ಬ್ರೇಕಿಂಗ್ ನ್ಯೂಸ್
29-03-24 08:20 pm HK News Desk ದೇಶ - ವಿದೇಶ
ನವದೆಹಲಿ, ಮಾ.29: ವಿರೋಧ ಪಕ್ಷ ಕಾಂಗ್ರೆಸ್ಗೆ ಆದಾಯ ತೆರಿಗೆ (ಐಟಿ) ಇಲಾಖೆಯು ಮತ್ತೊಂದು ಆಘಾತ ನೀಡಿದೆ. ಗುರುವಾರ ಸುಮಾರು 1,700 ಕೋಟಿ ರೂ. ಮೊತ್ತದ ತೆರಿಗೆ ಪಾವತಿಸುವಂತೆ ಐಟಿ ನೋಟಿಸ್ ಜಾರಿ ನೀಡಿದೆ. 2024ರ ಮಹತ್ವದ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿಯೇ ಈ ನೋಟಿಸ್ ಬಂದಿದ್ದು, ಕಾಂಗ್ರೆಸ್ ಪಕ್ಷವನ್ನು ಅಕ್ಷರಶಃ ಆತಂಕಕ್ಕೆ ತಳ್ಳಿದೆ.
ನಾಲ್ಕು ಮೌಲ್ಯಮಾಪನ ವರ್ಷಗಳ ಮರುಮೌಲ್ಯಮಾಪನ ಪ್ರಕ್ರಿಯೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷವು ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಉಚ್ಚ ನ್ಯಾಯಾಲಯ ತಿರಸ್ಕರಿಸಿದ ಕೆಲವೇ ಗಂಟೆಗಳಲ್ಲಿ ಈ ನೋಟಿಸ್ ಬಂದಿರುವುದಾಗಿ ಪಕ್ಷ ಹೇಳಿಕೊಂಡಿದೆ.
1700 ಕೋಟಿ ರೂ. ಮೊತ್ತದ ನೋಟಿಸ್ 2017-18 ರಿಂದ 2020-21ರವರೆಗಿನ ಮೌಲ್ಯಮಾಪನ ವರ್ಷಗಳಿಗೆ ಸಂಬಂಧಿಸಿದ ಹೊಸ ತೆರಿಗೆ ಬೇಡಿಕೆಯಾಗಿದೆ. ಇದರಲ್ಲಿ ದಂಡದ ಮೊತ್ತ ಹಾಗೂ ಬಡ್ಡಿಯೂ ಒಳಗೊಂಡಿದೆ. ಇದಲ್ಲದೆ ಕಾಂಗ್ರೆಸ್ ಇತರ ಮೂರು ಮೌಲ್ಯಮಾಪನ ವರ್ಷಗಳ ಆದಾಯದ ಮರುಮೌಲ್ಯಮಾಪನವನ್ನೂ ಎದುರುನೋಡುತ್ತಿದೆ. ಇದರ ಗಡುವು ಭಾನುವಾರಕ್ಕೆ ಕೊನೆಗೊಳ್ಳಲಿದೆ.
ಆದಾಯ ತೆರಿಗೆ ಇಲಾಖೆಯ ಈ ಕ್ರಮಕ್ಕೆ ತಡೆ ಕೋರಿ ಹೈಕೋರ್ಟ್ನಲ್ಲಿ ವಾದ ಮಂಡಿಸಿದ ಕಾಂಗ್ರೆಸ್ ವಕೀಲ ಮತ್ತು ರಾಜ್ಯಸಭಾ ಸಂಸದ ವಿವೇಕ್ ಟಂಕಾ ಅವರು ನೋಟಿಸ್ ಬಂದಿರುವುದನ್ನು ದೃಢಪಡಿಸಿದ್ದು, ಐಟಿ ಕ್ರಮ ಪ್ರಜಾಸತ್ತಾತ್ಮಕ ವಿರೋಧಿ ಎಂದು ಕಿಡಿಕಾರಿದ್ದಾರೆ. ಅಲ್ಲದೆ ಇದನ್ನು ಪಕ್ಷವು ಕಾನೂನಾತ್ಮಕವಾಗಿ ಎದುರಿಸುತ್ತದೆ ಎಂದು ಹೇಳಿದ್ದಾರೆ.
ಪ್ರಮುಖ ದಾಖಲೆಗಳಿಲ್ಲದೆ ಸುಮಾರು 1,700 ಕೋಟಿ ರೂ. ಮೊತ್ತದ ಹೊಸ ಐಟಿ ನೋಟಿಸ್ ಅನ್ನು ಗುರುವಾರ ಪಕ್ಷಕ್ಕೆ ನೀಡಲಾಗಿದೆ ಎಂದು ವಿವೇಕ್ ಟಂಕಾ ತಿಳಿಸಿದ್ದಾರೆ. "ಮೌಲ್ಯಮಾಪನದ ಆದೇಶಗಳಿಲ್ಲದ ತೆರಿಗೆ ಪಾವತಿಸುವಂತೆ ಸೂಚಿಸುವ ನೋಟಿಸ್ ಸ್ವೀಕರಿಸಿದ್ದೇವೆ. ಮರುಮೌಲ್ಯಮಾಪನಕ್ಕೆ ಯಾವುದೇ ಕಾರಣಗಳನ್ನು ನೀಡದೆ, ಕೇವಲ ತೆರಿಗೆ ಬೇಡಿಕೆಯ ನೋಟಿಸ್ ನೀಡಲು ಮಾತ್ರ ಸರ್ಕಾರ ಆಸಕ್ತಿ ಹೊಂದಿದೆ,” ಎಂದು ಅವರು ಹರಿಹಾಯ್ದಿದ್ದಾರೆ.
ಈ ರೀತಿಯ ನೋಟಿಸ್ಗಳ ಮೂಲಕ ಲೋಕಸಭೆ ಚುನಾವಣೆಯ ಸಂದರ್ಭದಲ್ಲೇ ಮುಖ್ಯ ವಿರೋಧ ಪಕ್ಷಕ್ಕೆ ಆರ್ಥಿಕವಾಗಿ ತೊಂದರೆ ನೀಡಲು ಉದ್ದೇಶಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
The Congress has received a ₹ 1,800 crore notice from the Income Tax Department, a day after the Delhi High Court dismissed the party's petition challenging the tax notices.
18-03-25 02:30 pm
Bangalore Correspondent
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 08:53 pm
Mangalore Correspondent
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am