ಬ್ರೇಕಿಂಗ್ ನ್ಯೂಸ್
25-03-24 11:09 pm HK News Desk ದೇಶ - ವಿದೇಶ
ಹೈದರಾಬಾದ್, ಮಾ.25: ಲೋಕಸಭೆ ಚುನಾವಣೆಗೂ ಮುನ್ನ ತೆಲಂಗಾಣದಲ್ಲಿ ಪೊಲೀಸ್ ಅಧಿಕಾರಿಗಳ ಫೋನ್ ಕದ್ದಾಲಿಕೆ ಪ್ರಕರಣ ರಾಹಕೀಯ ಬಿರುಗಾಳಿ ಎಬ್ಬಿಸಿದೆ. ಗುಪ್ತಚರ ದಳದ ಮಾಜಿ ಮುಖ್ಯಸ್ಥ ಡಾ. ಟಿ ಪ್ರಭಾಕರ್ ರಾವ್ ಅವರನ್ನು ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಮಾಡಿದ್ದು ಇದರ ಬೆನ್ನಲ್ಲೇ ತಲೆಮರೆಸಿಕೊಂಡಿದ್ದಾರೆ.
ಪ್ರಭಾಕರ್ ರಾವ್ ಸದ್ಯ ಅಮೆರಿಕದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಕೆ ಚಂದ್ರಶೇಖರ ರಾವ್ ನೇತೃತ್ವದ ಹಿಂದಿನ ಬಿಆರ್ಎಸ್ ಸರ್ಕಾರದ ಅವಧಿಯಲ್ಲಿ ಪ್ರತಿಪಕ್ಷ ನಾಯಕರ ಫೋನ್ಗಳನ್ನು ಅಕ್ರಮವಾಗಿ ಕದ್ದಾಲಿಕೆ ಮಾಡುವ ಮೂಲಕ ದತ್ತಾಂಶಗಳನ್ನು ಸಂಗ್ರಹಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.
ಹೈದರಾಬಾದ್ನಲ್ಲಿ ಪ್ರಭಾಕರ್ ರಾವ್ ಅವರ ಮನೆ, ಐ ನ್ಯೂಸ್ ಎಂಬ ತೆಲುಗು ಟಿವಿ ವಾಹಿನಿಯನ್ನು ನಡೆಸುತ್ತಿರುವ ಶ್ರವಣ್ ರಾವ್ ಅವರ ನಿವಾಸ ಸೇರಿದಂತೆ ಸುಮಾರು ಹನ್ನೆರಡು ಇತರ ಸ್ಥಳಗಳನ್ನು ಹುಡುಕಾಟ ನಡೆಸಲಾಗಿದೆ. ಶ್ರವಣ್ ರಾವ್ ಕೂಡ ದೇಶ ತೊರೆದಿದ್ದಾರೆ ಎಂದು ನಂಬಲಾಗಿದ್ದು, ಇಸ್ರೇಲ್ನಿಂದ ಫೋನ್ ಟ್ಯಾಪಿಂಗ್ ಉಪಕರಣಗಳನ್ನು ತರಿಸಿ ಸರ್ವರ್ಗಳನ್ನು ಸ್ಥಾಪಿಸಲು ಇವರು ಸಹಾಯ ಮಾಡಿದ್ದಾರೆ ಎನ್ನಲಾಗಿದೆ.
ಪ್ರಕರಣದಲ್ಲಿ ಈಗಾಗಲೇ ಮೂವರು ಐಪಿಎಸ್ ದರ್ಜೆ ಅಧಿಕಾರಿಗಳನ್ನು ಬಂಧಿಸಲಾಗಿದೆ. ಹೆಚ್ಚುವರಿ ಎಸ್ಪಿಗಳಾದ ಭುಜಂಗ ರಾವ್, ತಿರುಪತಣ್ಣ, ಮತ್ತು ಡಿವೈಎಸ್ಪಿ ಪ್ರಣೀತ್ ರಾವ್ ಅವರನ್ನು ಈಗಾಗಲೇ ಬಂಧಿಸಲಾಗಿದೆ. ಭುಜಂಗ ರಾವ್ ಮತ್ತು ತಿರುಪತಣ್ಣ ಖಾಸಗಿ ವ್ಯಕ್ತಿಗಳ ಮೇಲೆ ಅಕ್ರಮವಾಗಿ ನಿಗಾ ವಹಿಸಿ ಸಾಕ್ಷ್ಯ ನಾಶಪಡಿಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Former Telangana Intelligence Bureau chief T Prabhakhar Rao has been named as Accused No 1 in the phone-tapping case that has roiled the state ahead of a general election. Mr Rao - on whose order reams of electronic data is said to have been gathered by illegally tapping the phones of opposition leaders during the earlier BRS government led by K Chandrashekar Rao - is reportedly in the United States. A look-out notice has been issued in his name.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm