಧ್ಯೇಯವು ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Two-time Bihar chief minister Karpoori Thakur, considered the fountainhead of OBC politics in Bihar, has been named for the country's highest civilian award Bharat Ratna posthumously, a Rashtrapati Bhawan communique said on Tuesday on the eve of his birth centenary.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm