ನಿದ್ರೆಗೆ ಜಾರಿದ ಚಾಲಕ ; ಸಿಮೆಂಟ್ ಲಾರಿಗೆ ಡಿಕ್ಕಿ ಹೊಡೆದ ಕಾರು, 6 ಮಂದಿ ಸಾವು, ರಜೆ ಮುಗಿಸಿ ವಾಪಸಾಗುತ್ತಿದ್ದ ಯುವಕರ ದುರಂತ್ಯ ಅಂತ್ಯ 

28-01-24 07:14 pm       HK News Desk   ದೇಶ - ವಿದೇಶ

ತಮಿಳುನಾಡಿನ ತೆಂಕಾಶಿ ಜಿಲ್ಲೆಯ ಪುಲ್ಲಿಯಂಗುಡಿಯಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ.

ತೆಂಕಾಶಿ, ಜ 28: ತಮಿಳುನಾಡಿನ ತೆಂಕಾಶಿ ಜಿಲ್ಲೆಯ ಪುಲ್ಲಿಯಂಗುಡಿಯಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ.

ಪ್ರಾಥಮಿಕ ಮೂಲಗಳ ಪ್ರಕಾರ ಜಿಲ್ಲೆಯ ಕುಟ್ರಾಲಂನಿಂದ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಐವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಪುಲ್ಲಿಯಂಗುಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿದ್ದ ದುರ್ದೈವಿಗಳು ಸತತ ಮೂರು ದಿನ ರಜೆ ಇದ್ದಿದ್ದರಿಂದ ಕುತ್ರಾಲಂಗೆ ವಾರಾಂತ್ಯ ಕಳೆಯಲು ತೆರಳಿದ್ದರು. ಅಲ್ಲಿಂದ ರಾತ್ರಿ ಪ್ರಯಾಣದಲ್ಲಿ ಮನೆಗೆ ವಾಪಸಾಗುತ್ತಿದ್ದಾಗ ತೆಂಕಾಶಿ ಜಿಲ್ಲೆಯಲ್ಲಿನ ಪುಲ್ಲಿಯಂಗುಡಿಯಲ್ಲಿ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಘಟನೆಯಲ್ಲಿ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಅವರನ್ನು ಕಾರ್ತಿಕ್, ವೇಲ್ ಮನೋಜ್, ಸುಬ್ರಮಣಿ, ಮನೋಹರನ್ ಮತ್ತು ಪೋತಿರಾಜ್ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇನ್ನೊಬ್ಬ ವ್ಯಕ್ತಿ, ಪುಲ್ಲಿಯಂಗುಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ನಸುಕಿನ 3.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕಾರು ಚಲಾಯಿಸುತ್ತಿದ್ದ ಚಾಲಕ, ಚಾಲನೆಯಲ್ಲಿಯೇ ನಿದ್ರೆಗೆ ಜಾರಿದ್ದು ಅವಘಡಕ್ಕೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ. ವೇಗವಾಗಿ ಸಾಗುತ್ತಿದ್ದ ಕಾರು, ಕೇರಳಕ್ಕೆ ಹೋಗುತ್ತಿದ್ದ ಸಿಮೆಂಟ್ ಲಾರಿಗೆ ಎದುರಿನಿಂದ ಡಿಕ್ಕಿ ಹೊಡೆದಿದೆ.

Six people were killed in a road accident after a car collided with a cement truck on Sunday near Puliyangudi in the Tenkasi district of Tamil Nadu. A video shared by the news agency ANI, showed that police were present at the spot to conduct further investigation.