ಬ್ರೇಕಿಂಗ್ ನ್ಯೂಸ್
28-01-24 10:18 pm HK News Desk ದೇಶ - ವಿದೇಶ
ಪಾಟ್ನಾ, ಜ.29: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿ ಸರ್ಕಾರ ಮತ್ತೆ ಅಸ್ತಿತ್ವಕ್ಕೆ ಬಂದಿದೆ. ನಿತೀಶ್ ಕುಮಾರ್ ಬಿಹಾರದಲ್ಲಿ 9ನೇ ಬಾರಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ.
ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ಆರ್ಲೇಕರ್ ಅವರು ಭಾನುವಾರ ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ವೇಳೆ ಬಿಜೆಪಿ ಶಾಸಕ ಸಾಮ್ರಾಟ್ ಚೌಧರಿ ಅವರು ನೂತನ ಡಿಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದಾರೆ. ವಿಜಯ್ ಕುಮಾರ್ ಸಿನ್ಹಾ, ಡಾ. ಪ್ರೇಮ್ ಕುಮಾರ್, ವಿಜಯ್ ಕುಮಾರ್ ಚೌಧರಿ, ವಿಜೇಂದ್ರ ಪ್ರಸಾದ್ ಯಾದವ್, ಶ್ರವಣ್ ಕುಮಾರ್, ಸಂತೋಷ್ ಸುಮನ್ ಮತ್ತು ಸುಮಿತ್ ಕುಮಾರ್ ಸಿಂಗ್ ಅವರು ನೂತನ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿ ಪದಗ್ರಹಣ ಮಾಡಿದ್ದಾರೆ.
ಜೆಡಿಯು ಪಕ್ಷದ ಅಧ್ಯಕ್ಷ ನಿತೀಶ್ ಕುಮಾರ್ ಬಿಹಾರದಲ್ಲಿ 9ನೇ ಬಾರಿಗೆ ಸಿಎಂ ಆಗಿ ದಾಖಲೆ ನಿರ್ಮಿಸಿದ್ದಾರೆ. ಬಿಹಾರದಲ್ಲಿ ದೀರ್ಘ ಕಾಲ ಮುಖ್ಯಮಂತ್ರಿಯಾಗಿರುವ ದಾಖಲೆಯೂ ಅವರದ್ದು. ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ ಬಹುಮತ ಇಲ್ಲದಿದ್ದರೂ ಸುದೀರ್ಘ ಕಾಲ ರಾಜ್ಯದ ಚುಕ್ಕಾಣಿ ಹಿಡಿದಿರುವ ದಾಖಲೆಯನ್ನೂ ಮಾಡಿದ್ದಾರೆ.
ಜೆಡಿಯು ಮೊನ್ನೆಯ ವರೆಗೂ ಆರ್ಜೆಡಿ ಜೊತೆಗೆ ಮೈತ್ರಿ ಮಾಡಿಕೊಂಡಿತ್ತು. ಅಲ್ಲದೆ, ಕಾಂಗ್ರೆಸ್ ಜೊತೆ ಸೇರಿ ಮಹಾಘಟಬಂದನ್ ಮಹಾ ಒಕ್ಕೂಟದ ಭಾಗವಾಗಿತ್ತು. ಆದರೆ, ಕಾಂಗ್ರೆಸ್ ಪಕ್ಷದಿಂದ ಇಂಡಿಯಾ ಒಕ್ಕೂಟಕ್ಕೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿ ನಿತೀಶ್ ಕುಮಾರ್ ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದ್ದು ಇದೀಗ ರಾಜ್ಯದಲ್ಲಿ ತನ್ನ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಜೊತೆಗೆ ಮೈತ್ರಿ ಮರು ಸ್ಥಾಪನೆ ಮಾಡಿದ್ದಾರೆ.
ಇದೀಗ ಲೋಕಸಭೆ ಚುನಾವಣೆ ಹೊತ್ತಿಗೆ ಮತ್ತೆ ಎನ್ಡಿಎ ತೆಕ್ಕೆಗೆ ಜೆಡಿಯು ಬಂದಂತಾಗಿದೆ. ಮತ್ತೆ ಲೋಕಸಭೆ ಗೆಲ್ಲುವತ್ತ ಕಣ್ಣು ನೆಟ್ಟಿರುವ ಬಿಜೆಪಿಗೆ ಬಿಹಾರದಲ್ಲಿ ಬಲ ಹೆಚ್ಚಿದಂತಾಗಿದೆ.
Nitish Kumar is likely to be sworn-in as the new chief minister of Bihar with BJP backing at 5pm on Sunday. The move comes hours after Kumar submitted his resignation.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm