ಬ್ರೇಕಿಂಗ್ ನ್ಯೂಸ್
13-04-24 09:17 pm HK NEWS ದೇಶ - ವಿದೇಶ
ನವದೆಹಲಿ, ಎ.13: ಪಾಕಿಸ್ಥಾನ- ಅಫ್ಘಾನಿಸ್ತಾನ ಗಡಿಭಾಗದ ಖೈಬರ್ ಪಂಕ್ತುಖ್ವಾ ಪ್ರಾಂತ್ಯದಲ್ಲಿದ್ದ ಅತಿ ಪುರಾತನ ಬೃಹತ್ ಹಿಂದು ದೇವಾಲಯವನ್ನು ನೆಲಸಮ ಮಾಡಲಾಗಿದೆ.
ಕೇದಾರನಾಥ ದೇವಾಲಯ ಮಾದರಿಯ ಗೋಪುರವುಳ್ಳ ಬೃಹತ್ ದೇವಸ್ಥಾನ 1947ರಿಂದಲೇ ಪಾಳು ಬಿದ್ದ ಸ್ಥಿತಿಯಲ್ಲಿತ್ತು. ಸ್ವಾತಂತ್ರ್ಯ ಕಾಲದಲ್ಲಿ ಭಾರತ- ಪಾಕಿಸ್ಥಾನ ವಿಂಗಡಣೆಯಾದಾಗ ಎರಡೂ ರಾಷ್ಟ್ರಗಳಿಂದ ಬಹಳಷ್ಟು ಹಿಂದು- ಮುಸ್ಲಿಮರು ಅತ್ತಿತ್ತ ವಲಸೆ ಹೋಗಿದ್ದರು. ಈ ದೇವಸ್ಥಾನಕ್ಕೆ ಸಂಬಂಧಪಟ್ಟ ಹಿಂದುಗಳೂ ಪಾಕಿಸ್ತಾನ ಬಿಟ್ಟು ಭಾರತಕ್ಕೆ ಬಂದಿದ್ದರು. ದೇವಸ್ಥಾನ ಮತ್ತು ಗೋಪುರ ಮಾತ್ರ ಹಾಗೆಯೇ ಉಳಿದುಕೊಂಡಿತ್ತು. ಸ್ಥಳೀಯ ಕಿಡಿಗೇಡಿಗಳು ಗೋಪುರದ ಇಟ್ಟಿಗೆ, ಕಲ್ಲುಗಳನ್ನು ಒಂದೊಂದಾಗಿಯೇ ಒಡೆದು ವಿಘ್ನಗೊಳಿಸಿದ್ದರೂ ಬೃಹತ್ ದೇವಸ್ಥಾನದ ಮಾದರಿ ಉಳಿದಿತ್ತು.
ಲಾಂಡಿ ಕೋಟಾಲ್ ಬಾಝಾರ್ ಎನ್ನುವ ಪ್ರದೇಶದಲ್ಲಿದ್ದ ದೇವಸ್ಥಾನವನ್ನು ಇದೀಗ ಪೂರ್ತಿ ನೆಲಸಮ ಮಾಡಲಾಗಿದ್ದು, ಅಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಸ್ಥಳೀಯರು ಮುಂದಾಗಿದ್ದಾರೆ. 1992ರಲ್ಲಿ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನೆಲಸಮ ಮಾಡಿದ್ದಕ್ಕೆ ಪ್ರತಿಯಾಗಿ ಈ ದೇವಸ್ಥಾನವನ್ನೂ ಕೆಡವಿ ಹಾಕಲು ಕಿಡಿಗೇಡಿಗಳು ಮುಂದಾಗಿದ್ದರು. ಕಲ್ಲಿನ ಬೃಹತ್ ಶಿಲಾಮಂದಿರ ಆಗಿದ್ದರಿಂದ ಅರೆಬರೆಯಾಗಿ ದೇವಸ್ಥಾನದ ಗೋಪುರ ಉಳಿದುಕೊಂಡಿತ್ತು. ಸ್ಥಳೀಯರು ಖೈಬರ್ ಟೆಂಪಲ್ ಎಂದೇ ಉಲ್ಲೇಖ ಮಾಡುತ್ತಿದ್ದರು.
ಪ್ರಾಚ್ಯವಸ್ತು ಇಲಾಖೆಗೆ ಸಂಬಂಧಪಟ್ಟ ಸ್ಮಾರಕಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕೆಂದು ಪಾಕಿಸ್ತಾನದಲ್ಲಿಯೂ ಕಾನೂನು ಇದ್ದರೂ ಅದನ್ನು ಪಾಲನೆ ಮಾಡುತ್ತಿಲ್ಲ ಎಂದು ಪಾಕಿಸ್ತಾನ್ ಹಿಂದು ಮಂದಿರ ಮ್ಯಾನೇಜ್ಮೆಂಟಿನ ಹಾರೂನ್ ಸಾರಬ್ದಿಯಾಲ್ ಹೇಳಿದ್ದಾರೆ. ಸ್ಥಳೀಯ ಜಿಲ್ಲಾಡಳಿತ ದಾಖಲೆಯಲ್ಲಿ ಇಂದು ಮಂದಿರವೆಂದು ಉಲ್ಲೇಖ ಇಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪಾಕಿಸ್ತಾನದ ಡಾನ್ ಪತ್ರಿಕೆ ಮತ್ತು ಭಾರತದ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
A historical Hindu temple near the Pakistan-Afghanistan border has been demolished and construction for a commercial complex has started at the site in the Khyber Pakhtunkhwa province that was closed since 1947 when the original occupants migrated to India.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm