ಬ್ರೇಕಿಂಗ್ ನ್ಯೂಸ್
26-11-20 04:33 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 26: ದೇಶದ ವಿಮಾನಯಾನ ಸುರಕ್ಷತಾ ನಿಯಂತ್ರಕ ಪ್ರಾಧಿಕಾರ ಡಿಜಿಸಿಎ, ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರದ ಮೇಲಿನ ನಿರ್ಬಂಧವನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿದೆ.
ಆದರೆ ಈ ನಿರ್ಬಂಧವು ಎಲ್ಲ ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನ ಚಟುವಟಿಕೆಗಳಿಗೆ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಿರ್ದಿಷ್ಟವಾಗಿ ಅನುಮತಿ ನೀಡಿರುವ ವಿಮಾನಗಳಿಗೆ ಅನ್ವಯವಾಗುವುದಿಲ್ಲ ಎಂದು ಅಧಿಕೃತ ಸುತ್ತೋಲೆ ತಿಳಿಸಿದೆ.
ಜೂನ್ 26ರಂದು ಹೊರಡಿಸಲಾಗಿದ್ದ ಸುತ್ತೋಲೆಯಲ್ಲಿ ಸಣ್ಣ ಮಾರ್ಪಾಟು ಮಾಡಲಾಗಿದೆ. ಭಾರತದಿಂದ ಹೋಗುವ ಮತ್ತು ಭಾರತಕ್ಕೆ ಬರುವ ಎಲ್ಲ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ನಿಗದಿತ ಸೇವೆಗಳ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು 2020ರ ಡಿಸೆಂಬರ್ 31ರವರೆಗೂ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ಆದೇಶ ಹೇಳಿದೆ.

ಕೆಲವು ಆಯ್ದ ಮಾರ್ಗಗಳಲ್ಲಿ ನಿರ್ದೇಶನಾಲಯವು ನಿಗದಿಗೊಳಿಸಿರುವ ಸಮಯಗಳಲ್ಲಿ ಅಂತಾರಾಷ್ಟ್ರೀಯ ವಿಮಾನಗಳು ಹಾರಾಟ ನಡೆಸಲಿವೆ ಎಂದು ಅದು ತಿಳಿಸಿದೆ. ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವು ವೇಳಾಪಟ್ಟಿಯಂತೆ ನಡೆಯಲು ಭಾರತ ಅವಕಾಶ ನೀಡಿಲ್ಲ. ಆದರೆ ಕೆಲವು ದೇಶಗಳೊಂದಿಗೆ ಪರಸ್ಪರ ಹೊಂದಾಣಿಕೆಯೊಂದಿಗೆ ಕೆಲವು ಸಮಯಗಳಲ್ಲಿ ವಿಮಾನ ಹಾರಾಟಕ್ಕೆ ಅವಕಾಶ ನೀಡಲಾಗುತ್ತಿದೆ. ಮೇ ತಿಂಗಳಿನಿಂದ ವಂದೇ ಭಾರತ್ ಯೋಜನೆಯಡಿ ಮತ್ತು ಆಯ್ದ ದೇಶಗಳೊಂದಿಗೆ ಜುಲೈ ತಿಂಗಳಿನಿಂದ ದ್ವಿಪಕ್ಷೀಯ ಏರ್ ಬಬಲ್ ಒಪ್ಪಂದದೊಂದಿಗೆ ವಿಮಾನ ಹಾರಾಟ ನಡೆಯುತ್ತಿದೆ.
ಕೊರೊನಾ ವೈರಸ್ ಸೋಂಕು ತೀವ್ರಗೊಂಡ ಸಂದರ್ಭದಲ್ಲಿ ಲಾಕ್ಡೌನ್ ಜಾರಿಯಾದ ವೇಳೆ ಮಾರ್ಚ್ 23ರಂದು ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ಸಂಚಾರವನ್ನು ಅಮಾನತುಗೊಳಿಸಲಾಗಿತ್ತು. ನಿರ್ಬಂಧದ ಅವಧಿ ನವೆಂಬರ್ 30ರಂದು ಅಂತ್ಯಗೊಳ್ಳಲಿದ್ದು, ಅದನ್ನು ಮತ್ತೆ ವಿಸ್ತರಿಸಲಾಗಿದೆ.
Country's aviation safety regulator DGCA today extended the suspension of scheduled international commercial passenger flights to December 31.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 09:03 pm
HK News Staffer
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm