ಬ್ರೇಕಿಂಗ್ ನ್ಯೂಸ್
07-02-24 01:32 pm HK News Desk ದೇಶ - ವಿದೇಶ
ಕಾಸರಗೋಡು, ಫೆ.7: ಆರೆಸ್ಸೆಸ್ ಹಿರಿಯ ಮುಖಂಡ ಗೋಪಾಲ ಚೆಟ್ಟಿಯಾರ್ (77) ಅಲ್ಪಕಾಲದ ಅನಾರೋಗ್ಯದ ಬಳಿಕ ಮಂಗಳವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.
ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಜನಿಸಿದ್ದ ಅವರು ವಿದ್ಯಾರ್ಥಿ ದಿಸೆಯಿಂದಲೇ ಆರೆಸ್ಸೆಸ್ ಚಟುವಟಿಕೆಗಳಿಂದ ಪ್ರಭಾವಿತರಾಗಿದ್ದರು. ವೃತ್ತಿಯಲ್ಲಿ ಕೇರಳ ಸರಕಾರ ಕಂದಾಯ ಇಲಾಖೆಯಲ್ಲಿ 35 ವರ್ಷ ಸೇವೆ ಸಲ್ಲಿಸಿದ್ದ ಗೋಪಾಲ ಚೆಟ್ಟಿಯಾರ್ 2002ರಲ್ಲಿ ಉಪ ತಹಸೀಲ್ದಾರ್ ಆಗಿ ನಿವೃತ್ತರಾಗಿದ್ದರು. ನಿವೃತ್ತಿ ಬಳಿಕ ತಮ್ಮ ಜೀವನವನ್ನು ಜನಸೇವೆಗೆ ಮುಡಿಪಾಗಿಟ್ಟಿದ್ದರು. ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್, ಕರ್ನಾಟಕ ದಕ್ಷಿಣ ಪ್ರಾಂತ್ಯ ಸೇವಾ ಪ್ರಮುಖ್ ಹಾಗೂ ಮಂಗಳೂರು ವಿಭಾಗ ಸಂಘ ಚಾಲಕರಾಗಿ ಸೇವಾ ಚಟುವಟಿಕೆ ನಡೆಸಿದ್ದರು.
ಮೂಲತಃ ಪೆರ್ಲ ನಿವಾಸಿಯಾಗಿದ್ದ ಅವರು ಒಂದೂವರೆ ವರ್ಷದಿಂದ ಬಂದ್ಯೋಡಿನಲ್ಲಿ ನೆಲೆಸಿದ್ದರು. ಇದಲ್ಲದೆ, ಸಮಾಜದ ನಾನಾ ಚಟುವಟಿಕೆಗಳಲ್ಲಿ ತೊಡಗಿಸಿದ್ದರು. ಮೃತರ ಅಂತ್ಯಸಂಸ್ಕಾರ ಬಂದ್ಯೋಡಿನಲ್ಲಿ ನಡೆಯಿತು. ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಿ.ಎಸ್. ಪ್ರಕಾಶ್, ಪ್ರಾಂತ ಪ್ರಚಾರಕ್ ನಂದೀಶ್, ಮಾಜಿ ಸಚಿವ ಎಸ್. ಅಂಗಾರ, ಬಿಜೆಪಿ ಕರ್ನಾಟಕ ರಾಜ್ಯ ಕಾರ್ಯದರ್ಶಿ ಬೃಜೇಶ್ ಚೌಟ ಸೇರಿದಂತೆ ಹಲವಾರು ಆರೆಸ್ಸೆಸ್, ಬಿಜೆಪಿ ಪ್ರಮುಖರು ಅಂತ್ಯಸಂಸ್ಕಾರ ಸಂದರ್ಭದಲ್ಲಿ ಪಾಲ್ಗೊಂಡು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.
Kasaragod Rss leader Gopal Chettiyar dies at 77.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm