ಬ್ರೇಕಿಂಗ್ ನ್ಯೂಸ್
12-02-24 12:20 pm HK News Desk ದೇಶ - ವಿದೇಶ
ಕೇರಳ, ಫೆ 12: ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಿ ಫೇಸ್ಬುಕ್ನಲ್ಲಿ ಕಮೆಂಟ್ ಮಾಡಿರುವ ಪ್ರಾಧ್ಯಾಪಕಿ ವಿರುದ್ಧ ತನಿಖೆ ನಡೆಸಲು ಕ್ಯಾಲಿಕಟ್ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(ಎನ್ಐಟಿ) ಸಮಿತಿಯನ್ನು ರಚಿಸಿದೆ.
'ಸಮಿತಿಯ ವರದಿ ಆಧರಿಸಿ ಪ್ರೊ.ಎ.ಶೈಜಾ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮಹಾತ್ಮ ಗಾಂಧಿಯ ತತ್ವ ಮತ್ತು ಸಿದ್ದಾಂತಗಳಿಗೆ ವಿರುದ್ಧವಾದ ಹೇಳಿಕೆಯನ್ನು ಎನ್ಐಟಿ ಯಾವತ್ತಿಗೂ ಬೆಂಬಲಿಸುವುದಿಲ್ಲ' ಎಂದು ಎನ್ಐಟಿ ತಿಳಿಸಿದೆ.
ಜನವರಿ 30ರಂದು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರಾಧ್ಯಾಪಕಿ ಶೈಜಾ ಅವರು ಫೇಸ್ಬುಕ್ನಲ್ಲಿ, "ಭಾರತವನ್ನು ಉಳಿಸಿದ್ದಕ್ಕಾಗಿ ಗೋಡ್ಸೆ ಬಗ್ಗೆ ಹೆಮ್ಮೆ ಪಡಬೇಕು" ಎಂದು ಕಾಮೆಂಟ್ ಮಾಡಿದ್ದರು. ಹಿಂದೂ ಮಹಾಸಭಾ ಕಾರ್ಯಕರ್ತ ನಾಥೂರಾಮ್ ವಿನಾಯಕ್ ಗೋಡ್ಸೆ ಭಾರತದಲ್ಲಿ ಅನೇಕರ ಹೀರೋ ಎಂದು ಗೋಡ್ಸೆ ಫೋಟೋ ಪೋಸ್ಟ್ ಮಾಡಿದ್ದ ವಕೀಲ ಕೃಷ್ಣ ರಾಜ್ ಎಂಬವರ ಪೋಸ್ಟ್ಗೆ ಪ್ರಾಧ್ಯಾಪಕಿ ಕಾಮೆಂಟ್ ಮಾಡಿದ್ದಾರೆ.
ಎಸ್ಎಫ್ಐ, ಕೆಎಸ್ಯು, ಎಂಎಸ್ಎಫ್ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಾಧ್ಯಾಪಕಿ ವಿರುದ್ಧ ದೂರು ನೀಡಿದ್ದವು. ಐಪಿಸಿ ಸೆಕ್ಷನ್ 153 ಅಡಿಯಲ್ಲಿ (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
The National Institute of Technology-Calicut (NIT) here has constituted a panel to investigate a recent controversial Facebook comment by a woman professor which allegedly glorified Mahatma Gandhi's assassin Nathuram Godse.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm