ಬ್ರೇಕಿಂಗ್ ನ್ಯೂಸ್
13-04-24 09:17 pm HK NEWS ದೇಶ - ವಿದೇಶ
ನವದೆಹಲಿ, ಎ.13: ಪಾಕಿಸ್ಥಾನ- ಅಫ್ಘಾನಿಸ್ತಾನ ಗಡಿಭಾಗದ ಖೈಬರ್ ಪಂಕ್ತುಖ್ವಾ ಪ್ರಾಂತ್ಯದಲ್ಲಿದ್ದ ಅತಿ ಪುರಾತನ ಬೃಹತ್ ಹಿಂದು ದೇವಾಲಯವನ್ನು ನೆಲಸಮ ಮಾಡಲಾಗಿದೆ.
ಕೇದಾರನಾಥ ದೇವಾಲಯ ಮಾದರಿಯ ಗೋಪುರವುಳ್ಳ ಬೃಹತ್ ದೇವಸ್ಥಾನ 1947ರಿಂದಲೇ ಪಾಳು ಬಿದ್ದ ಸ್ಥಿತಿಯಲ್ಲಿತ್ತು. ಸ್ವಾತಂತ್ರ್ಯ ಕಾಲದಲ್ಲಿ ಭಾರತ- ಪಾಕಿಸ್ಥಾನ ವಿಂಗಡಣೆಯಾದಾಗ ಎರಡೂ ರಾಷ್ಟ್ರಗಳಿಂದ ಬಹಳಷ್ಟು ಹಿಂದು- ಮುಸ್ಲಿಮರು ಅತ್ತಿತ್ತ ವಲಸೆ ಹೋಗಿದ್ದರು. ಈ ದೇವಸ್ಥಾನಕ್ಕೆ ಸಂಬಂಧಪಟ್ಟ ಹಿಂದುಗಳೂ ಪಾಕಿಸ್ತಾನ ಬಿಟ್ಟು ಭಾರತಕ್ಕೆ ಬಂದಿದ್ದರು. ದೇವಸ್ಥಾನ ಮತ್ತು ಗೋಪುರ ಮಾತ್ರ ಹಾಗೆಯೇ ಉಳಿದುಕೊಂಡಿತ್ತು. ಸ್ಥಳೀಯ ಕಿಡಿಗೇಡಿಗಳು ಗೋಪುರದ ಇಟ್ಟಿಗೆ, ಕಲ್ಲುಗಳನ್ನು ಒಂದೊಂದಾಗಿಯೇ ಒಡೆದು ವಿಘ್ನಗೊಳಿಸಿದ್ದರೂ ಬೃಹತ್ ದೇವಸ್ಥಾನದ ಮಾದರಿ ಉಳಿದಿತ್ತು.
ಲಾಂಡಿ ಕೋಟಾಲ್ ಬಾಝಾರ್ ಎನ್ನುವ ಪ್ರದೇಶದಲ್ಲಿದ್ದ ದೇವಸ್ಥಾನವನ್ನು ಇದೀಗ ಪೂರ್ತಿ ನೆಲಸಮ ಮಾಡಲಾಗಿದ್ದು, ಅಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಸ್ಥಳೀಯರು ಮುಂದಾಗಿದ್ದಾರೆ. 1992ರಲ್ಲಿ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನೆಲಸಮ ಮಾಡಿದ್ದಕ್ಕೆ ಪ್ರತಿಯಾಗಿ ಈ ದೇವಸ್ಥಾನವನ್ನೂ ಕೆಡವಿ ಹಾಕಲು ಕಿಡಿಗೇಡಿಗಳು ಮುಂದಾಗಿದ್ದರು. ಕಲ್ಲಿನ ಬೃಹತ್ ಶಿಲಾಮಂದಿರ ಆಗಿದ್ದರಿಂದ ಅರೆಬರೆಯಾಗಿ ದೇವಸ್ಥಾನದ ಗೋಪುರ ಉಳಿದುಕೊಂಡಿತ್ತು. ಸ್ಥಳೀಯರು ಖೈಬರ್ ಟೆಂಪಲ್ ಎಂದೇ ಉಲ್ಲೇಖ ಮಾಡುತ್ತಿದ್ದರು.
ಪ್ರಾಚ್ಯವಸ್ತು ಇಲಾಖೆಗೆ ಸಂಬಂಧಪಟ್ಟ ಸ್ಮಾರಕಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕೆಂದು ಪಾಕಿಸ್ತಾನದಲ್ಲಿಯೂ ಕಾನೂನು ಇದ್ದರೂ ಅದನ್ನು ಪಾಲನೆ ಮಾಡುತ್ತಿಲ್ಲ ಎಂದು ಪಾಕಿಸ್ತಾನ್ ಹಿಂದು ಮಂದಿರ ಮ್ಯಾನೇಜ್ಮೆಂಟಿನ ಹಾರೂನ್ ಸಾರಬ್ದಿಯಾಲ್ ಹೇಳಿದ್ದಾರೆ. ಸ್ಥಳೀಯ ಜಿಲ್ಲಾಡಳಿತ ದಾಖಲೆಯಲ್ಲಿ ಇಂದು ಮಂದಿರವೆಂದು ಉಲ್ಲೇಖ ಇಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪಾಕಿಸ್ತಾನದ ಡಾನ್ ಪತ್ರಿಕೆ ಮತ್ತು ಭಾರತದ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
A historical Hindu temple near the Pakistan-Afghanistan border has been demolished and construction for a commercial complex has started at the site in the Khyber Pakhtunkhwa province that was closed since 1947 when the original occupants migrated to India.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm