ಬ್ರೇಕಿಂಗ್ ನ್ಯೂಸ್
26-11-20 03:46 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 26: ತಮಿಳ್ನಾಡು ಕರಾವಳಿಗೆ ಅಪ್ಪಳಿಸಿದ್ದ ನೀವಾರ್ ಚಂಡಮಾರುತ ಕ್ಷೀಣವಾಗ ತೊಡಗಿದೆ. ಎರಡು ದಿನಗಳಿಂದ ಭಾರೀ ಮಳೆ ಮತ್ತು ಬಿರುಗಾಳಿಗೆ ತತ್ತರಿಸಿದ್ದ ಚೆನ್ನೈ ಮತ್ತು ಪುದುಚೇರಿ ಮಹಾ ವಿಪತ್ತಿನಿಂದ ಪಾರಾಗಿದೆ. ನೀವಾರ್ ಚಂಡಮಾರುತಕ್ಕೆ ತುತ್ತಾಗಿ ತಮಿಳುನಾಡಿನಲ್ಲಿ ಐದು ಮಂದಿ ಬಲಿಯಾಗಿದ್ದಾರೆ.
ಕರಾವಳಿಯಲ್ಲಿ ವಾಸವಿದ್ದ ಒಂದು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಪುದುಚೇರಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿರುವುದನ್ನು ಮುಂದುವರಿಸಲಾಗಿದ್ದು ಜನರು ಮನೆಯಿಂದ ಹೊರಬಾರದೆಂದು ಸೂಚನೆ ನೀಡಲಾಗಿದೆ. ಉಳಿದಂತೆ, ಮಳೆಯ ತೀವ್ರತೆ ಕಡಿಮೆಯಾದ ಪ್ರದೇಶಗಳಲ್ಲಿ ಬಸ್ ಸಂಚಾರವನ್ನು ಪುನರ್ ಆರಂಭಿಸಲು ಅನುಮತಿ ನೀಡಲಾಗಿದೆ.
ವಿಲ್ಲುಪುರಂ, ತಿರುವಾರೂರು, ತಂಜಾವೂರು, ಕುದ್ದಲೂರು, ನಾಗಪಟ್ಟಿಣಂ, ಪುದುಕೋಟೈ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ರಾಜ್ಯ ಸಾರಿಗೆಯನ್ನು ಬಂದ್ ಮಾಡಲಾಗಿತ್ತು. ಇಂದು ಮಧ್ಯಾಹ್ನದಿಂದ ಕೆಲವು ಬಸ್ ಗಳು ಸಂಚಾರ ಆರಂಭಿಸಿವೆ.
ಮುಂದಿನ ಆರು ಗಂಟೆಗಳ ಅವಧಿಯಲ್ಲಿ ಉತ್ತರ ತಮಿಳುನಾಡು ಕರಾವಳಿ ಮೂಲಕ ನೀವಾರ್ ಚಂಡಮಾರುತ ಕ್ಷೀಣವಾಗುತ್ತಾ ಚಲಿಸಲಿದ್ದು, ರಾತ್ರಿ ವೇಳೆಗೆ ಮಳೆ, ಗಾಳಿ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದೇ ವೇಳೆ, ರಾಜ್ಯ ಮುಖ್ಯ ಕಾರ್ಯದರ್ಶಿ ಮಾಹಿತಿ ನೀಡಿ, ಚಂಡಮಾರುತ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮೂರು ಮಂದಿ ಗಾಯಗೊಂಡಿದ್ದಾರೆ. 101 ಮನೆಗಳು ಮಳೆಗೆ ಕುಸಿದು ಬಿದ್ದಿರುವುದಾಗಿ ತಿಳಿಸಿದ್ದಾರೆ.
ಚೆನ್ನೈ ಮತ್ತು ಕೆಲವು ಜಿಲ್ಲೆಗಳು ಹಾಗೂ ಪುದುಚೇರಿಯಲ್ಲಿ ಎರಡು ದಿನಗಳಿಂದ ವಿಮಾನ ಮತ್ತು ರೈಲು ಸೇವೆಯನ್ನೂ ರದ್ದುಪಡಿಸಲಾಗಿತ್ತು.
ಇದೇ ವೇಳೆ, ತಮಿಳುನಾಡು ಮತ್ತು ಪುದುಚೇರಿ ಮುಖ್ಯಮಂತ್ರಿಗಳ ಜೊತೆ ಕೇಂದ್ರ ಗೃಹಸಚಿವ ಅಮಿತ್ ಷಾ ಫೋನ್ ಮೂಲಕ ಮಾತನಾಡಿದ್ದು, ಎಲ್ಲ ರೀತಿಯ ನೆರವು ನೀಡುವ ಭರವಸೆ ನೀಡಿದ್ದಾರೆ.
#WATCH Chennai witnessing spell of strong winds after #Cyclone Nivar made landfall near Puducherry late last night#TamilNadu pic.twitter.com/jZZB3FCJUX
— ANI (@ANI) November 26, 2020
Omg!!! Fishermen returning to the shore in #Kasimedu #CycloneNivar #NivarCycloneUpdate pic.twitter.com/40UecA7cz2
— Bharathi S. P. (@aadhirabharathi) November 25, 2020
Parry's Corner#Chennaiweather#ChennaiRain#ChembarambakkamLake#NivarCycloneUpdate#CycloneNivar#CycloneAlert #நிவர் #Chennai #Nivarpuyal #நிவர்புயல் #NivarCyclone pic.twitter.com/EIaiAZeanD pic.twitter.com/xhOdiRzepf
— மதியின் பார்வையில் (@Madhi_Editz) November 25, 2020
The 'very severe' cyclonic storm Nivar, which has weakened into a 'severe' cyclonic storm, has crossed the coast near Puducherry at midnight and five persons have been dead.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm