ಬ್ರೇಕಿಂಗ್ ನ್ಯೂಸ್
31-03-24 02:06 pm HK NEWS ದೇಶ - ವಿದೇಶ
ಬೆಂಗಳೂರು, ಮಾ.31: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಅವರನ್ನು ಗೆಲ್ಲಿಸಲು ಗೃಹ ಸಚಿವ ಅಮಿತ್ ಶಾ ಖುದ್ದು ಅಖಾಡಕ್ಕಿಳಿಯುತ್ತಿದ್ದಾರೆ. ಡಿ.ಕೆ. ಬ್ರದರ್ಸ್ಗೆ ಠಕ್ಕರ್ ನೀಡಲು ಬಿಜೆಪಿ ರಣತಂತ್ರ ಹಣೆದಿದ್ದು, ಮೈತ್ರಿ ನಾಯಕರು ಬೃಹತ್ ರೋಡ್ ಶೋ ಮೂಲಕ ಶಕ್ತಿಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದಾರೆ.
ಡಿಸಿಎಂ ಡಿಕೆಶಿ ಸೋದರ ಡಿಕೆ ಸುರೇಶ್ ಸಂಸದರಾಗಿರುವ ಬೆಂಗಳೂರು ಗ್ರಾಮಾಂತರ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಾಡು ಆಗಿದೆ. ಮೊನ್ನೆಯಷ್ಟೇ ನಾಮಪತ್ರ ಸಲ್ಲಿಕೆಗೆ ಬೃಹತ್ ರ್ಯಾಲಿ ಮಾಡಿ ಶಕ್ತಿ ಪ್ರದರ್ಶನ ಮಾಡಿದ್ದ ಕಾಂಗ್ರೆಸ್ಗೆ ಠಕ್ಕರ್ ಕೊಡಲು ಮೈತ್ರಿ ಪಕ್ಷ ಸಿದ್ಧತೆ ಆರಂಭಿಸಿದೆ. ಡಿಕೆಶಿ ಅಖಾಡಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಎಂಟ್ರಿ ನೀಡುತ್ತಿದ್ದು, ಚುನಾವಣಾ ಕಣ ಮತ್ತಷ್ಟು ರಂಗೇರಲಿದೆ.
ಏಪ್ರಿಲ್ 1ರ ರಾತ್ರಿ ಅಮಿತ್ ಶಾ ಬೆಂಗಳೂರಿಗೆ ಅಗಮಿಸಲಿದ್ದಾರೆ. ಏ.2 ರಂದು ಬೆಳಗ್ಗೆ 9 ಗಂಟೆಗೆ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ, ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಒಳಗೊಂಡು ಬೃಹತ್ ಸಮಾವೇಶ ಮಾಡಲಿದ್ದಾರೆ. ಮಧ್ಯಾಹ್ನ 2 ರಿಂದ 4 ಗಂಟೆಯ ವರೆಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರದ ಪ್ರಮುಖರ ಸಭೆ ನಡೆಸುವ ಮೂಲಕ ಚುನಾವಣೆ ಗೆಲುವಿಗೆ ರಣತಂತ್ರ ಹೂಡಲಿದ್ದಾರೆ.
ಬೆಂಗಳೂರಿನಲ್ಲಿ ಸಮಾವೇಶದ ಬಳಿಕ ಸಂಜೆ 6 ಗಂಟೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಿ ಬಹಿರಂಗ ಸಮಾವೇಶ ನಡೆಸಲಿದ್ದಾರೆ. ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಪರವಾಗಿ ಮತಯಾಚನೆ ಮಾಡಲಿರುವ ಅಮಿತ್ ಶಾಗೆ ಹೆಚ್ಡಿ ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ, ವಿಜಯೇಂದ್ರ, ಅಶೋಕ್ ಸೇರಿದಂತೆ ಬಿಜೆಪಿ, ಜೆಡಿಎಸ್ ಪಕ್ಷಗಳ ರಾಜ್ಯ ನಾಯಕರು ಸಾಥ್ ನೀಡಲಿದ್ದಾರೆ.
Union Home Minister Amit Shah will launch his Lok Sabha poll campaign in Karnataka from April 2, BJP state general secretary V Sunil Kumar said on Saturday. Shah will hold a meeting with the Bharatiya Janata Party and its ally Janata Dal (Secular) leaders at 9 am on April 2.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm