ಬ್ರೇಕಿಂಗ್ ನ್ಯೂಸ್
01-03-24 02:16 pm HK News Desk ದೇಶ - ವಿದೇಶ
ಹೈದರಾಬಾದ್, ಮಾ 01: ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದದ್ದಕ್ಕೆ ಅಧಿಕಾರಿಗಳು ಪರೀಕ್ಷೆ ಬರೆಯಲು ಅವಕಾಶ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೋರ್ವ ಮನನೊಂದು ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ತೆಲಂಗಾಣದ ಅದಿಲಾಬಾದ್ ಜಿಲ್ಲೆಯ ಮಂಗುರ್ಲಾ ಗ್ರಾಮದಲ್ಲಿ ಗುರುವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಟೇಕಂ ಶಿವಕುಮಾರ್ ಎಂದು ಗುರುತಿಸಲಾಗಿದೆ.
ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡ ಸ್ಥಳದ ಬಳಿ ತೆಲುಗಿನಲ್ಲಿ ಬರೆದಿರುವ ಡೆತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ “ನನ್ನನ್ನು ಕ್ಷಮಿಸಿ, ಅಪ್ಪಾ, ನಾನು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದಿದ್ದಕ್ಕೆ ನನಗೆ ಪರೀಕ್ಷೆ ಬರೆಯಲು ಅವಕಾಶ ಸಿಗಲಿಲ್ಲ ನನ್ನನ್ನು ಕ್ಷಮಿಸಿಬಿಡಿ. ನೀವು ನನಗಾಗಿ ಬಹಳಷ್ಟು ಮಾಡಿದ್ದೀರಿ, ಆದರೆ ನಾನು ನಿಮಗಾಗಿ ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಬರೆದಿದ್ದಾನೆ.
ಶಿಕ್ಷಣ ಮಂಡಳಿಯ ಕಟ್ಟುನಿಟ್ಟಿನ ಕ್ರಮ:
ಪರೀಕ್ಷಾ ಕೇಂದ್ರಕ್ಕೆ ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ಬರಬೇಕೆಂದು ಶಿಕ್ಷಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ ನಿಗದಿತ ಸಮಯಕ್ಕಿಂತ ತಡವಾಗಿ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಆದೇಶ ನೀಡಿದೆ. ಇದರ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಅಧಿಕಾರಿಗಳು ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ.
ಕುಟುಂಬಸ್ಥರ ಆಕ್ರಂದನ:
ವಿದ್ಯಾರ್ಥಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ಕುಟುಂಬ ಸದಸ್ಯರಿಗೆ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ, ಈ ವೇಳೆ ಶಿವಕುಮಾರ್ ದೇಹ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Hyderabad Student commits suicide after he was not allowed to write exams being late. His death note was later found. He jumped into the canal and committed suicide.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm