ಬ್ರೇಕಿಂಗ್ ನ್ಯೂಸ್
07-04-24 07:45 pm HK News Desk ದೇಶ - ವಿದೇಶ
ವಯನಾಡ್, ಎ.7: ಕೇರಳದ ವಯನಾಡ್ ಜಿಲ್ಲೆಯ ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನಡೆದ 20 ವರ್ಷದ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆ ಕೈಗೆತ್ತಿಕೊಂಡಿದೆ. ಇದೇ ವೇಳೆ, ಪೊಲೀಸರು ಸಿಬಿಐಗೆ ಸಲ್ಲಿಸಿದ ವರದಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಎಸ್ಎಫ್ಐ ವಿದ್ಯಾರ್ಥಿಗಳ ಸುದೀರ್ಘ 29 ಗಂಟೆಗಳ ಕಿರುಕುಳವೇ ಕಾರಣ ಎಂದು ಉಲ್ಲೇಖಿಸಿದ್ದಾರೆ.
ಫೆಬ್ರವರಿ 18ರಂದು ಸಿದ್ಧಾರ್ಥ್ ಎಂಬ 20 ವರ್ಷದ ವಿದ್ಯಾರ್ಥಿ ನೇಣು ಬಿಗಿದು ಸಾವಿಗೆ ಶರಣಾಗಿದ್ದ. ಪ್ರಕರಣದಲ್ಲಿ ಹಿರಿಯ ವಿದ್ಯಾರ್ಥಿಗಳ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹೆತ್ತವರು ಸಿಬಿಐ ತನಿಖೆಗೆ ಒತ್ತಾಯ ಮಾಡಿದ್ದರು. ಸ್ಥಳೀಯ ಪೊಲೀಸರ ತನಿಖೆಯ ಬಗ್ಗೆ ತಮಗೆ ನಂಬಿಕೆಯಿಲ್ಲ ಎಂದು ಹೆತ್ತವರು ಹೇಳಿದ್ದರು. ಅದರಂತೆ, ಪಿಣರಾಯಿ ವಿಜಯನ್ ಸರಕಾರ ತನಿಖೆಯನ್ನು ಸಿಬಿಐಗೆ ಕೊಟ್ಟಿತ್ತು. ಸಿಬಿಐ ತನಿಖೆ ಎತ್ತಿಕೊಳ್ಳುತ್ತಿದ್ದಂತೆ 20 ವಿದ್ಯಾರ್ಥಿಗಳ ಮೇಲೆ ಮರು ಎಫ್ಐಆರ್ ದಾಖಲಿಸಿದೆ.
ಸಿದ್ಧಾರ್ಥ್ ಮೇಲೆ ಫೆ.16ರ ಬೆಳಗ್ಗೆ 9 ಗಂಟೆಯಿಂದ ಮರುದಿನ ಫೆ.17ರ ರಾತ್ರಿ 2 ಗಂಟೆ ವರೆಗೂ ನಿರಂತರ ಕಿರುಕುಳ ನೀಡಲಾಗಿತ್ತು. ಹಿರಿಯ ವಿದ್ಯಾರ್ಥಿಗಳು ಬೆಲ್ಟ್ ನಲ್ಲಿ ಹಲ್ಲೆ ಮಾಡಿದ್ದರು. ದೈಹಿಕವಾಗಿ ಹಿಂಸೆ ನೀಡಿದ್ದರು. ಅಲ್ಲದೆ, ಮಾನಸಿಕವಾಗಿಯೂ ನಿರಂತರ ಹಿಂಸೆ ನೀಡಿದ್ದರು ಎಂದು ಪ್ರಾಥಮಿಕ ತನಿಖಾ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ನಿರಂತರ ಕಿರುಕುಳದ ಕಾರಣ ಈ ಸಂಸ್ಥೆಯಲ್ಲಿ ಶಿಕ್ಷಣ ಮುಂದುವರಿಸಲು ಸಾಧ್ಯವಿಲ್ಲ. ಶಿಕ್ಷಣ ಅರ್ಧಕ್ಕೆ ಬಿಟ್ಟು ಮನೆಗೆ ಹಿಂತಿರುಗುವುದಕ್ಕೂ ಸಾಧ್ಯವಿಲ್ಲ ಎಂದು ಮಾನಸಿಕವಾಗಿ ನೊಂದುಕೊಂಡು ಸಿದ್ದಾರ್ಥ್ ತನ್ನ ಹಾಸ್ಟೆಲಿನ ಬಾತ್ ರೂಮಿನಲ್ಲಿ ಫೆ.18ರಂದು ಬೆಳಗ್ಗೆ ನೇಣಿಗೆ ಶರಣಾಗಿದ್ದ ಎಂದು ವರದಿಯಲ್ಲಿ ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿಯ ಹೆತ್ತವರು ಆಡಳಿತಾರೂಢ ಎಡರಂಗದ ವಿದ್ಯಾರ್ಥಿ ಸಂಘಟನೆ ಎಸ್ಎಫ್ಐ ಮೇಲೆ ಆರೋಪ ಮಾಡಿದ್ದರು. ಪೊಲೀಸರು ತನಿಖೆ ಆರಂಭಿಸಿ ಹಲವರನ್ನು ಬಂಧಿಸಿದ್ದರು. ಈ ಘಟನೆಯಿಂದಾಗಿ ರಾಜ್ಯದ ಎಡರಂಗ ಸರಕಾರಕ್ಕೆ ತೀವ್ರ ಮುಜುಗರವೂ ಆಗಿತ್ತು.
JS Siddharth, the 20-year-old student who was found dead at Kerala Veterinary University in Wayanad on February 18, was subjected to severe ragging and was continuously assaulted for 29 hours, the state police said in their case file handed over to the CBI.
18-03-25 02:30 pm
Bangalore Correspondent
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 03:15 pm
Mangalore Correspondent
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am