ಬ್ರೇಕಿಂಗ್ ನ್ಯೂಸ್
31-03-24 02:06 pm HK NEWS ದೇಶ - ವಿದೇಶ
ಬೆಂಗಳೂರು, ಮಾ.31: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಅವರನ್ನು ಗೆಲ್ಲಿಸಲು ಗೃಹ ಸಚಿವ ಅಮಿತ್ ಶಾ ಖುದ್ದು ಅಖಾಡಕ್ಕಿಳಿಯುತ್ತಿದ್ದಾರೆ. ಡಿ.ಕೆ. ಬ್ರದರ್ಸ್ಗೆ ಠಕ್ಕರ್ ನೀಡಲು ಬಿಜೆಪಿ ರಣತಂತ್ರ ಹಣೆದಿದ್ದು, ಮೈತ್ರಿ ನಾಯಕರು ಬೃಹತ್ ರೋಡ್ ಶೋ ಮೂಲಕ ಶಕ್ತಿಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದಾರೆ.
ಡಿಸಿಎಂ ಡಿಕೆಶಿ ಸೋದರ ಡಿಕೆ ಸುರೇಶ್ ಸಂಸದರಾಗಿರುವ ಬೆಂಗಳೂರು ಗ್ರಾಮಾಂತರ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಾಡು ಆಗಿದೆ. ಮೊನ್ನೆಯಷ್ಟೇ ನಾಮಪತ್ರ ಸಲ್ಲಿಕೆಗೆ ಬೃಹತ್ ರ್ಯಾಲಿ ಮಾಡಿ ಶಕ್ತಿ ಪ್ರದರ್ಶನ ಮಾಡಿದ್ದ ಕಾಂಗ್ರೆಸ್ಗೆ ಠಕ್ಕರ್ ಕೊಡಲು ಮೈತ್ರಿ ಪಕ್ಷ ಸಿದ್ಧತೆ ಆರಂಭಿಸಿದೆ. ಡಿಕೆಶಿ ಅಖಾಡಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಎಂಟ್ರಿ ನೀಡುತ್ತಿದ್ದು, ಚುನಾವಣಾ ಕಣ ಮತ್ತಷ್ಟು ರಂಗೇರಲಿದೆ.
ಏಪ್ರಿಲ್ 1ರ ರಾತ್ರಿ ಅಮಿತ್ ಶಾ ಬೆಂಗಳೂರಿಗೆ ಅಗಮಿಸಲಿದ್ದಾರೆ. ಏ.2 ರಂದು ಬೆಳಗ್ಗೆ 9 ಗಂಟೆಗೆ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ, ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಒಳಗೊಂಡು ಬೃಹತ್ ಸಮಾವೇಶ ಮಾಡಲಿದ್ದಾರೆ. ಮಧ್ಯಾಹ್ನ 2 ರಿಂದ 4 ಗಂಟೆಯ ವರೆಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರದ ಪ್ರಮುಖರ ಸಭೆ ನಡೆಸುವ ಮೂಲಕ ಚುನಾವಣೆ ಗೆಲುವಿಗೆ ರಣತಂತ್ರ ಹೂಡಲಿದ್ದಾರೆ.
ಬೆಂಗಳೂರಿನಲ್ಲಿ ಸಮಾವೇಶದ ಬಳಿಕ ಸಂಜೆ 6 ಗಂಟೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಿ ಬಹಿರಂಗ ಸಮಾವೇಶ ನಡೆಸಲಿದ್ದಾರೆ. ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಪರವಾಗಿ ಮತಯಾಚನೆ ಮಾಡಲಿರುವ ಅಮಿತ್ ಶಾಗೆ ಹೆಚ್ಡಿ ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ, ವಿಜಯೇಂದ್ರ, ಅಶೋಕ್ ಸೇರಿದಂತೆ ಬಿಜೆಪಿ, ಜೆಡಿಎಸ್ ಪಕ್ಷಗಳ ರಾಜ್ಯ ನಾಯಕರು ಸಾಥ್ ನೀಡಲಿದ್ದಾರೆ.
Union Home Minister Amit Shah will launch his Lok Sabha poll campaign in Karnataka from April 2, BJP state general secretary V Sunil Kumar said on Saturday. Shah will hold a meeting with the Bharatiya Janata Party and its ally Janata Dal (Secular) leaders at 9 am on April 2.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm