ಬ್ರೇಕಿಂಗ್ ನ್ಯೂಸ್
08-03-24 02:15 pm HK News Desk ದೇಶ - ವಿದೇಶ
ನವದೆಹಲಿ, ಮಾ.8: ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ ಕೇಂದ್ರ ಸರ್ಕಾರ ಜನಸಾಮಾನ್ಯರ ಆರ್ಥಿಕ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಇಳಿಕೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಮಹಿಳೆಯರಿಗೆ ಗಿಫ್ಟ್ ನೀಡಿದ್ದಾರೆ.
ಈಗಾಗಲೇ ಉಜ್ವಲ ಯೋಜನೆಯಡಿ ಬಡ ಕುಟುಂಬಕ್ಕೆ ಪ್ರತಿ ಎಲ್ಪಿಜಿ ಸಿಲಿಂಡರ್ಗೆ ಸರಕಾರ 300 ರೂ. ಸಬ್ಸಿಡಿ ನೀಡುತ್ತಿದೆ. ಸಬ್ಸಿಡಿ ಯೋಜನೆಯನ್ನು ಏಪ್ರಿಲ್ 1ರಿಂದ ಆರಂಭಿಸಿ ಮುಂದಿನ ಒಂದು ವರ್ಷದ ವರೆಗೆ ವಿಸ್ತರಿಸಲು ಗುರುವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಎಕ್ಸ್'ನಲ್ಲಿ ಈ ಬಗ್ಗೆ ಫೋಸ್ಟ್ ಹಾಕಿರುವ ಪ್ರಧಾನಿ ನರೇಂದ್ರ ಮೋದಿ, ಇದು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲಿದೆ. ವಿಶೇಷವಾಗಿ ಮಹಿಳೆಯರಿಗೆ ಪ್ರಯೋಜನವಾಗಲಿದೆ ಎಂದು ಹೇಳಿದ್ದಾರೆ.
ಕಳೆದ ವರ್ಷ ಅಕ್ಟೋಬರ್ನಲ್ಲಿ ಕೇಂದ್ರ ಸರ್ಕಾರವು ಪ್ರತಿ ವರ್ಷಕ್ಕೆ 12 ಸಿಲಿಂಡರ್ಗಳಿಗೆ ಅಂದರೆ 14.2 ಕೆಜಿ ತೂಕದ ಸಿಲಿಂಡರ್ಗಳಿಗೆ 200 ರೂ.ಗಳಿಂದ 300 ರೂ.ಗೆ ಸಬ್ಸಿಡಿ ಹೆಚ್ಚಿಸಿತ್ತು. ಪ್ರಸಕ್ತ ಹಣಕಾಸು ವರ್ಷದಲ್ಲಿ ಸಿಲಿಂಡರ್ಗೆ 300 ರೂ. ಸಬ್ಸಿಡಿ ನೀಡಲಾಗಿದ್ದು, ಇದು ಮಾರ್ಚ್ 31 ರಂದು ಕೊನೆಗೊಳ್ಳುತ್ತದೆ.
ಸದ್ಯ ಕೇಂದ್ರ ಸರ್ಕಾರ ಪ್ರತಿ ಸಿಲಿಂಡರ್ಗೆ 300 ರೂಪಾಯಿ ಸಬ್ಸಿಡಿ ನೀಡುತ್ತಿದೆ. ಈಗ ಮತ್ತೆ 100 ರೂ. ಸಬ್ಸಿಡಿ ಘೋಷಣೆ ಮಾಡಿರುವುದರಿಂದ ಒಟ್ಟಾರೆ ಒಂದು ಸಿಲಿಂಡರ್ಗೆ 400 ರೂಪಾಯಿ ಸಬ್ಸಿಡಿ ಸಿಗಲಿದೆ. ಸಬ್ಸಿಡಿ ಹೊರತು ಪಡಿಸಿ ಸಿಲಿಂಡರ್ ಬೆಲೆ 555 ರೂಪಾಯಿ ಇದ್ದು, ಒಂದೊಮ್ಮೆ ಸಬ್ಸಿಡಿ ತೆಗೆದು ಹಾಕಿದರೆ ಒಂದು ಸಿಲಿಂಡರ್ಗೆ 955 ರೂ. ನೀಡಬೇಕಾಗುತ್ತದೆ.
On the occasion of International Women's Day, Prime Minister Narendra Modi announced a reduction of Rs 100 in the prices of LPG cylinders. The revised prices will come into effect beginning midnight, government sources said.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm