ಬ್ರೇಕಿಂಗ್ ನ್ಯೂಸ್
12-04-24 08:16 pm HK NEWS ದೇಶ - ವಿದೇಶ
ನವದೆಹಲಿ, ಎ.12: ಇಸ್ರೇಲ್ ಮೇಲೆ ಇನ್ನೆರಡು ದಿನದಲ್ಲಿ ಇರಾನ್ ಭಾರೀ ದೊಡ್ಡ ಪ್ರಮಾಣದಲ್ಲಿ ವೈಮಾನಿಕ ದಾಳಿ ನಡೆಸಲು ಸಜ್ಜಾಗಿದೆ ಎಂದು ಅಮೆರಿಕದ ವಾಲ್ ಸ್ಟ್ರೀಟ್ ಜರ್ನಲ್ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಇದರ ಬೆನ್ನಲ್ಲೆ ಅಮೆರಿಕ, ಭಾರತ ಸೇರಿದಂತೆ ತನ್ನ ಪ್ರಜೆಗಳನ್ನು ಇಸ್ರೇಲ್ ಮತ್ತು ಇರಾನ್ ದೇಶಕ್ಕೆ ತೆರಳದಂತೆ ಸೂಚನೆ ನೀಡಿದೆ.
ಇರಾನ್ ದೇಶದ ಸುಪ್ರೀಂ ನಾಯಕ ಅಯಾತೊಲ್ಲಾ ಅಲಿ ಖೊಮೇನಿ ನೇರ ಉಸ್ತುವಾರಿಯಲ್ಲೇ ಆ ದೇಶ ಯುದ್ಧಕ್ಕೆ ರೆಡಿಯಾಗುತ್ತಿದೆ ಎನ್ನಲಾಗುತ್ತಿದ್ದು, ಜಾಗತಿಕ ರಾಷ್ಟ್ರಗಳ ಒತ್ತಡ. ಅದರಿಂದಾಗುವ ಅಪಾಯದ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎಂದು ಅಯಾತೊಲ್ಲಾ ಖೊಮೇನಿ ಅವರ ಸಲಹೆಗಾರರ ಆಪ್ತ ವ್ಯಕ್ತಿಯೊಬ್ಬರು ಹೇಳಿದ್ದಾರೆ ಎಂಬ ಮಾಹಿತಿ ಆಧರಿಸಿ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ. ಇಸ್ರೇಲ್, ಗಾಜಾ ಪಟ್ಟಿ ಮತ್ತು ಹಮಾಸ್ ಉಗ್ರರ ಮೇಲೆ ನಿರಂತರ ದಾಳಿ ನಡೆಸುತ್ತಿರುವುದರಿಂದ ಇರಾನ್ ದೇಶವು ಪದೇ ಪದೇ ಎಚ್ಚರಿಕೆ ಕೊಡುತ್ತಲೇ ಬಂದಿತ್ತು. ಇತ್ತೀಚೆಗೆ ಇರಾನ್ ದೇಶದ ವ್ಯಾಪ್ತಿಯ ಸಿರಿಯಾ ಭಾಗದ ಡಮಾಸ್ಕಸ್ ನಗರದ ಕಾನ್ಸುಲೇಟ್ ಒಂದಕ್ಕೆ ದಾಳಿ ನಡೆಸಲಾಗಿತ್ತು. ಅದರಲ್ಲಿ ಇರಾನ್ ದೇಶದ ಪ್ರಮುಖ ನಾಯಕ ಮತ್ತು ಆರು ಮಂದಿ ಮಿಲಿಟರಿ ವ್ಯಕ್ತಿಗಳು ಸಾವನ್ನಪ್ಪಿದ್ದರು.
ಡಮಾಸ್ಕಸ್ ಮೇಲಿನ ದಾಳಿಯನ್ನು ಇಸ್ರೇಲ್ ಮಾಡಿದೆ ಎಂದು ಇರಾನ್ ಆರೋಪ ಮಾಡಿತ್ತು. ಆದರೆ ಇಸ್ರೇಲ್ ಆ ದಾಳಿಯನ್ನು ನಿರಾಕರಿಸಿದ್ದೂ ಇಲ್ಲ, ಒಪ್ಪಿಕೊಂಡಿದ್ದೂ ಇಲ್ಲ. ಹೀಗಾಗಿ ಇಸ್ರೇಲ್ ಆ ದಾಳಿಯ ಹಿಂದೆ ಇದೆ ಎನ್ನುವ ಮಾತು ಮುಸ್ಲಿಂ ರಾಷ್ಟ್ರಗಳಿಂದ ಕೇಳಿಬಂದಿತ್ತು. ಇಸ್ರೇಲಿಗೆ ತಕ್ಕ ಶಿಕ್ಷೆ ಆಗಲೇಬೇಕು. ಅದು ಆಗಿಯೇ ತೀರುತ್ತೆ ಎಂದು ಡಮಾಸ್ಕಸ್ ದಾಳಿಯ ಬಳಿಕ ಇರಾನ್ ನಾಯಕ ಅಯೊತೊಲ್ಲಾ ಖೊಮೇನಿ ಹೇಳಿದ್ದರು.
ಇದೇ ವೇಳೆ, ಬಿಬಿಸಿ ಸಂಸ್ಥೆಯ ಯುಎಸ್ ಪಾಲುದಾರ ಸಿಬಿಎಸ್ ನ್ಯೂಸ್, ಇರಾನ್ ದಾಳಿ ಬಹುತೇಕ ಶುಕ್ರವಾರದ ಹೊತ್ತಿಗೆ ಆಗುವ ಸಾಧ್ಯತೆ ಇದೆಯೆಂದು ವರದಿ ಮಾಡಿದೆ. ನೂರಕ್ಕೂ ಹೆಚ್ಚು ಡ್ರೋಣ್, ಡಜನ್ ಗೂ ಹೆಚ್ಚು ಕ್ರೂಸ್ ಮಿಸೈಲ್ ಮತ್ತು ಬ್ಯಾಲಿಸ್ಟಿಕ್ ಮಿಸೈಲ್ ಇಸ್ರೇಲ್ ಮೇಲೆ ಟಾರ್ಗೆಟ್ ಮಾಡಲಿದೆ ಎಂದು ಅಮೆರಿಕದ ಇಬ್ಬರು ಸೇನಾಧಿಕಾರಿಗಳ ಹೇಳಿಕೆ ಅಧರಿಸಿ ಸಿಬಿಎಸ್ ನ್ಯೂಸ್ ವರದಿ ಮಾಡಿದೆ.
Iran is likely to launch a direct attack on Israel within the next 48 hours and the Jewish nation is preparing for it, according to a report. The Wall Street Journal reported on Friday, citing a person who had been briefed by the Iranian leadership.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm