ಬ್ರೇಕಿಂಗ್ ನ್ಯೂಸ್
14-02-24 03:16 pm HK News Desk ದೇಶ - ವಿದೇಶ
ಜೈಪುರ, ಫೆ 14: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜ್ಯಸಭೆ ಚುನಾವಣೆಗೆ ರಾಜಸ್ಥಾನದಿಂದ ಸ್ಫರ್ಧಿಸಲಿದ್ದು, ಇಂದು (ಬುಧವಾರ) ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಬೆಳಿಗ್ಗೆ ಜೈಪುರಕ್ಕೆ ಬಂದಿಳಿದ ಅವರನ್ನು ರಾಜಸ್ಥಾನದ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಅಶೋಕ್ ಗೆಹಲೋತ್ ಬರಮಾಡಿಕೊಂಡರು.
ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದರು.
ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ರಾಜಸ್ಥಾನ, ಹಿಮಾಚಲ ಪ್ರದೇಶ, ಮಧ್ಯಪ್ರದೇಶದ ಕಾಂಗ್ರೆಸ್ ಘಟಕಗಳು, ಮುಖಂಡರು ತಮ್ಮ ರಾಜ್ಯದಿಂದಲೇ ಸ್ಪರ್ಧಿಸಲು ಅವರಿಗೆ ಮನವಿ ಮಾಡಿದ್ದವು. ಈ ಪೈಕಿ ರಾಜಸ್ಥಾನ ಸುರಕ್ಷಿತ ಎಂಬ ತೀರ್ಮಾನಕ್ಕೆ ನಾಯಕರು ಬಂದಿದ್ದರಿಂದ ಕೊನೆಗೆ ಸೋನಿಯಾ ಅವರು ರಾಜಸ್ಥಾನ ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ.
ಫೆಬ್ರುವರಿ 27ರಂದು ಚುನಾವಣೆ ನಡೆಯಲಿದ್ದು ಫೆ.15 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಸೋನಿಯಾ ಅವರು ಮೊದಲ ಅವಧಿಗೆ ಅಮೇಠಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಸದ್ಯ, ರಾಯ್ ಬರೇಲಿ ಕ್ಷೇತ್ರ ಪ್ರತಿನಿಧಿಸುತ್ತಿದ್ದು, ಇಲ್ಲಿಂದ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
2019ರ ಸಾರ್ವತ್ರಿಕ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ಸೋನಿಯಾ ಗಾಂಧಿ ಹೇಳಿದ್ದರು.
Former Congress president Sonia Gandhi on Wednesday filed her nomination papers for the upcoming Rajya Sabha polls from Rajasthan.Her children Rahul Gandhi and Priyanka Gandhi, former chief minister Ashok Gehlot, PCC chief Govind Singh Dotasra, leader of opposition Tikaram Jully were present at the time of the nomination filing in the assembly building.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm