ಬ್ರೇಕಿಂಗ್ ನ್ಯೂಸ್
23-01-24 10:58 pm HK News Desk ದೇಶ - ವಿದೇಶ
ಪುದುಚೇರಿ, ಜ 23: ಹೊಸದಾಗಿ ನಿರ್ಮಾಣ ಮಾಡಿದ ಮೂರು ಅಂತಸ್ತಿನ ಕಟ್ಟಡ ಗೃಹಪ್ರವೇಶಕ್ಕೂ ಮುನ್ನವೇ ಅಡಿಪಾಯ ಸಮೇತ ಕುಸಿದು ಬಿದ್ದ ಆಘಾತಕಾರಿ ಘಟನೆ ಪುದುಚೇರಿಯ ಅಟ್ಟುಪಟ್ಟಿಯಲ್ಲಿರುವ ಅಂಬೇಡ್ಕರ್ ನಗರದಲ್ಲಿ ನಡೆದಿದೆ.
ಒಳಚರಂಡಿ ಕಾಲುವೆಯ ನವೀಕರಣದ ಅಂಗವಾಗಿ ಮಣ್ಣು ತೆಗೆಯುವ ಯಂತ್ರ ಬಳಸಿ ಹಳ್ಳ ತೋಡಿದ್ದರಿಂದ ಮನೆ ಕುಸಿದಿದೆ ಎಂದು ತಿಳಿದುಬಂದಿದೆ.
ರಾಜಕಾಲುವೆಯ ದಡದಲ್ಲಿ ಸರ್ಕಾರ ಮಂಜೂರು ಮಾಡಿದ ಜಾಗದಲ್ಲಿ ಕೆಲವು ಮನೆಗಳನ್ನು ನಿರ್ಮಿಸಲಾಗಿತ್ತು. ಕಾಲುವೆ ನವೀಕರಣಕ್ಕೆ ಮಣ್ಣು ತೆಗೆಯುವ ಯಂತ್ರವನ್ನು ಬಳಸಿದ ನಂತರ ಆ ಏರಿಯಾದಲ್ಲಿ ಭಾರೀ ಕಂಪನದ ಅನುಭವವಾಯಿತು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮರೈಮಲೈ ಅಡಿಗಲ್ ಸಲೈ ಮತ್ತು ಕಾಮರಾಜ್ ಸಾಲೈಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣದ ಭಾಗವಾಗಿ ಕಾಲುವೆ ಬಳಿ ಪಿಡಬ್ಲ್ಯೂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಅಪಘಾತದ ವೇಳೆ ಮನೆ ಮತ್ತು ಸುತ್ತಮುತ್ತ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ ಎಂದು ಪಿಡಬ್ಲ್ಯುಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುದುಚೇರಿಯ ಲೋಕೋಪಯೋಗಿ ಇಲಾಖೆ ಸಚಿವ ಕೆ.ಲಕ್ಷ್ಮೀನಾರಾಯಣ್ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯ ಕುರಿತು ಪಿಡಬ್ಲ್ಯುಡಿ ಮತ್ತು ಕಂದಾಯ ಇಲಾಖೆ ವರದಿ ಸಲ್ಲಿಸಲಿದೆ. ಶೀಘ್ರವೇ ವಿಚಾರಣೆ ನಡೆಸಲಾಗುವುದು. ಮನೆ ಮಾಲೀಕರಿಗೆ ಪರಿಹಾರ ನೀಡುವ ಕುರಿತು ಸರಕಾರ ಚಿಂತನೆ ನಡೆಸಿದೆ ಎಂದು ಸಚಿವರು ಹೇಳಿದರು.
ಈ ಮಧ್ಯೆ ಎಐಎಡಿಎಂಕೆ ಪಕ್ಷವು ಘಟನಾ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ್ದು, ಮನೆಯ ಮಾಲೀಕರಿಗೆ ಸರ್ಕಾರವು ಸೂಕ್ತ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿದ ಎಐಎಡಿಎಂಕೆ ಮುಖಂಡರು, ಪಿಡಬ್ಲ್ಯುಡಿ ಹೊಣೆಗಾರಿಕೆ ವಹಿಸಬೇಕು ಎಂದು ಆಗ್ರಹಿಸಿದರು.
A three-storey newly constructed house in neighbouring Aattupatti hamlet collapsed on Monday, official sources said. The house was vacant at the time of the incident, they said.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm