ಬ್ರೇಕಿಂಗ್ ನ್ಯೂಸ್
28-01-24 07:14 pm HK News Desk ದೇಶ - ವಿದೇಶ
ತೆಂಕಾಶಿ, ಜ 28: ತಮಿಳುನಾಡಿನ ತೆಂಕಾಶಿ ಜಿಲ್ಲೆಯ ಪುಲ್ಲಿಯಂಗುಡಿಯಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ.
ಪ್ರಾಥಮಿಕ ಮೂಲಗಳ ಪ್ರಕಾರ ಜಿಲ್ಲೆಯ ಕುಟ್ರಾಲಂನಿಂದ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಐವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಪುಲ್ಲಿಯಂಗುಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿದ್ದ ದುರ್ದೈವಿಗಳು ಸತತ ಮೂರು ದಿನ ರಜೆ ಇದ್ದಿದ್ದರಿಂದ ಕುತ್ರಾಲಂಗೆ ವಾರಾಂತ್ಯ ಕಳೆಯಲು ತೆರಳಿದ್ದರು. ಅಲ್ಲಿಂದ ರಾತ್ರಿ ಪ್ರಯಾಣದಲ್ಲಿ ಮನೆಗೆ ವಾಪಸಾಗುತ್ತಿದ್ದಾಗ ತೆಂಕಾಶಿ ಜಿಲ್ಲೆಯಲ್ಲಿನ ಪುಲ್ಲಿಯಂಗುಡಿಯಲ್ಲಿ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಘಟನೆಯಲ್ಲಿ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಅವರನ್ನು ಕಾರ್ತಿಕ್, ವೇಲ್ ಮನೋಜ್, ಸುಬ್ರಮಣಿ, ಮನೋಹರನ್ ಮತ್ತು ಪೋತಿರಾಜ್ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇನ್ನೊಬ್ಬ ವ್ಯಕ್ತಿ, ಪುಲ್ಲಿಯಂಗುಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ನಸುಕಿನ 3.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕಾರು ಚಲಾಯಿಸುತ್ತಿದ್ದ ಚಾಲಕ, ಚಾಲನೆಯಲ್ಲಿಯೇ ನಿದ್ರೆಗೆ ಜಾರಿದ್ದು ಅವಘಡಕ್ಕೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ. ವೇಗವಾಗಿ ಸಾಗುತ್ತಿದ್ದ ಕಾರು, ಕೇರಳಕ್ಕೆ ಹೋಗುತ್ತಿದ್ದ ಸಿಮೆಂಟ್ ಲಾರಿಗೆ ಎದುರಿನಿಂದ ಡಿಕ್ಕಿ ಹೊಡೆದಿದೆ.
#WATCH | Tamil Nadu: Six people were killed in a road accident as a result of a collision between a cement lorry and a car near Pulliyangudi in Tenkasi district. Police present on the spot to probe the matter: District Police pic.twitter.com/BIGVPX6XrJ
— ANI (@ANI) January 28, 2024
Six people were killed in a road accident after a car collided with a cement truck on Sunday near Puliyangudi in the Tenkasi district of Tamil Nadu. A video shared by the news agency ANI, showed that police were present at the spot to conduct further investigation.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm