ಬ್ರೇಕಿಂಗ್ ನ್ಯೂಸ್
01-03-24 02:16 pm HK News Desk ದೇಶ - ವಿದೇಶ
ಹೈದರಾಬಾದ್, ಮಾ 01: ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದದ್ದಕ್ಕೆ ಅಧಿಕಾರಿಗಳು ಪರೀಕ್ಷೆ ಬರೆಯಲು ಅವಕಾಶ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೋರ್ವ ಮನನೊಂದು ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ತೆಲಂಗಾಣದ ಅದಿಲಾಬಾದ್ ಜಿಲ್ಲೆಯ ಮಂಗುರ್ಲಾ ಗ್ರಾಮದಲ್ಲಿ ಗುರುವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಟೇಕಂ ಶಿವಕುಮಾರ್ ಎಂದು ಗುರುತಿಸಲಾಗಿದೆ.
ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡ ಸ್ಥಳದ ಬಳಿ ತೆಲುಗಿನಲ್ಲಿ ಬರೆದಿರುವ ಡೆತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ “ನನ್ನನ್ನು ಕ್ಷಮಿಸಿ, ಅಪ್ಪಾ, ನಾನು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದಿದ್ದಕ್ಕೆ ನನಗೆ ಪರೀಕ್ಷೆ ಬರೆಯಲು ಅವಕಾಶ ಸಿಗಲಿಲ್ಲ ನನ್ನನ್ನು ಕ್ಷಮಿಸಿಬಿಡಿ. ನೀವು ನನಗಾಗಿ ಬಹಳಷ್ಟು ಮಾಡಿದ್ದೀರಿ, ಆದರೆ ನಾನು ನಿಮಗಾಗಿ ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಬರೆದಿದ್ದಾನೆ.
ಶಿಕ್ಷಣ ಮಂಡಳಿಯ ಕಟ್ಟುನಿಟ್ಟಿನ ಕ್ರಮ:
ಪರೀಕ್ಷಾ ಕೇಂದ್ರಕ್ಕೆ ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ಬರಬೇಕೆಂದು ಶಿಕ್ಷಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ ನಿಗದಿತ ಸಮಯಕ್ಕಿಂತ ತಡವಾಗಿ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಆದೇಶ ನೀಡಿದೆ. ಇದರ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಅಧಿಕಾರಿಗಳು ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ.
ಕುಟುಂಬಸ್ಥರ ಆಕ್ರಂದನ:
ವಿದ್ಯಾರ್ಥಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ಕುಟುಂಬ ಸದಸ್ಯರಿಗೆ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ, ಈ ವೇಳೆ ಶಿವಕುಮಾರ್ ದೇಹ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Hyderabad Student commits suicide after he was not allowed to write exams being late. His death note was later found. He jumped into the canal and committed suicide.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm