ಬ್ರೇಕಿಂಗ್ ನ್ಯೂಸ್
01-03-24 02:16 pm HK News Desk ದೇಶ - ವಿದೇಶ
ಹೈದರಾಬಾದ್, ಮಾ 01: ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದದ್ದಕ್ಕೆ ಅಧಿಕಾರಿಗಳು ಪರೀಕ್ಷೆ ಬರೆಯಲು ಅವಕಾಶ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೋರ್ವ ಮನನೊಂದು ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ತೆಲಂಗಾಣದ ಅದಿಲಾಬಾದ್ ಜಿಲ್ಲೆಯ ಮಂಗುರ್ಲಾ ಗ್ರಾಮದಲ್ಲಿ ಗುರುವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಟೇಕಂ ಶಿವಕುಮಾರ್ ಎಂದು ಗುರುತಿಸಲಾಗಿದೆ.
ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡ ಸ್ಥಳದ ಬಳಿ ತೆಲುಗಿನಲ್ಲಿ ಬರೆದಿರುವ ಡೆತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ “ನನ್ನನ್ನು ಕ್ಷಮಿಸಿ, ಅಪ್ಪಾ, ನಾನು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದಿದ್ದಕ್ಕೆ ನನಗೆ ಪರೀಕ್ಷೆ ಬರೆಯಲು ಅವಕಾಶ ಸಿಗಲಿಲ್ಲ ನನ್ನನ್ನು ಕ್ಷಮಿಸಿಬಿಡಿ. ನೀವು ನನಗಾಗಿ ಬಹಳಷ್ಟು ಮಾಡಿದ್ದೀರಿ, ಆದರೆ ನಾನು ನಿಮಗಾಗಿ ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಬರೆದಿದ್ದಾನೆ.
ಶಿಕ್ಷಣ ಮಂಡಳಿಯ ಕಟ್ಟುನಿಟ್ಟಿನ ಕ್ರಮ:
ಪರೀಕ್ಷಾ ಕೇಂದ್ರಕ್ಕೆ ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ಬರಬೇಕೆಂದು ಶಿಕ್ಷಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ ನಿಗದಿತ ಸಮಯಕ್ಕಿಂತ ತಡವಾಗಿ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಆದೇಶ ನೀಡಿದೆ. ಇದರ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಅಧಿಕಾರಿಗಳು ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ.
ಕುಟುಂಬಸ್ಥರ ಆಕ್ರಂದನ:
ವಿದ್ಯಾರ್ಥಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ಕುಟುಂಬ ಸದಸ್ಯರಿಗೆ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ, ಈ ವೇಳೆ ಶಿವಕುಮಾರ್ ದೇಹ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Hyderabad Student commits suicide after he was not allowed to write exams being late. His death note was later found. He jumped into the canal and committed suicide.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 10:51 pm
HK News Desk
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
17-05-25 05:00 pm
Bangalore Correspondent
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm