ಬ್ರೇಕಿಂಗ್ ನ್ಯೂಸ್
07-08-20 07:25 am Headline Karnataka News Network ದೇಶ - ವಿದೇಶ
ನವದೆಹಲಿ (ಆ.7): ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ನಡೆದ ಉನ್ನತ ಶಿಕ್ಷಣದಲ್ಲಿ ಮಹಾ ಪರಿವರ್ತನೆ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಮಕ್ಕಳು ಮಾತೃಭಾಷೆಯಲ್ಲಿ ಬಹುಬೇಗ ಕಲಿಯುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹಾಗೂ ಯುಜಿಸಿ ಒಟ್ಟಾಗಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಈ ವೇಳೆ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ವಿಚಾರವಾಗಿ ಮಾತನಾಡಿದ್ದಾರೆ. ಮಕ್ಕಳು ತಮ್ಮ ಮಾತೃ ಭಾಷೆಯಲ್ಲಿ ವಿಚಾರಗಳನ್ನು ಬೇಗ ಕಲಿಯುತ್ತಾರೆ. ಹೀಗಾಗಿ, ಐದನೇ ತರಗತಿವರೆಗೆ ಮಕ್ಕಳ ಮಾತೃಭಾಷೆಯಲ್ಲೇ ಶಿಕ್ಷಣ ನೀಡಲು ನಾವು ಸಮ್ಮತಿಸಿದ್ದೇವೆ, ಎಂದು ಮೋದಿ ಹೇಳಿದರು.
ಹೊಸ ಶಿಕ್ಷಣ ನೀತಿ ಬಗ್ಗೆ ಮಾತನಾಡಿದ ಮೋದಿ, ಕಳೆದ ಸಾಕಷ್ಟು ವರ್ಷಗಳಿಂದ ನಮ್ಮ ಶಿಕ್ಷಣ ನೀತಿಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಹೀಗಾಗಿ ಶಿಕ್ಷಣ ನೀತಿ ಅತ್ಯಗತ್ಯವಾಗಿತ್ತು. ಎನ್ಇಪಿ 2020 ಹೊಸ ವ್ಯವಸ್ಥೆಗೆ ತಕ್ಕಂತೆಯೇ ಇರುತ್ತದೆ. ನಾಲ್ಕು ವರ್ಷಗಳ ಕಾಲ ಇದರ ಬಗ್ಗೆ ಅಧ್ಯಯನ ನಡೆಸಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಒಪ್ಪಿಗೆ ಸೂಚಿಸಿದ್ದೇವೆ, ಎಂದು ಮೋದಿ ಹೇಳಿದ್ದಾರೆ.
ಜುಲೈ 29ರಂದು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಂಗೀಕರಿಸಲಾಗಿದೆ. ಹೊಸ ಕಾನೂನಿನ ಅಡಿಯಲ್ಲಿ ವಿಶ್ವದ ಅಗ್ರ 100 ವಿಶ್ವ ವಿದ್ಯಾಲಯಗಳು ನಮ್ಮ ದೇಶದಲ್ಲಿ ಕಾರ್ಯ ನಿರ್ವಹಿಸಬಹುದಾಗಿದೆ. ಶೈಕ್ಷಣಿಕ ಹೊರೆಯನ್ನು ಕಡಿಮೆಗೊಳಿಸುವುದು, ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆಯ ವ್ಯಾಪ್ತಿಯನ್ನು ವಿಸ್ತರಿಸುವುದು, ಪಠ್ಯಕ್ರಮದಲ್ಲಿ ಪ್ರಮುಖ ಬದಲಾವಣೆ ಸೇರಿದಂತೆ ಹಲವು ಹೊಸ ನೀತಿಗಳನ್ನು ಇದರಲ್ಲಿ ಪ್ರಸ್ತಾಪಿಸಲಾಗಿದೆ.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm