ಬ್ರೇಕಿಂಗ್ ನ್ಯೂಸ್
28-01-24 10:18 pm HK News Desk ದೇಶ - ವಿದೇಶ
ಪಾಟ್ನಾ, ಜ.29: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿ ಸರ್ಕಾರ ಮತ್ತೆ ಅಸ್ತಿತ್ವಕ್ಕೆ ಬಂದಿದೆ. ನಿತೀಶ್ ಕುಮಾರ್ ಬಿಹಾರದಲ್ಲಿ 9ನೇ ಬಾರಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ.
ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ಆರ್ಲೇಕರ್ ಅವರು ಭಾನುವಾರ ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ವೇಳೆ ಬಿಜೆಪಿ ಶಾಸಕ ಸಾಮ್ರಾಟ್ ಚೌಧರಿ ಅವರು ನೂತನ ಡಿಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದಾರೆ. ವಿಜಯ್ ಕುಮಾರ್ ಸಿನ್ಹಾ, ಡಾ. ಪ್ರೇಮ್ ಕುಮಾರ್, ವಿಜಯ್ ಕುಮಾರ್ ಚೌಧರಿ, ವಿಜೇಂದ್ರ ಪ್ರಸಾದ್ ಯಾದವ್, ಶ್ರವಣ್ ಕುಮಾರ್, ಸಂತೋಷ್ ಸುಮನ್ ಮತ್ತು ಸುಮಿತ್ ಕುಮಾರ್ ಸಿಂಗ್ ಅವರು ನೂತನ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿ ಪದಗ್ರಹಣ ಮಾಡಿದ್ದಾರೆ.
ಜೆಡಿಯು ಪಕ್ಷದ ಅಧ್ಯಕ್ಷ ನಿತೀಶ್ ಕುಮಾರ್ ಬಿಹಾರದಲ್ಲಿ 9ನೇ ಬಾರಿಗೆ ಸಿಎಂ ಆಗಿ ದಾಖಲೆ ನಿರ್ಮಿಸಿದ್ದಾರೆ. ಬಿಹಾರದಲ್ಲಿ ದೀರ್ಘ ಕಾಲ ಮುಖ್ಯಮಂತ್ರಿಯಾಗಿರುವ ದಾಖಲೆಯೂ ಅವರದ್ದು. ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ ಬಹುಮತ ಇಲ್ಲದಿದ್ದರೂ ಸುದೀರ್ಘ ಕಾಲ ರಾಜ್ಯದ ಚುಕ್ಕಾಣಿ ಹಿಡಿದಿರುವ ದಾಖಲೆಯನ್ನೂ ಮಾಡಿದ್ದಾರೆ.
ಜೆಡಿಯು ಮೊನ್ನೆಯ ವರೆಗೂ ಆರ್ಜೆಡಿ ಜೊತೆಗೆ ಮೈತ್ರಿ ಮಾಡಿಕೊಂಡಿತ್ತು. ಅಲ್ಲದೆ, ಕಾಂಗ್ರೆಸ್ ಜೊತೆ ಸೇರಿ ಮಹಾಘಟಬಂದನ್ ಮಹಾ ಒಕ್ಕೂಟದ ಭಾಗವಾಗಿತ್ತು. ಆದರೆ, ಕಾಂಗ್ರೆಸ್ ಪಕ್ಷದಿಂದ ಇಂಡಿಯಾ ಒಕ್ಕೂಟಕ್ಕೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿ ನಿತೀಶ್ ಕುಮಾರ್ ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದ್ದು ಇದೀಗ ರಾಜ್ಯದಲ್ಲಿ ತನ್ನ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಜೊತೆಗೆ ಮೈತ್ರಿ ಮರು ಸ್ಥಾಪನೆ ಮಾಡಿದ್ದಾರೆ.
ಇದೀಗ ಲೋಕಸಭೆ ಚುನಾವಣೆ ಹೊತ್ತಿಗೆ ಮತ್ತೆ ಎನ್ಡಿಎ ತೆಕ್ಕೆಗೆ ಜೆಡಿಯು ಬಂದಂತಾಗಿದೆ. ಮತ್ತೆ ಲೋಕಸಭೆ ಗೆಲ್ಲುವತ್ತ ಕಣ್ಣು ನೆಟ್ಟಿರುವ ಬಿಜೆಪಿಗೆ ಬಿಹಾರದಲ್ಲಿ ಬಲ ಹೆಚ್ಚಿದಂತಾಗಿದೆ.
Nitish Kumar is likely to be sworn-in as the new chief minister of Bihar with BJP backing at 5pm on Sunday. The move comes hours after Kumar submitted his resignation.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm