ಬ್ರೇಕಿಂಗ್ ನ್ಯೂಸ್
23-11-20 01:22 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 23: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಭಾರೀ ಚಂಡಮಾರುತ ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಭೀತಿ ಎದುರಾಗಿದೆ. ನೀವಾರ್ ಎನ್ನುವ ಹೆಸರಿನ ಚಂಡಮಾರುತ ಎದುರಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡು ರಾಜ್ಯಾದ್ಯಂತ ರೆಡ್ ಎಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಆಗಿರುವುದರಿಂದ ಗಂಟೆಗೆ ನೂರು ಕಿಮೀ ವೇಗದಲ್ಲಿ ಬಿರುಗಾಳಿ ಇನ್ನು 24 ಗಂಟೆಯೊಳಗೆ ತಮಿಳುನಾಡು ಮತ್ತು ಪುದುಚೇರಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಈಗಾಗಲೇ ಭಾರೀ ಬಿರುಗಾಳಿ ತಮಿಳುನಾಡು ಕರಾವಳಿ ಭಾಗದಲ್ಲಿ ಬೀಸಲು ಆರಂಭಿಸಿದೆ. ಹವಾಮಾನ ಇಲಾಖೆ ಪ್ರಕಾರ, ನ.24ರ ವೇಳೆಗೆ ಚಂಡಮಾರುತವು ತಮಿಳುನಾಡಿನ ಕಾರೈಕಲ್, ಮಹಾಬಲಿಪುರಂ ಭಾಗದಿಂದ ಹಾದು ಹೋಗಲಿದೆ ಎನ್ನಲಾಗುತ್ತಿದೆ. ಇದರ ಪರಿಣಾಮ ತಮಿಳುನಾಡಿನ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ. ಚೆನ್ನೈ, ನಾಗಪಟ್ಟಿಣಂ, ಪುದುಕೋಟೈ, ತಿರುವಾರೂರು, ತಂಜಾವೂರು ಜಿಲ್ಲೆಗಳಲ್ಲಿ ಚಂಡಮಾರುತದ ಪರಿಣಾಮ ಬೀರಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಎನ್ ಡಿಆರ್ ಎಫ್ ತಂಡ ಈಗಾಗ್ಲೇ ತಮಿಳುನಾಡು ಕರಾವಳಿಗೆ ಆಗಮಿಸಿದ್ದು, ವಿವಿಧ ತಂಡಗಳಾಗಿ ಕಾರ್ಯಾಚರಣೆ ಆರಂಭಿಸಿದೆ. ಸಮುದ್ರ ತೀರದ ನಿವಾಸಿಗಳನ್ನು ಸ್ಥಳಾಂತರಿಸಲು ಆರಂಭಿಸಿದೆ. ಚಂಡಮಾರುತದ ಎಫೆಕ್ಟ್ ನ.23ರಿಂದ 25ರ ವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನೀವಾರ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿಯೂ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಭಾಗದ ಜಿಲ್ಲೆಗಳು ಮತ್ತು ಕರಾವಳಿ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
After a relatively calm five months, the North Indian Ocean has jumped back into action with multiple systems forming back to back across the basin. The depression formed over the southwest Arabian Sea on Saturday intensified into the Very Severe Cyclonic Storm ‘Gati’ on Sunday.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm