ಬ್ರೇಕಿಂಗ್ ನ್ಯೂಸ್
12-02-24 08:44 pm HK News Desk ದೇಶ - ವಿದೇಶ
ಮಥುರಾ, ಫೆ 12: ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸಜೀವ ದಹನಗೊಂಡ ಘಟನೆ ಮಥುರಾ ಜಿಲ್ಲೆಯ ಮಹಾವನ್ ಪೊಲೀಸ್ ಠಾಣಾ ವ್ಯಾಪ್ತಿಯ ಯಮುನಾ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ ಬಸ್ ಮತ್ತು ಕಾರು ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದವು. ಮುಂದೆ ತೆರಳುತ್ತಿದ್ದ ಬಸ್ನ ಟೈರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ, ಹಿಂದಿನಿಂದ ಬಂದ ಕಾರು ಕೂಡ ಬಸ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಹೇಗೋ ಕಿಟಕಿಯಿಂದ ಹೊರಗೆ ಬಂದು ಪ್ರಾಣ ಉಳಿಸಿಕೊಂಡರೆ, ಕಾರಿನಲ್ಲಿದ್ದ ಐವರು ಸುಟ್ಟು ಕರಕಲಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ಬಂದ ಪೊಲೀಸರು, ಬೆಂಕಿಯನ್ನು ನಿಯಂತ್ರಿಸಲು ಸುಮಾರು ಒಂದು ಗಂಟೆಗಳ ಕಾಲ ಹರಸಾಹಪಟ್ಟರು. ಆದರೆ, ಅವರು ಬರುವಷ್ಟರಲ್ಲೇ ಬೆಂಕಿಯ ಜ್ವಾಲೆ ಎರಡೂ ವಾಹನಗಳನ್ನು ಸುತ್ತುವರೆದಿತ್ತು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಸ್ನಲ್ಲಿದ್ದ ಪ್ರಯಾಣಿಕರು ಕಿಟಕಿ ಮೂಲಕ ಪ್ರಾಣಾಪಾಯದಿಂದ ಪಾರಾದರೆ, ಕಾರಿನಲ್ಲಿದ್ದವರು ಹೊರಬರಲು ಸಾಧ್ಯವಾಗದೇ ಅಲ್ಲಿಯೇ ಜೀವ ಕಳೆದುಕೊಂಡಿದ್ದಾರೆ. ಅಪಘಾತದಿಂದ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ.



ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಈ ಭೀಕರ ರಸ್ತೆ ಅಪಘಾತಕ್ಕೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ತ್ವರಿತಗೊಳಿಸುವಂತೆ ಸೂಚನೆ ಕೂಡ ನೀಡಿದ್ದಾರೆ.
Five people were charred to death after their car collided with a private bus on the Yamuna Expressway in Uttar Pradesh’s Mathura early on Monday. According to the police, the accident took place around 8 am in the Mahavan police station area and the car and the sleeper coach were completely burnt after they collided.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm