ಬ್ರೇಕಿಂಗ್ ನ್ಯೂಸ್
07-04-24 02:41 pm HK News Desk ದೇಶ - ವಿದೇಶ
ಕಾಸರಗೋಡು, ಎ.6: ನಾಲ್ಕು ತಿಂಗಳ ಹೆಣ್ಣು ಮಗುವನ್ನು ಕೊಲೆಗೈದು ತಾಯಿ ತನ್ನ ಕೈಯ ನರವನ್ನು ಕತ್ತರಿಸಿಕೊಂಡು ಬಳಿಕ ನೇಣು ಬಿಗಿದು ಆತ್ಮಹತ್ಯೆಗೈದ ದಾರುಣ ಘಟನೆ ಕಾಸರಗೋಡಿನ ಮುಳ್ಳೇರಿಯಾದಲ್ಲಿ ನಡೆದಿದೆ.
ಮೂಲತಃ ಇಡುಕ್ಕಿ ಜಿಲ್ಲೆಯ ತೊಡುಪುಳ ನಿವಾಸಿ ಶರತ್ ಅವರ ಪತ್ನಿ ಬಿಂದು (28) ಆತ್ಮಹತ್ಯೆ ಮಾಡಿಕೊಂಡವರು. ಈಕೆಯ ಗಂಡ ಶರತ್ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇವರಿಗೆ ನಾಲ್ಕು ತಿಂಗಳ ಹೆಣ್ಣು ಮಗುವಿತ್ತು. ಮಗುವನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಿಂದು ಇಡುಕ್ಕಿ ಜಿಲ್ಲೆಯ ತೊಡುಪುಳದ ಪತಿಯ ಮನೆಯಿಂದ ಪುತ್ರಿ ಶ್ರೀನಂದಾ ಮತ್ತು ಪುತ್ರ ಶ್ರೀಹರಿಯೊಂದಿಗೆ ಮಾ.31ರಂದು ಕಾಸರಗೋಡು ಜಿಲ್ಲೆಯ ಮುಳಿಯಾರು ಬಳಿಯ ಕೋಪಾಳಕೊಚ್ಚಿ ಎಂಬಲ್ಲಿಗೆ ಸಂಬಂಧಿಕರ ಮನೆಗೆ ಬಂದಿದ್ದರು.
ಎ.5ರಂದು ಮಧ್ಯಾಹ್ನ ಬಿಂದು ಮನೆಯ ಪಕ್ಕದ ಮರದಲ್ಲಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೈಯ ನರ ಕತ್ತರಿಸಲ್ಪಟ್ಟು ರಕ್ತ ಸೋರುತ್ತಿತ್ತು. ಇದೇ ವೇಳೆ ನಾಲ್ಕು ತಿಂಗಳ ಮಗು ಶ್ರೀನಂದಾ ಕೊಠಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಕಂಡುಬಂದಿತ್ತು. ಮನೆಯವರು ಕೂಡಲೇ ಮಗುವನ್ನು ಚೆಂಗಳ ಸಹಕಾರಿ ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.
ಬಿಂದು ಮತ್ತು ಶರತ್ ಅವರ ವಿವಾಹ ಆರು ವರ್ಷಗಳ ಹಿಂದೆ ನಡೆದಿತ್ತು. ಕಾಸರಗೋಡು ಡಿವೈಎಸ್ಪಿ ಜಯನ್ ಡೊಮಿನಿಕ್ ಹಾಗೂ ಆದೂರು ಪೊಲೀಸ್ ಇನ್ಸ್ಪೆಕ್ಟರ್ ಸಂಜಯ್ ಕುಮಾರ್ ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಗಿದೆ. ಸಾವಿಗೆ ಕಾರಣ ಇನ್ನಷ್ಟೇ ತಿಳಿಯ ಬೇಕಿದ್ದು, ಪತಿಯ ಮೇಲಿನ ಸಿಟ್ಟಿನಲ್ಲಿ ಪತ್ನಿ ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಶಂಕೆ ವ್ಯಕ್ತವಾಗಿದೆ.
In a gruesome incident, a Muliyar native, Bindhu (28) killed her four-month-old infant Srinanda, and died by suicide.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm