ಬ್ರೇಕಿಂಗ್ ನ್ಯೂಸ್
27-03-24 01:59 pm HK News Desk ದೇಶ - ವಿದೇಶ
ನವದೆಹಲಿ, ಮಾ.27: ದೇಶದ ಅಭಿವೃದ್ಧಿಯ ಕುರಿತಾಗಿ ರಾಜಕಾರಣಿಗಳ ಪ್ರಚೋದನಾತ್ಮಕ ಮಾತುಗಳನ್ನು ನಂಬಬೇಡಿ. ಈ ರೀತಿಯ ಮಾತುಗಳನ್ನು ನಂಬುವುದೇ ಭಾರತೀಯರು ಮಾಡುತ್ತಿರುವ ಬಹುದೊಡ್ಡ ತಪ್ಪು ಎಂದು ಪ್ರಸಿದ್ಧ ಆರ್ಥಿಕ ತಜ್ಞ, ಮಾಜಿ ಆರ್ ಬಿಐ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.
ಆರ್ಥಿಕತೆ ಬಗ್ಗೆ ರಾಜಕಾರಣಿಗಳು ಹೇಳುತ್ತಿರುವ ಹೈಪ್ ಮಾತುಗಳು ನಿಜವಾಗಲು ತುಂಬ ವರ್ಷಗಳ ಕಠಿಣ ಪರಿಶ್ರಮ ಬೇಕಾಗಬಹುದು. ಆದರೆ ಕೆಲವು ರಾಜಕಾರಣಿಗಳು ಇದೇ ಸತ್ಯವೆಂದು ಜನರನ್ನು ತಮ್ಮ ಮಾತುಗಳಿಂದ ನಂಬಿಸುತ್ತಿದ್ದಾರೆ. ಅಂತಹ ಮಾತುಗಳನ್ನು ನಂಬುತ್ತಿರುವುದೇ ಭಾರತೀಯರು ಮಾಡುತ್ತಿರುವ ದೊಡ್ಡ ತಪ್ಪು ಎಂದವರು ಹೇಳಿದ್ದಾರೆ.
ಚುನಾವಣೆ ಬಳಿಕ ಅಧಿಕಾರಕ್ಕೆ ಬರುವವರಿಗೆ ಶಿಕ್ಷಣವನ್ನು ಉತ್ತಮಗೊಳಿಸುವುದು ಮತ್ತು ಶಿಕ್ಷಣ ಮುಗಿಸಿ ಪರಿಶ್ರಮಿಗಳನ್ನು ಹೊರಗೆ ತರಬೇಕಾದ ಬಹುದೊಡ್ಡ ಸವಾಲು ಇದೆ. ಇಂತಹ ಮಾನದಂಡಗಳನ್ನು ಅನುಸರಿಸದೇ ಇದ್ದಲ್ಲಿ ಭಾರತದ ಯುವಜನಾಂಗ ಮುಂದೆ ಕಷ್ಟ ಪಡಬೇಕಾಗಬಹುದು ಎಂದಿದ್ದಾರೆ.
2047ರಲ್ಲಿ ಅಭಿವೃದ್ಧಿಗೊಂಡ ರಾಷ್ಟ್ರವಾಗಬೇಕೆಂದು ಮೋದಿ ಟಾರ್ಗೆಟ್ ನೀಡಿರುವುದನ್ನು ನಾನ್ ಸೆನ್ಸ್ ಎಂದಿರುವ ರಘುರಾಮ್ ರಾಜನ್, ನಿಮ್ಮ ಅದೆಷ್ಟೋ ಮಕ್ಕಳಿಗೆ ಉತ್ತಮ ಶಿಕ್ಷಣವೇ ಸಿಗುತ್ತಿಲ್ಲ. ಬಡತನ ಕಾರಣದಿಂದ ಶಾಲೆಯಿಂದ ಹೊರಗುಳಿಯುವೇ ರೇಟಿಂಗ್ ಹೆಚ್ಚಿರುವಾಗ ಇಂತಹದ್ದನ್ನೆಲ್ಲ ಒಪ್ಪಿಕೊಳ್ಳುವ ಹಾಗಿಲ್ಲ. ನಾವು ಖಂಡಿತವಾಗಿಯೂ ಅಭಿವೃದ್ಧಿಯ ಗತಿಯಲ್ಲಿದ್ದೇವೆ. ಆದರೆ ಯುವಜನಾಂಗ ಶಿಕ್ಷಣ ಪಡೆದು ಒಳ್ಳೆಯ ಉದ್ಯೋಗ ಪಡೆಯುತ್ತಿದ್ದರೆ ಮಾತ್ರ ಇದನ್ನೆಲ್ಲ ಹೇಳಿಕೊಳ್ಳಬಹುದು. ವಾಸ್ತವ ಹೇಳಬೇಕಿದ್ದರೆ ನಾವು ವಿಷಾದಕರ ಸ್ಥಿತಿಯಲ್ಲಿದ್ದೇವೆ ಎಂದಿದ್ದಾರೆ.
ಭಾರತ ಅತಿ ವೇಗದಲ್ಲಿ ಬೆಳವಣಿಗೆ ಹೊಂದುತ್ತಿರುವುದರಿಂದ ವಿದೇಶಿಗರು ಹೂಡಿಕೆಯತ್ತ ಆಸಕ್ತಿ ತೋರುತ್ತಿದ್ದಾರೆ. ಹಾಗಂತ, ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಭಾರತ ಸರಕಾರದ ಬಜೆಟ್ ನೀತಿಗಳಲ್ಲಿ ಉನ್ನತ ಶಿಕ್ಷಣಕ್ಕೆ ಆದ್ಯತೆ ನೀಡುವ ಬದಲು ಚಿಪ್ ಸಬ್ಸಿಡಿಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಸೆಮಿ ಕಂಡಕ್ಟರ್ ಉದ್ಯಮ ಸ್ಥಾಪನೆಗೆ ನಾವು 76 ಸಾವಿರ ಕೋಟಿ ಸಬ್ಸಿಡಿ ನೀಡುತ್ತಿದ್ದರೆ, ಉನ್ನತ ಶಿಕ್ಷಣಕ್ಕೆ 46 ಸಾವಿರ ಕೋಟಿ ವ್ಯಯ ಮಾಡುತ್ತಿದ್ದೇವೆ. ಚಿಪ್ ತಯಾರಿಸುವ ಉದ್ಯಮಗಳ ಸ್ಥಾಪನೆಗೆ ಆಸಕ್ತಿ ತೋರುತ್ತಿದ್ದಾರೆ. ಆದರೆ ನಮ್ಮಲ್ಲಿ ಚಿಪ್ ತಯಾರಿಸವುದು ಹೇಗೆ ಎಂಬುದನ್ನು ತಿಳಿಯುವ ಇಂಜಿನಿಯರ್ ಗಳ ಉತ್ಪಾದನೆಗೆ ಆಸಕ್ತಿ ತೋರುತ್ತಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
Former Reserve Bank of India Governor and well-known economist Raghuram Rajan said India is making a mistake believing the hype around its strong economic growth. Rajan’s comment came during an interview with Bloomberg News, where he said there are significant structural problems that need to be fixed for the country to meet its potential.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm