ಬ್ರೇಕಿಂಗ್ ನ್ಯೂಸ್
07-08-20 07:25 am Headline Karnataka News Network ದೇಶ - ವಿದೇಶ
ನವದೆಹಲಿ (ಆ.7): ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ನಡೆದ ಉನ್ನತ ಶಿಕ್ಷಣದಲ್ಲಿ ಮಹಾ ಪರಿವರ್ತನೆ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಮಕ್ಕಳು ಮಾತೃಭಾಷೆಯಲ್ಲಿ ಬಹುಬೇಗ ಕಲಿಯುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹಾಗೂ ಯುಜಿಸಿ ಒಟ್ಟಾಗಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಈ ವೇಳೆ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ವಿಚಾರವಾಗಿ ಮಾತನಾಡಿದ್ದಾರೆ. ಮಕ್ಕಳು ತಮ್ಮ ಮಾತೃ ಭಾಷೆಯಲ್ಲಿ ವಿಚಾರಗಳನ್ನು ಬೇಗ ಕಲಿಯುತ್ತಾರೆ. ಹೀಗಾಗಿ, ಐದನೇ ತರಗತಿವರೆಗೆ ಮಕ್ಕಳ ಮಾತೃಭಾಷೆಯಲ್ಲೇ ಶಿಕ್ಷಣ ನೀಡಲು ನಾವು ಸಮ್ಮತಿಸಿದ್ದೇವೆ, ಎಂದು ಮೋದಿ ಹೇಳಿದರು.
ಹೊಸ ಶಿಕ್ಷಣ ನೀತಿ ಬಗ್ಗೆ ಮಾತನಾಡಿದ ಮೋದಿ, ಕಳೆದ ಸಾಕಷ್ಟು ವರ್ಷಗಳಿಂದ ನಮ್ಮ ಶಿಕ್ಷಣ ನೀತಿಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಹೀಗಾಗಿ ಶಿಕ್ಷಣ ನೀತಿ ಅತ್ಯಗತ್ಯವಾಗಿತ್ತು. ಎನ್ಇಪಿ 2020 ಹೊಸ ವ್ಯವಸ್ಥೆಗೆ ತಕ್ಕಂತೆಯೇ ಇರುತ್ತದೆ. ನಾಲ್ಕು ವರ್ಷಗಳ ಕಾಲ ಇದರ ಬಗ್ಗೆ ಅಧ್ಯಯನ ನಡೆಸಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಒಪ್ಪಿಗೆ ಸೂಚಿಸಿದ್ದೇವೆ, ಎಂದು ಮೋದಿ ಹೇಳಿದ್ದಾರೆ.
ಜುಲೈ 29ರಂದು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಂಗೀಕರಿಸಲಾಗಿದೆ. ಹೊಸ ಕಾನೂನಿನ ಅಡಿಯಲ್ಲಿ ವಿಶ್ವದ ಅಗ್ರ 100 ವಿಶ್ವ ವಿದ್ಯಾಲಯಗಳು ನಮ್ಮ ದೇಶದಲ್ಲಿ ಕಾರ್ಯ ನಿರ್ವಹಿಸಬಹುದಾಗಿದೆ. ಶೈಕ್ಷಣಿಕ ಹೊರೆಯನ್ನು ಕಡಿಮೆಗೊಳಿಸುವುದು, ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆಯ ವ್ಯಾಪ್ತಿಯನ್ನು ವಿಸ್ತರಿಸುವುದು, ಪಠ್ಯಕ್ರಮದಲ್ಲಿ ಪ್ರಮುಖ ಬದಲಾವಣೆ ಸೇರಿದಂತೆ ಹಲವು ಹೊಸ ನೀತಿಗಳನ್ನು ಇದರಲ್ಲಿ ಪ್ರಸ್ತಾಪಿಸಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm