ಬ್ರೇಕಿಂಗ್ ನ್ಯೂಸ್
30-01-24 03:28 pm HK News Desk ದೇಶ - ವಿದೇಶ
ಲಕ್ನೋ, ಜ.30: ಜ್ಞಾನವಾಪಿ ಮಸೀದಿ ಕುರಿತು ಎಎಸ್ಐ ವರದಿ ತೀವ್ರ ಚರ್ಚೆಗೆ ಗ್ರಾಸವಾಗಿರುವಾಗಲೇ ಉತ್ತರ ಪ್ರದೇಶದ ಸಹರಾನ್ಪುರದ ಜಮಿಯತ್ ಹಿಮಾಯತುಲ್ ಇಸ್ಲಾಂ ಅಧ್ಯಕ್ಷ ಮತ್ತು ಮುಸ್ಲಿಂ ವಿದ್ವಾಂಸ ಖಾರಿ ಅಬ್ರಾರ್ ಜಮಾಲ್ ಮುಸ್ಲಿಮರಿಗೆ ಸಲಹೆಯೊಂದನ್ನು ನೀಡಿದ್ದಾರೆ. ಜ್ಞಾನವಾಪಿ ಕುರಿತಂತೆ ನ್ಯಾಯಾಲಯದ ಆದೇಶದ ಮೇರೆಗೆ ಎಎಸ್ಐ ಸಮೀಕ್ಷೆ ನಡೆದಿದೆ. ಅದರ ವರದಿಯೂ ಬಂದಿದೆ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು. ದೇಶದಲ್ಲಿ ಹಿಂದೂಹ ಮತ್ತು ಮುಸ್ಲಿಮರು ಸಾಮರಸ್ಯದಿಂದ ಇರಬೇಕು ಎಂದು ಸಲಹೆ ನೀಡಿದ್ದಾರೆ.
ಜ್ಞಾನವಾಪಿ ವಿವಾದದ ಕುರಿತಂತೆ ಹಿಂದೂಗಳು ಹಾಗೂ ಮುಸ್ಲಿಂ ಸಂಘಟನೆಗಳು ಎರಡೂ ನ್ಯಾಯಾಲಯದ ಮೊರೆ ಹೋಗಿದ್ದವು. ಹೀಗಾಗಿ ವೈಜ್ಞಾನಿಕ ಸಮೀಕ್ಷೆಗೆ ನ್ಯಾಯಾಲಯ ಆದೇಶಿಸಿತ್ತು. ಕೋರ್ಟ್ ನಿರ್ದೇಶನದಂತೆ ಜ್ಞಾನವಾಪಿಯಲ್ಲಿ ಎಎಸ್ಐ ಸಮೀಕ್ಷೆ ನಡೆದಿದೆ. ಇದೀಗ ಸಮೀಕ್ಷಾ ವರದಿಯೂ ಬಹಿರಂಗಗೊಂಡಿದೆ. ಈಗ ಮುಸ್ಲಿಮರು ಅದನ್ನು ವಿರೋಧಿಸುವುದು ಸರಿಯಲ್ಲ ಎಂದು ಮುಸ್ಲಿಂ ವಿದ್ವಾಂಸ ಖಾರಿ ಅಬ್ರಾರ್ ಜಮಾಲ್ ಹೇಳಿದ್ದಾರೆ.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೇ ಎಲ್ಲಾ ಮಸೀದಿಯಲ್ಲಿ ಶಿವಲಿಂಗವನ್ನು ಹುಡುಕುವ ಕೆಲಸ ಮಾಡಬಾರದು ಎಂದಿದ್ದಾರೆ. ಅದೇ ವಿಷಯ ಮುಸ್ಲಿಮರಿಗೂ ಅನ್ವಯಿಸುತ್ತದೆ. ಯಾವುದೇ ಧಾರ್ಮಿಕ ಸ್ಥಳದಲ್ಲಿ ವಿವಾದ ಉಂಟಾದರೆ ಹಿಂದೂ ಮುಸಲ್ಮಾನರು ಒಗ್ಗೂಡಿ, ಸಾಮರಸ್ಯದಿಂದ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಪರಸ್ಪರ ಚರ್ಚೆಯ ಮೂಲಕ ವಿವಾದವನ್ನು ಬಗೆಹರಿಸಿಕೊಳ್ಳಿ ಎಂದವರು ಸಲಹೆ ನೀಡಿದ್ದಾರೆ.
ನ್ಯಾಯಾಲಯ ಮತ್ತು ಸರ್ಕಾರಿ ಸಂಸ್ಥೆಗಳನ್ನು ಪ್ರಶ್ನಿಸುವವರು ಈ ದೇಶವನ್ನು ವಿಘಟಿಸಬೇಕೆಂದು ಪರೋಕ್ಷವಾಗಿ ಹೇಳುತ್ತಿದ್ದಾರೆ. ಅಫ್ಘಾನಿಸ್ತಾನ ಮೊದಲು ಬೇರ್ಪಡಲು ತುಕ್ಡೆ ತುಕ್ಡೆ ಗ್ಯಾಂಗ್ ಕಾರಣವಾಗಿತ್ತು. ನಂತರ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಕೂಡ ಬೇರ್ಪಟ್ಟವು. ಈಗ ಇದೇ ಜನರು ಈ ದೇಶವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಅಂತ ಕಳವಳ ವ್ಯಕ್ತಪಡಿಸಿದರು.
Even as the ASI report on the Gyanvapi mosque has sparked a debate, Qari Abrar Jamal, president of Jamiat Himayatul Islam in Saharanpur, Uttar Pradesh, has come up with a piece of advice for Muslims.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm