ಬ್ರೇಕಿಂಗ್ ನ್ಯೂಸ್
01-04-24 06:30 pm HK News Desk ದೇಶ - ವಿದೇಶ
ಢಾಕಾ, ಏ.01: ಬಾಯ್ಕಾಟ್ ಇಂಡಿಯಾ ಅಭಿಯಾನದ ಬಗ್ಗೆ ವಿಪಕ್ಷಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಭಾರತೀಯ ವಸ್ತುಗಳನ್ನು ಬಹಿಷ್ಕರಿಸುವ ವಿಪಕ್ಷಗಳ ನೈತಿಕತೆಯನ್ನು ಪ್ರಶ್ನಿಸಿದ್ದಾರೆ.
ಭಾರತೀಯ ವಸ್ತುಗಳನ್ನು ಬಹಿಷ್ಕರಿಸಿ ಎಂದು ಅಭಿಯಾನ ನಡೆಸುತ್ತಿರುವ ವಿಪಕ್ಷಗಳು, ಒಂದು ವೇಳೆ ಅವರು ಭಾರತೀಯ ಖಾದ್ಯ ಇಲ್ಲದೇ ಊಟೋಪಚಾರ ಮಾಡುತ್ತಿದ್ದಾರೆಯೇ ಎಂಬುದಾಗಿ ಉತ್ತರ ನೀಡಬೇಕಾಗಿದೆ ಎಂದು ಹಸೀನಾ ತಿರುಗೇಟು ನೀಡಿದ್ದಾರೆ.
ಬಾಯ್ಕಾಟ್ ಅಭಿಯಾನ ನಡೆಸುತ್ತಿರುವವರ ಎಷ್ಟು ಮಂದಿ ಪತ್ನಿಯರು ಭಾರತೀಯ ಸೀರೆಗಳನ್ನು ಉಟ್ಟುಕೊಂಡಿದ್ದಾರೆ? ಹಾಗಾದರೆ ಪತ್ನಿಯರು ತೊಟ್ಟ ಸೀರೆಯನ್ನು ಯಾಕೆ ಸುಟ್ಟು ಹಾಕಿಲ್ಲ? ಎಂದು ಹಸೀನಾ ಪ್ರಶ್ನಿಸಿದ್ದಾರೆ.
ಪ್ರಧಾನಿ ಶೇಖ್ ಹಸೀನಾ ಭಾರತದ ಜತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಜನವರಿ ತಿಂಗಳಿನಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಶೇಖ್ ಹಸೀನಾ ಪಕ್ಷ ಜಯಭೇರಿ ಬಾರಿಸುವ ಮೂಲಕ ಐದನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದರು.
ಬಾಂಗ್ಲಾದೇಶ ಚುನಾವಣೆಯಲ್ಲಿ ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷವು ಪ್ರಚಂಡ ಗೆಲುವು ಸಾಧಿಸಿತ್ತು. 299 ಕ್ಷೇತ್ರಗಳಲ್ಲಿ ಅವಾಮಿ ಲೀಗ್ 216 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಈ ಸಂದರ್ಭದಲ್ಲಿ ವಿಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದವು. ತದನಂತರ ವಿಪಕ್ಷಗಳು Boycott India ಅಭಿಯಾನ ಆರಂಭಿಸಿದ್ದವು
ಈ ವರ್ಷದ ಆರಂಭದಲ್ಲಿ, ಬಾಂಗ್ಲಾದಲ್ಲಿ ಒಬ್ಬ ದೇಶಭ್ರಷ್ಟ ಬ್ಲಾಗರ್ ಎಕ್ಸ್ನಲ್ಲಿ ಹಾಕಿದ ಪೋಸ್ಟರ್ 'ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಿ' ಎಂದಿತ್ತು. ಅಂದಿನಿಂದ, ಈ ಅಭಿಯಾನವು ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡಲಾರಂಭಿಸಿದೆ. ಬಾಂಗ್ಲಾದೇಶದ ಆಂತರಿಕ ರಾಜಕೀಯದಲ್ಲಿ ಭಾರತದ ಆಪಾದಿತ ಹಸ್ತಕ್ಷೇಪವನ್ನು ವಿರೋಧಿಸಲು ಈ ಅಭಿಯಾನವನ್ನು ಪ್ರಾರಂಭಿಸಲಾಯಿತು.
Bangladesh Prime Minister Sheikh Hasina slammed the opposition party - Bangladesh Nationalist Party (BNP) - for making saree, a classic Indian garment, a matter of politics. The country's opposition party ran an anti-India campaign targetting sarees and other products, stating that they would burn their wives' Indian sarees.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm