ಬ್ರೇಕಿಂಗ್ ನ್ಯೂಸ್
06-03-24 04:20 pm HK News Desk ದೇಶ - ವಿದೇಶ
ಕೊಲ್ಕತ್ತಾ, ಮಾ.6: ದೇಶದಲ್ಲಿ ಇದೇ ಮೊದಲ ಬಾರಿಗೆ ನದಿಯ ಅಡಿಭಾಗದಲ್ಲಿ ಸುರಂಗ ಕೊರೆದು ಅದರಲ್ಲಿ ಮೆಟ್ರೋ ರೈಲನ್ನು ಸಂಚರಿಸುವಂತೆ ಮಾಡಲಾಗಿದ್ದು, ಅಪೂರ್ವ ಯೋಜನೆಯನ್ನು ಕೊಲ್ಕತ್ತಾ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಸಮರ್ಪಿಸಿದ್ದಾರೆ.
ಕೊಲ್ಕತ್ತಾ ಮತ್ತು ಹೌರಾ ನಗರವನ್ನು ಪೂರ್ವ- ಪಶ್ಚಿಮಕ್ಕೆ ಸಂಪರ್ಕಿಸುವ ಮೆಟ್ರೋ ಯೋಜನೆ ಇದಾಗಿದ್ದು, 4.8 ಕಿಮೀ ಉದ್ದಕ್ಕೆ ಸುರಂಗ ಮಾರ್ಗದಲ್ಲಿ ಸಂಚಾರ ಮಾಡಲಿದೆ. ಈ ಭಾಗದ ಆರು ಮೆಟ್ರೋ ನಿಲ್ದಾಣಗಳ ಪೈಕಿ ಮೂರು ನಿಲ್ದಾಣಗಳು ಸುರಂಗದ ಒಳಗಡೆಯೇ ಇದೆ. ಹೌರಾ ಮೈದಾನ್ ಮತ್ತು ಇಸ್ಪ್ಲಾನೇಡ್ ನಿಲ್ದಾಣಗಳ ನಡುವೆ 4.8 ಕಿಮೀ ಅಂತರ ಇದೆ. ಇದರ ನಡುವೆ 1.2 ಕಿಮೀ ಅಂತರದಲ್ಲಿ ಹೂಗ್ಲಿ ನದಿಯಿದ್ದು, ಅದರ ಅಡಿಭಾಗದಲ್ಲಿ 30 ಮೀಟರ್ ಆಳದಲ್ಲಿ ಮೆಟ್ರೋ ಸುರಂಗ ಹಾದು ಹೋಗಿದೆ.







ಪ್ರಧಾನಿ ಮೋದಿ ಈ ಸುರಂಗ ಮಾರ್ಗವನ್ನು ಲೋಕಾರ್ಪಣೆ ಮಾಡಿದ್ದಲ್ಲದೆ, ಅದೇ ರೈಲಿನಲ್ಲಿ ಮಕ್ಕಳ ಜೊತೆಗೆ ಕುಳಿತು ಸಂಚಾರ ಮಾಡಿದ್ದಾರೆ. ಶಾಲಾ ಮಕ್ಕಳ ಜೊತೆಗೆ ಕುಳಿತು ಸಂವಾದ ನಡೆಸುವ ವಿಡಿಯೋ ಟ್ವಿಟರ್ ನಲ್ಲಿ ವೈರಲ್ ಆಗಿದೆ. ಮೆಟ್ರೋ ಸುರಂಗ ಮಾರ್ಗವನ್ನು 4138 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು ದೇಶದ ಮೊದಲ ನೀರಿನಾಳದಲ್ಲಿ ನಿರ್ಮಿಸಲ್ಪಟ್ಟ ರೈಲು ಮಾರ್ಗ ಎಂದೆನಿಸಿದೆ.
ಪ್ರಧಾನಿ ಮೋದಿ ಒಟ್ಟು 15450 ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಇದೇ ಸಂದರ್ಭ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಜನರು ಮೋದಿ ಮೋದಿ ಮತ್ತು ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ. ಅಲ್ಲದೆ, ರಸ್ತೆ ಉದ್ದಕ್ಕೂ ಸೇರಿದ್ದ ಜನರು ಮೋದಿಗೆ ಜೈಕಾರ ಹಾಕಿದ್ದಾರೆ. ಜನರನ್ನು ನೋಡಿ ಉತ್ಸಾಹಗೊಂಡ ಮೋದಿ ಕಾರಿನಲ್ಲೇ 12 ಕಿಮೀ ಉದ್ದಕ್ಕೆ ರಸ್ತೆಯಲ್ಲಿ ಸಂಚರಿಸಿದ್ದಾರೆ.
Prime Minister Narendra Modi on Wednesday inaugurated India's first underwater metro services, an engineering marvel in itself.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm