ಬ್ರೇಕಿಂಗ್ ನ್ಯೂಸ್
08-03-24 02:28 pm HK News Desk ದೇಶ - ವಿದೇಶ
ನವದೆಹಲಿ, ಮಾ.8: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಕೇಂದ್ರ ಸರ್ಕಾರ ರಾಷ್ಟ್ರಪತಿ ಮೂಲಕ ರಾಜ್ಯಸಭೆ ಸ್ಥಾನಕ್ಕೆ ಸುಧಾಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿದೆ.
ಮಹಿಳಾ ದಿನಾಚರಣೆ ದಿನವೇ ಪ್ರಧಾನಿ ನರೇಂದ್ರ ಮೋದಿ ಈ ಘೋಷಣೆ ಮಾಡಿದ್ದಾರೆ. ರಾಜ್ಯಸಭೆಯಲ್ಲಿ ಸುಧಾಮೂರ್ತಿ ಅವರ ಹಾಜರಿಯು ನಮ್ಮ 'ನಾರಿ ಶಕ್ತಿ'ಗೆ ಸಾಕ್ಷಿಯಾಗಲಿದೆ ಎಂದು ಬಣ್ಣಿಸಿದ್ದಾರೆ. ನಮ್ಮ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಬಲ ಹಾಗೂ ಸಾಮರ್ಥ್ಯಕ್ಕೆ ಸುಧಾಮೂರ್ತಿ ಉದಾಹರಣೆಯಾಗಿದ್ದಾರೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿ ನಮ್ಮ 'ನಾರಿ ಶಕ್ತಿ' ಘೋಷಣೆಗೆ ಶಕ್ತಿಶಾಲಿ ಪುರಾವೆಯಾಗಲಿದೆ. ಫಲಪ್ರದ ಸಂಸದೀಯ ಅಧಿಕಾರಕ್ಕಾಗಿ ಅವರಿಗೆ ಶುಭ ಹಾರೈಸುತ್ತೇನೆ" ಎಂದು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಮೋದಿ ತಿಳಿಸಿದ್ದಾರೆ.

ಸಂಸತ್ತಿನ ಮೇಲ್ಮನೆಗೆ 12 ಸದಸ್ಯರನ್ನು ರಾಷ್ಟ್ರಪತಿ ನೇರವಾಗಿ ನಾಮನಿರ್ದೇಶನ ಮಾಡುತ್ತಾರೆ. ಕಲೆ, ಸಾಹಿತ್ಯ, ವಿಜ್ಞಾನ, ಸಮಾಜ ಸೇವೆ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಮಹತ್ತರ ಕೊಡುಗೆ ಸಲ್ಲಿಸಿದವರಿಗೆ ಈ ಗೌರವ ನೀಡಲಾಗುತ್ತದೆ. ಪ್ರಸ್ತುತ ರಾಜ್ಯಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರ ಒಂದು ಸ್ಥಾನ ಖಾಲಿ ಇತ್ತು. ಆ ಸ್ಥಾನಕ್ಕೆ ಸುಧಾ ಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಕರ್ನಾಟಕದಿಂದ ನಾಮನಿರ್ದೇಶನಗೊಂಡ ಮತ್ತೊಬ್ಬ ರಾಜ್ಯಸಭೆ ಸದಸ್ಯರು.
Infosys founder Narayana Murthy's wife Sudha Murty is nominated to Rajya Sabha by President Droupadi Murmu, Prime Minister Narendra Modi announces on Women's Day in a social media post.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm