ಬ್ರೇಕಿಂಗ್ ನ್ಯೂಸ್
11-04-24 01:46 pm HK NEWS DESK ದೇಶ - ವಿದೇಶ
ಚಂಡೀಗಢ, ಏ 11: ಶಾಲಾ ಬಸ್ವೊಂದು ಮಗುಚಿ ಎಂಟು ವಿದ್ಯಾರ್ಥಿಗಳು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಮಹೇಂದ್ರಗಢದಲ್ಲಿ ನಡೆದಿದೆ.
ಮಹೇಂದ್ರಗಢದ ಉನ್ಹಾನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 15 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಜಿಆರ್ ಎಲ್ ಶಾಲೆಯ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್, ಎದುರಲ್ಲಿದ್ದ ಮತ್ತೊಂದು ವಾಹನವನ್ನು ಓವರ್ಟೇಕ್ ಮಾಡಲು ಹೋಗಿ ಈ ಘಟನೆ ನಡೆದಿದೆ. ನಾಲ್ಕನೇ ತರಗತಿಯಿಂದ 10ನೇ ತರಗತಿಯವರೆಗಿನ ಸುಮಾರು 35ರಿಂದ 40 ವಿದ್ಯಾರ್ಥಿಗಳು ಬಸ್ ನಲ್ಲಿದ್ದರು.

ಗಾಯಗೊಂಡ ಮಕ್ಕಳು ಪ್ರಸ್ತುತ ತುರ್ತು ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ. ಹೆಚ್ಚು ತೀವ್ರತರವಾದ ಪ್ರಕರಣಗಳನ್ನು ರೇವಾರಿಯಲ್ಲಿರುವ ವಿಶೇಷ ಸೌಲಭ್ಯಕ್ಕೆ ವರ್ಗಾಯಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದು, ಮೃತರು ಮತ್ತು ಗಾಯಗೊಂಡ ವಿದ್ಯಾರ್ಥಿಗಳ ಗುರುತು ಪತ್ತೆಯಾಗಿಲ್ಲ.
ಬಸ್ ಚಾಲಕನನ್ನು ಬಂಧಿಸಲಾಗಿದೆ. ಆತನನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಿದ ಬಳಿಕವಷ್ಟೇ ಪಾನಮತ್ತನಾಗಿದ್ದಾನೆಯೇ ಎಂಬುದು ತಿಳಿದು ಬರಲಿದೆ. ನಿರ್ಲಕ್ಷ್ಯದ ಚಾಲನೆ ಬಗ್ಗೆಯೂ ದೂರುಗಳು ಬಂದಿವೆ. ಈ ಕುರಿತು ತನಿಖೆ ನಡೆಸಲಾಗುತ್ತದೆ' ಎಂದು ಮಹೇಂದ್ರಗಢ ಪೊಲೀಸ್ ವರಿಷ್ಠಾಧಿಕಾರಿ ಅರ್ಶ್ ವರ್ಮಾ ತಿಳಿಸಿದ್ದಾರೆ.
ಹರಿಯಾಣದ ಶಿಕ್ಷಣ ಸಚಿವ ಸೀಮಾ ತ್ರಿಕಾ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.
At least eight children were killed and 13 others injured after a school bus carrying 30 children overturned in Haryana's Mahendergarh on Thursday morning
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm