ಬ್ರೇಕಿಂಗ್ ನ್ಯೂಸ್
24-01-24 09:30 pm HK News Desk ದೇಶ - ವಿದೇಶ
ಮಾಸ್ಕೊ, ಜ.24: ಉಕ್ರೇನ್ನ 65 ಯುದ್ಧ ಕೈದಿಗಳು ಸೇರಿದಂತೆ 74 ಜನರನ್ನು ಹೊತ್ತೊಯ್ಯುತ್ತಿದ್ದ ಸೇನಾ ವಿಮಾನವು ಉಕ್ರೇನ್ ಬಳಿಯ ಗಡಿ ಪ್ರದೇಶದ ಪ್ರಾಂತ್ಯದಲ್ಲಿ ಬುಧವಾರ ಪತನಗೊಂಡಿದೆ. ಈ ಬಗೆಗಿನ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ.
ಆ ವಿಡಿಯೋದಲ್ಲಿ ಬೆಲ್ಗೊರೊಡ್ ಪ್ರಾಂತ್ಯದಲ್ಲಿ ವಿಮಾನವೊಂದು ಪತನಗೊಂಡು ಆಕಾಶದಿಂದ ಬೀಳುವಂತೆ ಕಂಡುಬರುತ್ತಿದೆ. ಬೆಂಕಿಯ ಬೃಹತ್ ಚೆಂಡು ಸ್ಫೋಟಗೊಂಡಿದ್ದು, ಅದು ನೆಲಕ್ಕೆ ಅಪ್ಪಳಿಸಿದೆ. ಈಗಾಗಲೇ ಅಗ್ನಿಶಾಮಕ ದಳ, ಆಂಬ್ಯುಲೆನ್ಸ್ಗಳು ಮತ್ತು ಪೊಲೀಸರು ಅಪಘಾತದ ಸ್ಥಳಕ್ಕೆ ಧಾವಿಸಿದ್ದಾರೆ.
ಯುದ್ಧದಲ್ಲಿ ಸೆರೆಯಾದ ಉಕ್ರೇನ್ನ 65 ಸೈನಿಕರು ಈ ವಿಮಾನದಲ್ಲಿದ್ದರು. ಇವರೊಂದಿಗೆ 6 ವಿಮಾನ ಸಿಬ್ಬಂದಿ ಮತ್ತು 3 ರಕ್ಷಣಾ ಸಿಬ್ಬಂದಿ ಇದ್ದರು. ಕೈದಿಗಳ ಹಸ್ತಾಂತರ ಪ್ರಕ್ರಿಯೆಗಾಗಿ ಇವರನ್ನು ಬೆಲ್ಗೊರೊಡ್ ಪ್ರಾಂತ್ಯದಲ್ಲಿನ ಉಭಯ ರಾಷ್ಟ್ರಗಳ ಗಡಿ ಪ್ರದೇಶಕ್ಕೆ ಕರೆತರಲಾಗುತ್ತಿತ್ತು ಎಂದು ಸೇನೆ ಮಾಹಿತಿ ನೀಡಿದೆ.
ಬೆಲ್ಗೊರೊಡ್ ಪ್ರದೇಶದಲ್ಲಿ ವಿಮಾನದ ಪತನಕ್ಕೆ ನಿರ್ದಿಷ್ಟ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಗವರ್ನರ್ ವ್ಯಾಚೆಸ್ಲಾವ್ ಗ್ಲಾಡ್ಕೋವ್ ಅವರು ವಿಮಾನದಲ್ಲಿ ಯಾರಿದ್ದರು ಎಂಬುದನ್ನು ಸ್ಪಷ್ಟಪಡಿಸಿಲ್ಲ. ಅಲ್ಲದೇ ಪರಿಶೀಲಿಸದ ಮಾಹಿತಿಯನ್ನು ಹಂಚಿಕೊಳ್ಳದಂತೆ ಉಕ್ರೇನಿಯನ್ ಅಧಿಕಾರಿಗಳು ಇದೇ ವೇಳೆ ಎಚ್ಚರಿಕೆ ಕೂಡಾ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಆದರೆ, ಸ್ಥಳೀಯ ಮಾಧ್ಯಮಗಳ ಪ್ರಕಾರ, ವಿಮಾನದಲ್ಲಿ ಶಸ್ತ್ರಾಸ್ತ್ರಗಳನ್ನು ಸಾಗಿಸಲಾಗುತ್ತಿತ್ತು. ಅದನ್ನು ಉಕ್ರೇನ್ ಹೊಡೆದುರುಳಿಸಿದೆ ಎಂದು ಉಕ್ರೇನ್ನ ಸೇನಾ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಉಕ್ರೇನಿಯನ್ ಸಮಾಜವನ್ನು ಅಸ್ಥಿರಗೊಳಿಸುವ ಗುರಿಯನ್ನು ಹೊಂದಿರುವ ಶತ್ರುಗಳು ಉಕ್ರೇನ್ ವಿರುದ್ಧ ವಿಶೇಷ ಕಾರ್ಯಾಚರಣೆಗಳನ್ನು ಸಕ್ರಿಯವಾಗಿ ನಡೆಸುತ್ತಿದ್ದಾರೆ'' ಎಂದು ಎಂದು ಗ್ಲಾಡ್ಕೋವ್ ತನ್ನ ಟೆಲಿಗ್ರಾಮ್ ಚಾನೆಲ್ನಲ್ಲಿ ತಿಳಿಸಿದ್ದಾರೆ.
ಸ್ಥಳೀಯ ಸುದ್ದಿಗಾರರೊಂದಿಗೆ ಬೆಳಗ್ಗೆ ಕರೆಯೊಂದರಲ್ಲಿ ಮಾತನಾಡಿರುವ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ವಕ್ತಾರ ಡಿಮಿಟ್ರಿ ಪೆಸ್ಕೋವ್ ಅವರು, ಅಪಘಾತದ ಬಗ್ಗೆ ಸಾಕಷ್ಟು ಮಾಹಿತಿ ಹೊಂದಿಲ್ಲದ ಕಾರಣ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಎಂದಿದ್ದರು. ರಕ್ಷಣಾ ಪಡೆಗಳು, ಸರಕು, ಮಿಲಿಟರಿ ಉಪಕರಣಗಳು ಮತ್ತು ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯಲು ವಿಮಾನವನ್ನು ವಿನ್ಯಾಸಗೊಳಿಸಲಾಗಿದೆ. ರಷ್ಯಾದ ಮಿಲಿಟರಿ ರಫ್ತು ಏಜೆನ್ಸಿ ಪ್ರಕಾರ, ಇದು 225 ಸೈನಿಕರನ್ನು ಒಯ್ಯಬಲ್ಲದು ಎಂಬುದು ತಿಳಿದುಬಂದಿದೆ.
Russia accused Ukraine of downing a Russian military plane in the Belgorod region near the Ukrainian border Wednesday, saying all 74 people on board were killed including dozens of Ukrainian servicemen being transported for a prisoner swap.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm