ಬ್ರೇಕಿಂಗ್ ನ್ಯೂಸ್
01-04-24 11:19 am HK News Desk ದೇಶ - ವಿದೇಶ
ಕೋಲ್ಕತಾ, ಏ 01 : ಪಶ್ಚಿಮ ಬಂಗಾಳದಲ್ಲಿ ಚಂಡಮಾರುತ ಅಪ್ಪಳಿಸಿದ್ದು, ಈ ವೇಳೆ 4 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಉತ್ತರ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾನುವಾರ ಚಂಡಮಾರುತ ಭಾರಿ ಹಾನಿಯನ್ನುಂಟುಮಾಡಿದ್ದು, ಘಟನೆಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 70 ಜನರು ಗಾಯಗೊಂಡಿದ್ದಾರೆ.
ಮೃತರನ್ನು ಸೆಂಪಾರಾದ ದಿಜೇಂದ್ರ ನಾರಾಯಣ ಸರ್ಕಾರ್ (52), ಪಹರ್ಪುರದ ಅನಿಮಾ ಬರ್ಮನ್ (45), ಪುತಿಮಾರಿಯ ಜಗನ್ ರಾಯ್ (72) ಮತ್ತು ರಾಜರ್ಹತ್ನ ಸಮರ್ ರಾಯ್ (64) ಎಂದು ಗುರುತಿಸಲಾಗಿದೆ.
ಚಂಡಮಾರುತ ಪರಿಣಾಮ ಜಿಲ್ಲಾ ಕೇಂದ್ರ ಪಟ್ಟಣ ಜಲ್ಪೈಗುರಿಯ ಹೆಚ್ಚಿನ ಭಾಗಗಳು ಮತ್ತು ನೆರೆಯ ಮೈನಾಗೂರಿನ ಅನೇಕ ಪ್ರದೇಶಗಳನ್ನು ಧ್ವಂಸಗೊಳಿಸಿವೆ. ಅಲ್ಲದೆ ಹಲವಾರು ಮನೆಗಳಿಗೆ ಹಾನಿಯಾಗಿದೆ. ಮರಗಳು ಉರುಳಿಬಿದ್ದಿದ್ದು, ವಿದ್ಯುತ್ ಕಂಬಗಳು ಧರೆಗುರುಳಿವೆ. ರಾಜರಹತ್, ಬರ್ನಿಶ್, ಬಕಾಲಿ, ಜೋರ್ಪಕ್ಡಿ, ಮಧಬ್ದಂಗ ಮತ್ತು ಸಪ್ತಿಬಾರಿ ಪ್ರದೇಶಗಳು ಹೆಚ್ಚು ಹಾನಿಗೊಳಗಾದ ಪ್ರದೇಶಗಳಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಹಲವಾರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೋದಿ ಸಂತಾಪ ;
ಚಂಡಮಾರುತದಿಂದ ಸಂತ್ರಸ್ತರಾದ ಪಶ್ಚಿಮ ಬಂಗಾಳದ ಜಲಪೈಗುರಿ-ಮೈನಗುರಿ ಪ್ರದೇಶದ ಜನರೊಂದಿಗೆ ನಾವಿದ್ದೇವೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು' ಎಂದು ಮೋದಿ ಪೋಸ್ಟ್ನಲ್ಲಿ ಹೇಳಿದ್ದಾರೆ. ಅಲ್ಲದೇ ಸಂತ್ರಸ್ತರಿಗೆ ಸಹಾಯ ಮಾಡುವಂತೆ ನಾನು ಬಂಗಾಳದ ಎಲ್ಲಾ ಬಿಜೆಪಿ ಕಾರ್ಯಕರ್ತರಲ್ಲಿ ಮನವಿ ಮಾಡುತ್ತೇನೆ ಎಂದು ಪ್ರಧಾನಿ ತಿಳಿಸಿದ್ದಾರೆ.
ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ಜಲಪೈಗುರಿ ನಗರ ಹಾಗೂ ಪಕ್ಕದ ಮೈನಗುರಿ ಜಿಲ್ಲೆಯಲ್ಲಿ ಹಲವು ಮನೆಗಳು ಕುಸಿದಿವೆ. ಮರಗಳು ಹಾಗೂ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಜಲಪೈಗುರಿ ಜಿಲ್ಲೆಯ ರಾಜರ್ಹಾಟ್, ಬರ್ನಿಷ್, ಬಾಕಲಿ, ಜೋರ್ಪಕಡಿ, ಮಾಧಬ್ಡಾಂಗಾ, ಸಪ್ತಿಬಾರಿ ಪ್ರದೇಶಗಳಲ್ಲಿ ಹೆಚ್ಚು ಹಾನಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
‘ರಕ್ಷಣಾ ಕಾರ್ಯಕ್ಕಾಗಿ ಸಿಬ್ಬಂದಿ ನಿಯೋಜಿಸಲಾಗಿದೆ. ಮೃತರ ಕುಟುಂಬಕ್ಕೆ ಪರಿಹಾರ ನೀಡಲಾಗುವುದು’ ಎಂದು ಸಿ.ಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ರಾಜ್ಯಪಾಲ ಸಿ.ವಿ. ಆನಂದ ಬೋಸ್ ಸೋಮವಾರ ಜಲಪೈಗುರಿಗೆ ಭೇಟಿ ನೀಡಲಿದ್ದಾರೆ ಎಂದು ರಾಜಭವನದ ಅಧಿಕಾರಿಗಳು ತಿಳಿಸಿದ್ದಾರೆ.
Four persons were killed and at least 70 people were injured after a cyclonic storm hit parts of West Bengal’s Jalpaiguri district on Sunday. The severe weather conditions have also taken a toll on Assam where a portion of the ceiling at Guwahati’s Lokpriya Gopinath Bordoloi International Airport collapsed due to heavy rainfall.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm